ಸೌದಿ ಅರೇಬಿಯಾದ ಯುವರಾಜನಿಗೆ ಗಲ್ಲು ಶಿಕ್ಷೆ
ರಿಯಾದ್, ಅಕ್ಟೋಬರ್ 20: ವ್ಯಕ್ತಿಯೊಬ್ಬನನ್ನು ಗುಂಡಿಟ್ಟು ಕೊಲೆ ಮಾಡಿದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಸೌದಿ ಅರೇಬಿಯಾದ ರಾಜ ಮನೆತನದ ಯುವರಾಜನನ್ನು ನೇಣಿಗೇರಿಸಲಾಗಿದೆ.
ಆದೆಲ್ ಅಲ್ ಮಹೆಮಿದೆ ಎಂಬ ಸೌದಿ ನಾಗರಿಕನನ್ನು ಗುಂಡಿಕ್ಕಿ ಹತ್ಯೆ ಮಾಡಿದ್ದಕ್ಕಾಗಿ ಯುವರಾಜ ತುರ್ಕಿ ಬಿನ್ ಸೌದ್ ಅಲ್ ಕಬೀರ್ ಅವರಿಗೆ ಮರಣ ದಂಡನೆ ಶಿಕ್ಷೆ ವಿಧಿಸಲಾಗಿತ್ತು. ಈ ವಿಧಿ ವಿಧಾನ ಪೂರ್ಣಗೊಂಡಿದೆ ಎಂದು ಸೌದಿ ಅರೇಬಿಯಾದ ಆಂತರಿಕ ಸಚಿವಾಲಯ ತನ್ನ ಹೇಳಿಕೆಯಲ್ಲಿ ತಿಳಿಸಿದೆ.

ಸೌದಿಯ ಯುವರಾಜ ತನ್ನ ಸ್ನೇಹಿತನನ್ನು ಹತ್ಯೆ ಮಾಡಿದ ಆರೋಪ ಸಾಬೀತಾಗಿದೆ ಎಂದು ಯುವರಾಜನ ಹೆಸರನ್ನು ನಮೂದಿಸದೆ ನವೆಂಬರ್ 2014ರಲ್ಲಿ ಅರಬ್ ನ ಪತ್ರಿಕೆಯೊಂದು ವರದಿ ಮಾಡಿತ್ತು. ನಂತರ ಈ ಬಗ್ಗೆ ತನಿಖೆ ನಡೆಸಿದಾಗ ಯುವರಾಜ ತಪ್ಪು ಎಸಗಿಸುರುವುದು ಸಾಬೀತಾಗಿತ್ತು,
2012ರ ಡಿಸೆಂಬರ್ನಲ್ಲಿ ಸಮೀಪದ ಕ್ಯಾಂಪ್ನಲ್ಲಿ ಯುವರಾಜ ಮತ್ತು ಆತನ ಸ್ನೇಹಿತನ ನಡುವೆ ವಾಗ್ವಾದ ನಡೆದಿತ್ತು. ಆ ನಂತರ ಯುವರಾಜ ಆತನಿಗೆ ಗುಂಡಿಟ್ಟು ಹತ್ಯೆ ಮಾಡಿದ್ದ ಮತ್ತು ಮತ್ತೋರ್ವನಿಗೆ ಗುಂಡೇಟು ತಗುಲಿತ್ತು. ನಂತರ ಹತ್ಯೆಗೀಡಾದ ವ್ಯಕ್ತಿ ತನ್ನ ಸ್ನೇಹಿತ ಎಂದು ಪೊಲೀಸ ಮುಂದೆ ಯುವರಾಜ ಹೇಳಿಕೊಂಡಿದ್ದ.
ಸೌದಿ ಅರೇಬಿಯಾದಲ್ಲಿ ನ್ಯಾಯಾಂಗ ವ್ಯವಸ್ಥೆ ಕಟ್ಟುನಿಟ್ಟಾಗಿದ್ದು, 2015ರಲ್ಲಿ 158 ಜನರಿಗೆ ಮರಣ ದಂಡನೆ ಶಿಕ್ಷೆ ವಿಧಿಸಲಾಗಿತ್ತು. ಈ ವರ್ಷ ಇದುವರೆಗೂ 134 ಜನರಿಗೆ ಮರಣ ದಂಡನೆ ಶಿಕ್ಷೆ ವಿಧಿಸಲಾಗಿದೆ. ಕೊಲೆ, ಮಾದಕ ವಸ್ತು ಕಳ್ಳ ಸಾಗಣೆ, ದರೋಡೆ, ಅತ್ಯಾಚರ ಪ್ರಕರಣಗಳಲ್ಲಿ ಭಾಗಿಯಾದವರಿಗೆ ಮರಣ ದಂಡನೆ ಶಿಕ್ಷೆ ವಿಧಿಸಲಾಗುತ್ತದೆ.
-
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ -
ಆರ್ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ಕೇವಲ 42 ಎಸೆತಗಳಲ್ಲಿ 94 ರನ್ ಸಿಡಿಸಿದ ಅಭಿಷೇಕ್ ಶರ್ಮಾ: ಭಾರೀ ವೈರಲ್












Click it and Unblock the Notifications