ಅರಬ್ ಬಿಕ್ಕಟ್ಟು, ಕತಾರ್ ಜತೆಗಿನ ರಾಜತಾಂತ್ರಿಕ ಸಂಬಂಧಕ್ಕೆ ಬ್ರೇಕ್
ದೋಹಾ, ಜೂನ್ 5: ಮಧ್ಯಪೂರ್ವ ದೇಶಗಳಲ್ಲಿ ಮತ್ತೊಮ್ಮೆ ಬಿಕ್ಕಟ್ಟು ಉಲ್ಬಣಿಸಿದೆ. ಭಯೋತ್ಪಾದನೆಗೆ ಕತಾರ್ ಬೆಂಬಲ ನೀಡುತ್ತಿದೆ ಎಂಬ ಕಾರಣವನ್ನು ಮುಂದೊಡ್ಡಿ ಇತರ ಅರಬ್ ದೇಶಗಳಾದ ಸೌದಿ ಅರೇಬಿಯಾ, ಈಜಿಪ್ಟ್, ಬಹ್ರೇನ್ ಮತ್ತು ಯುನೈಟೆಡ್ ಅರಬ್ ಎಮಿರೇಟ್ಸ್ ರಾಜತಾಂತ್ರಿಕ ಸಂಬಂಧವನ್ನು ಕೊನೆಗೊಳಿಸಿವೆ.
ಕತಾರ್ ದೇಶ ಮುಸ್ಲಿಂ ಬ್ರದರ್ ಹುಡ್ ಸೇರಿದಂತೆ ಭಯೋತ್ಪಾದಕ ಸಂಘಟನೆಗಳಿಗೆ ಬೆಂಬಲ ನೀಡುತ್ತಿದೆ. ಜತೆಗೆ ಅರಬ್ ಪ್ರಾಂತ್ಯದಲ್ಲಿ ಅಸ್ಥಿರತೆ ಉಂಟು ಮಾಡುತ್ತಿದೆ ಎಂದು ಆರೋಪಿಸಿ ಈ ದೇಶಗಳು ಕತಾರ್ ಜತೆಗಿನ ಸಂಬಂಧ ಮುರಿದುಕೊಳ್ಳಲು ನಿರ್ಧರಿಸಿವೆ.

ಸೌದಿ ಅರೇಬಿಯಾ ತನ್ನ ಗಡಿ, ವಾಯು ಮಾರ್ಗ ಮತ್ತು ಜಲ ಮಾರ್ಗಗಳನ್ನು ಕತಾರ್ ಪಾಲಿಗೆ ಮುಚ್ಚಿದೆ. ದೇಶವನ್ನು ಭಯೋತ್ಪಾದನೆಯಿಂದ ರಕ್ಷಿಸುವುದೇ ಈ ನಿರ್ಧಾರಕ್ಕೆ ಕಾರಣ ಎಂದು ಸೌದಿ ಹೇಳಿದೆ.
ಇನ್ನು ಈಜಿಪ್ಟ್ ಕೂಡಾ ತನ್ನ ವಾಯುಮಾರ್ಗ ಹಾಗೂ ಬಂದರುಗಳನ್ನು ಕತಾರ್ ಪಾಲಿಗೆ ಮುಚ್ಚಿದೆ. ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ಕತಾರ್ ರಾಜತಾಂತ್ರಿಕ ಸಿಬ್ಬಂದಿಗಳಿಗೆ ದೇಶ ಬಿಡಲು 48 ಗಂಟೆಗಳ ಗಡುವು ನೀಡಿದೆ. ಬಹ್ರೇನ್ ಕೂಡಾ ರಾಯತಾಂತ್ರಿಕ ಸಿಬ್ಬಂದಿಗಳನ್ನು ಜಾಗ ಖಾಲಿ ಮಾಡಲು 48 ಗಂಟೆಗಳ ಸಮಯ ನೀಡಿದ್ದು ಕತಾರ್ ನಾಗರಿಕರು 14 ದಿನದೊಳಗೆ ದೇಶ ಬಿಟ್ಟು ಹೋಗುವಂತೆ ಸೂಚಿಸಿದೆ.
ಇನ್ನು ಯೆಮೆನಿನಲ್ಲಿ ಹೌತಿ ಬಂಡುಕೋರರ ವಿರುದ್ಧ ಹೋರಾಡುತ್ತಿರುವ ಸೌದಿ ಅರೇಬಿಯಾ ನೇತೃತ್ವದ ಗುಂಪಿನಿಂದಲೂ ಕತಾರ್ ದೇಶವನ್ನು ಹೊರ ಹಾಕಲಾಗಿದೆ.
ದೋಹಾ (ಕತಾರ್ ರಾಜಧಾನಿ) ನಡೆಗಳು 'ಭಯೋತ್ಪಾದನಗೆ ಶಕ್ತಿ' ನೀಡುತ್ತಿವೆ. 'ಅಲ್ ಖೈದಾ ಮತ್ತು ಡಾಯಿಷ್ (ಇಸ್ಲಾಮಿಕ್ ಸ್ಟೇಟ್ -ಐಸಿಸ್)' ಉಗ್ರ ಸಂಘಟನೆಗಳಿಗೆ ಬೆಂಬಲ ನೀಡುತ್ತಿದೆ ಎಂದು ಈ ನಾಲ್ಕು ದೇಶಗಳು ದೂರಿವೆ.
ವಿಮಾನಯಾನ ರದ್ದು
ಅರಬ್ ಬಿಕ್ಕಟ್ಟಿನ ಬೆನ್ನಿಗೆ ಮಂಗಳವಾರದಿಂದ ಕತಾರಿಗೆ ಎಲ್ಲಾ ವಿಮಾನಯಾನಗಳನ್ನು ರದ್ದುಪಡಿಸುವುದಾಗಿ ಎಮಿರೇಟ್ಸ್ ಏರ್ಲೈನ್ಸ್ ಹೇಳಿದೆ.
ಇದೇ ವೇಳೆ ಅಬುದಾಭಿ ಮೂಲದ ವಿಮಾನಯಾನ ಸಂಸ್ಥೆ ಎತಿಹಾದ್ ಕೂಡ ಕತಾರಿಗೆ ವಿಮಾನಯಾನ ನಿಲ್ಲಿಸುವುದಾಗಿ ಹೇಳಿದೆ.
-
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ -
ಆರ್ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ಕೇವಲ 42 ಎಸೆತಗಳಲ್ಲಿ 94 ರನ್ ಸಿಡಿಸಿದ ಅಭಿಷೇಕ್ ಶರ್ಮಾ: ಭಾರೀ ವೈರಲ್












Click it and Unblock the Notifications