ಸೌದಿಯಲ್ಲಿ 'ಕುಬೇರ' ತಲಾಲ್ ಸೇರಿ ಹಲವರ ಬಂಧನ
ರಿಯಾದ್, ನವೆಂಬರ್ 05 : ವಿಶ್ವದ ಕುಬೇರ ಉದ್ಯಮಿ ಪ್ರಿನ್ಸ್ ಅಲ್ವಲೀದ್ ಬಿನ್ ತಲಾಲ್, 10 ರಾಜಕುವರರು, ನಾಲ್ವರು ಮಂತ್ರಿಗಳು ಮತ್ತು ಹತ್ತಾರು ಸಚಿವರುಗಳನ್ನು ಬಂಧಿಸಿರುವುದಾಗಿ ಸೌದಿ ಅರೇಬಿಯಾ ಪ್ರಕಟಿಸಿದೆ.
ರಾಜ ಸಲ್ಮಾನ್ ಬಿನ್ ಅಬ್ದುಲ್ಲಾಜಿಜ್ ಅಲ್-ಸೌದ್ ಅವರು ಭ್ರಷ್ಟವಿರೋಧಿ ಸಮಿತಿಯನ್ನು ರಚಿಸಿದ ಕೆಲವೇ ಗಂಟೆಗಳಲ್ಲಿ ರಾಜಮನೆತನದವರ ಮೇಲೆ ಮುಗಿಬಿದ್ದಿದ್ದು, ಇದು ವಿಶ್ವದ ಪ್ರಮುಖ ಹಣಕಾಸು ಕೇಂದ್ರಗಳಲ್ಲಿ ತಲ್ಲಣ ಸೃಷ್ಟಿಸಬಹುದು ಎಂದು ಅಲ್ ಅರೇಬಿಯಾ ವರದಿ ಮಾಡಿದೆ.

ಜಗತ್ತಿನ ಅತ್ಯಂತ ಶ್ರೀಮಂತ ಉದ್ಯಮಿಗಳಲ್ಲಿ ಒಂದಾಗಿರುವ ಅಲ್ವಲೀದ್ ಬಿನ್ ತಲಾಲ್ ಅವರು, ಕಿಂಗಡಂ ಹೋಲ್ಡಿಂಗ್ ಮೇಲೆ ನಿಯಂತ್ರಣ ಹೊಂದಿದ್ದು, ನ್ಯೂಸ್ ಕಾರ್ಪ್, ಸಿಟಿಗ್ರೂಪ್, ಟ್ವಿಟ್ಟರ್ ಮತ್ತಿತರ ಖ್ಯಾತನಾಮ ಸಂಸ್ಥೆಗಳಲ್ಲಿ ತಲಾಲ್ ಹೂಡಿಕೆ ಮಾಡಿದ್ದಾರೆ. ಅಲ್ಲದೆ, ಅರಬ್ ರಾಷ್ಟ್ರಗಳಲ್ಲಿ ಸೆಟಲೈಟ್ ಟೆಲಿವಿಷನ್ ನೆಟ್ವರ್ಕ್ ಮೇಲೆಯೂ ನಿಯಂತ್ರಣ ಹೊಂದಿದ್ದಾರೆ.
ಕಳೆದೊಂದು ದಶಕದಿಂದ ಸೌದಿ ಅರೇಬಿಯಾದಲ್ಲಿ ಅಭಿವೃದ್ಧಿ ಕುಂಠಿತೊಂಡಿದ್ದು, ಕೆಲವರು ವೈಯಕ್ತಿಕ ಹಿತಾಸಕ್ತಿಯಿಂದ ಅಧಿಕಾರಿ ದುರ್ಬಳಕೆ ಮಾಡಿಕೊಂಡು ಸಾರ್ವಜನಿಕರ ಹಣವನ್ನು ಲಪಟಾಯಿಸುತ್ತಿರುವ ಹಿನ್ನೆಲೆಯಲ್ಲಿ ಕಿಂಗ್ ಸಲ್ಮಾನ್ ಭ್ರಷ್ಟವಿರೋಧಿ ಅಭಿಯಾನವನ್ನು ಆರಂಭಿಸಿದ್ದಾರೆ.

ಈ ಭ್ರಷ್ಟವಿರೋಧಿ ಸಮಿತಿಯ ನೇತೃತ್ವವನ್ನು ಕೇವಲ 32 ವರ್ಷದವರಾಗಿರುವ ರಾಜಕುವರ ಮೊಹಮ್ಮದ್ ಬಿನ್ ಸಲ್ಮಾನ್ ಅವರು ವಹಿಸಿಕೊಂಡಿದ್ದಾರೆ. ಅವರಾಗಲೆ ಸೌದಿಯ ಸೇನೆ, ವಿದೇಶಾಂಗ ಖಾತೆ, ಆರ್ಥಿಕ ಮತ್ತು ಸಾಮಾಜಿಕ ನೀತಿ ರೂಪಿಸುವಲ್ಲಿ ತಮ್ಮ ಕೈಚಳಕ ತೋರಲು ಆರಂಭಿಸಿದ್ದಾರೆ.
ದೇಶವನ್ನು ಅಮೂಲಾಗ್ರವಾಗಿ ಪರಿವರ್ತಿಸಲು ಪಣತೊಟ್ಟಿರುವ ರಾಜಕುವರ ಸಲ್ಮಾನ್, ಮಹಿಳೆಯರಿಗೆ ವಾಹನ ಚಾಲನೆ ಅವಕಾಶ ನೀಡುವುದರ ಜೊತೆಗೆ ಈಗಾಗಲೆ ಹಲವಾರು ಬದಲಾವಣೆಗಳನ್ನು ಜಾರಿಗೆ ತಂದಿದ್ದು, ಅದರ ಮುಂದುವರಿದ ಭಾಗವಾಗಿ ಭ್ರಷ್ಟ ರಾಜಮನೆತನದವರನ್ನು ಹೆಡೆಮುರಿ ಕಟ್ಟಿದ್ದಾರೆ.
-
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
Resort: ಕರ್ನಾಟಕದಲ್ಲಿ ಶುರುವಾಯ್ತು ರೆಸಾರ್ಟ್ ರಾಜಕೀಯ: ‘ಅವರು ನಮ್ಮ ಅತಿಥಿಗಳು’ ಎಂದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ -
Horoscope March 13: ಈ ರಾಶಿಯವರ ಬದುಕಲ್ಲಿ ಸಕಾರಾತ್ಮಕ ಬೆಳವಣಿಗೆ, ಅಧಿಕ ಲಾಭ; ದಿನ ಭವಿಷ್ಯ












Click it and Unblock the Notifications