ರಷ್ಯಾ ವಿಮಾನ ಪತನ: ಕನಿಷ್ಠ 16 ಮಂದಿ ಸಾವು
ಮಾಸ್ಕೋ, ಅಕ್ಟೋಬರ್ 10: ರಷ್ಯಾದ ವಿಮಾನವೊಂದು ಪತನವಾಗಿದ್ದು ಈ ವಿಮಾನ ಅಪಘಾತದಿಂದ ಕನಿಷ್ಠ 16 ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.
ಸುಮಾರು 23 ಮಂದಿ ಈ ರಷ್ಯಾದ ವಿಮಾನದಲ್ಲಿ ಇದ್ದರು ಎಂದು ಹೇಳಲಾಗಿದೆ. ಈ ಪೈಕಿ ಕನಿಷ್ಠ 16 ಮಂದಿ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಇನ್ನು ಏಳು ಮಂದಿಗೆ ಗಾಯವಾಗಿದೆ ಎಂದು ಕೂಡಾ ವರದಿಯು ಹೇಳಿದೆ.
ರಷ್ಯಾದ ಮೆನ್ಜೆಲಿನ್ಸ್ಕ್ ನಗರದ ಟಾಟರ್ಜ್ತಾನ್ ಎಂಬಲ್ಲಿ 23 ಮಂದಿ ಪ್ರಯಾಣಿಕರು ಇದ್ದ ಲೆಟ್ ಎಲ್-410 ಟರ್ಬೋಲೆಟ್ ವಿಮಾನ ಪತನಗೊಂಡಿದೆ ಎಂದು ತಿಳಿದು ಬಂದಿದೆ. ಇಂದು ಮುಂಜಾನೆ ಸುಮಾರು 9:11 (ಮಾಸ್ಕೋ ಸಮಯ) ಕ್ಕೆ ಈ ಲೆಟ್ ಎಲ್-410 ಟರ್ಬೋಲೆಟ್ ವಿಮಾನ ಪತನಗೊಂಡಿದೆ ಎಂದು ವರದಿಯು ಮಾಹಿತಿ ನೀಡಿದೆ.

ರಷ್ಯಾದ ಲೆಟ್ ಎಲ್-410 ಟರ್ಬೋಲೆಟ್ ವಿಮಾನದಲ್ಲಿದ್ದ 23 ಮಂದಿ ಪ್ರಯಾಣಿಕರ ಪೈಕಿ 21 ಮಂದಿ ಡೈವರ್ಗಳಾಗಿದ್ದರು ಎಂದು ಹೇಳಲಾಗಿದೆ. ಈ ವಿಮಾನ ದುರಂತದಲ್ಲಿ ಏಳು ಮಂದಿಗೆ ಗಾಯವಾಗಿದೆ.
ಈ ವಿಮಾನ ಪತನಗೊಂಡ ಚಿತ್ರವನ್ನು ರಷ್ಯಾದ ತುರ್ತು ಪರಿಸ್ಥಿತಿ ಸಚಿವಾಲಯವು ಬಿಡುಗಡೆ ಮಾಡಿದ್ದು, ಬದುಕುಳಿದ ಏಳು ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ವಿವರಿಸಿದೆ.
"ರಷ್ಯಾದ ಮೆನ್ಜೆಲಿನ್ಸ್ಕ್ ನಗರದ ಟಾಟರ್ಜ್ತಾನ್ ಎಂಬಲ್ಲಿ ಪತನಗೊಂಡ ಈ ರಷ್ಯಾದ ವಿಮಾನವು ಸಂಪೂರ್ಣವಾಗಿ ಜಖಂ ಆಗಿದೆ. ಬದುಕುಳಿದ ಏಳು ಮಂದಿಯನ್ನು ಕೂಡಾ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಈ ಪೈಕಿ ಓರ್ವ ಗಾಯಾಳುವಿನ ಸ್ಥಿತಿಯು ಚಿಂತಾಜನಕವಾಗಿದೆ," ಎಂದು ರಷ್ಯಾ ಆರೋಗ್ಯ ಸಚಿವಾಲಯ ತಿಳಿಸಿದೆ.
ಇನ್ನು ಈ ಬಗ್ಗೆ ಅಲ್ಲಿನ ಸ್ಥಳೀಯ ಮಾಧ್ಯಮಗಳು ಮಾಡಿದ ವರದಿಗಳ ಪ್ರಕಾರ ಈ ವಿಡಿಯೋವು ರಷ್ಯಾದ ಸೇನೆ, ನಾಗರಿಕ ಯಾನ ಮತ್ತು ನೌಕಾಪಡೆಗೆ ಸಹಾಯ ಮಾಡಲು ಇರುವ ಒಂದು ಸ್ವಯಂ ಸೇವಕ ಸಂಸ್ಥೆಗೆ ಸೇರಿದ್ದು ಆಗಿದೆ. ಹಾಗೆಯೇ ಇದು ಕ್ರೀಡಾ ಮತ್ತು ರಕ್ಷಣಾ ಸಂಸ್ಥೆಯಾಗಿದೆ ಎಂದು ಕೂಡಾ ರಷ್ಯಾದ ಸ್ಥಳೀಯ ಮಾಧ್ಯಮಗಳು ವಿವರಿಸಿದೆ.
ಈ ವರ್ಷದ ಆರಂಭದಲ್ಲಿ ರಷ್ಯಾದಲ್ಲಿ ಎರಡು ಎಲ್-410 ವಿಮಾನಗಳು ಪತನವಾಗಿದೆ.
(ಒನ್ಇಂಡಿಯಾ ಸುದ್ದಿ)
-
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
ಬೆಂಗಳೂರಿನಲ್ಲಿ ನಡೆಯುವ ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯದ ಟಿಕೆಟ್ ಬುಕ್ ಮಾಡುವುದ್ಹೇಗೆ? ಇಲ್ಲಿದೆ ಮಾಹಿತಿ












Click it and Unblock the Notifications