ಕೊರೊನಾ ಲಸಿಕೆ ಪಡೆದವರಿಗಷ್ಟೇ ಮೆಕ್ಕಾ ಭೇಟಿಗೆ ಅವಕಾಶ
ರಿಯಾದ್, ಏಪ್ರಿಲ್ 6: ಮೆಕ್ಕಾ-ಮದೀನಾಗೆ ಭೇಟಿ ನೀಡುವವರು ಕಡ್ಡಾಯವಾಗಿ ಕೊರೊನಾ ಲಸಿಕೆ ಪಡೆದಿರಬೇಕು ಎಂದು ಸೌದಿ ಅರೇಬಿಯಾ ಸರ್ಕಾರ ಹೇಳಿದೆ.
ಜಗತ್ತಿನಾದ್ಯಂತ ಮಾರಕ ಕೊರೊನಾ ವೈರಸ್ ಹಾವಳಿ ಮತ್ತೆ ಹೆಚ್ಚಾಗಿರುವಂತೆಯೇ ಇತ್ತ ಸೌದಿ ಅರೇಬಿಯಾ ಸರ್ಕಾರ ಕೋವಿಡ್-19 ಲಸಿಕೆ ಪಡೆದವರಿಗಷ್ಟೇ ಮೆಕ್ಕಾ-ಮದೀನಾ ಪ್ರವೇಶಕ್ಕೆ ಅನುಮತಿ ನೀಡಲಾಗುತ್ತದೆ ಎಂದಿದೆ.
ಸೌದಿ ಅರೇಬಿಯಾದಲ್ಲಿ ಕೋವಿಡ್ನಿಂದ ಈವರೆಗೆ 3,93,000ಕ್ಕೂ ಹೆಚ್ಚು ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು 6,700 ಸಾವು ಸಂಭವಿಸಿದೆ. ಈ ಮಧ್ಯೆ, 50 ಲಕ್ಷಕ್ಕೂ ಹೆಚ್ಚು ಜನರಿಗೆ ಕೋವಿಡ್ ಲಸಿಕೆ ನೀಡಲಾಗಿದೆ ಎಂದು ಅಲ್ಲಿನ ಆರೋಗ್ಯ ಸಚಿವಾಲಯ ತಿಳಿಸಿದೆ.
ಪವಿತ್ರ ರಂಜಾನ್ ತಿಂಗಳಿನಿಂದ ಆರಂಭವಾಗುವ ಮೆಕ್ಕಾ, ಮದೀನಾ ಯಾತ್ರೆ ಸಂದರ್ಭದಲ್ಲಿ ಕೋವಿಡ್ ಸೋಂಕಿನ ಹಾವಳಿ ತಪ್ಪಿಸುವ ಉದ್ದೇಶದಿಂದ ಸೌದಿ ಅರೇಬಿಯಾ ಸರ್ಕಾರ ಕಠಿಣ ನಿಲುವು ತಳೆದಿದೆ.
ಅದರಂತೆ ಮೆಕ್ಕಾ, ಮದೀನಾ ಸೇರಿ ಪವಿತ್ರ ಕ್ಷೇತ್ರಗಳ ಯಾತ್ರೆಗೆ ಕೋವಿಡ್-19 ಲಸಿಕೆ ಹಾಕಿಸಿಕೊಂಡವರು ಮತ್ತು ಪ್ರತಿಕಾಯಗಳನ್ನು ಹೊಂದಿರುವವರಿಗಷ್ಟೇ ಅವಕಾಶ ನೀಡಲಾಗುವುದು ಎಂದು ಹೇಳಿದೆ.

ಕಡಿಮೆ ಯಾತ್ರಾರ್ಥಿಗಳ ಭೇಟಿ
ಇಡೀ ಇತಿಹಾಸದಲ್ಲೇ ಮೊದಲ ಬಾರಿಗೆ ಕಳೆದ ವರ್ಷ ಕೊರೊನಾ ಸೋಂಕಿನಿಂದಾಗಿ ಅತಿ ಕಡಿಮೆ ಯಾತ್ರಾರ್ಥಿಗಳು ಭೇಟಿ ನೀಡಿದ್ದರು ಎನ್ನುವ ಮಾಹಿತಿ ಲಭ್ಯವಾಗಿದೆ. ಈ ಬಗ್ಗೆ ಸೌದಿ ಅರೇಬಿಯಾದ ಹಜ್ ಮತ್ತು ಉಮ್ರಾ (ಯಾತ್ರೆ) ಸಚಿವಾಲಯ ಮಾಹಿತಿ ನೀಡಿದ್ದು, ಕೊರೋನಾ ಸಾಂಕ್ರಾಮಿಕದಿಂದಾಗಿ ಕಳೆದ ವರ್ಷ ಅತ್ಯಂತ ಕಡಿಮೆ ಸಂಖ್ಯೆಯಲ್ಲಿ ಯಾತ್ರಾರ್ಥಿಗಳಿಗೆ ಅವಕಾಶ ನೀಡಲಾಗಿತ್ತು ಎಂದು ಹೇಳಿದೆ. ಮೂಲಗಳ ಪ್ರಕಾರ ಸೌದಿ ಅರೇಬಿಯಾದ 10,000 ಮುಸ್ಲಿಂ ನಿವಾಸಿಗಳಿಗೆ ಮಾತ್ರ ಭಾಗವಹಿಸಲು ಅನುಮತಿ ನೀಡಲಾಗಿತ್ತು. ಆದರೆ ಪ್ರತೀ ವರ್ಷ ವಿಶ್ವಾದ್ಯಂತ 2.5 ಮಿಲಿಯನ್ ಮುಸ್ಲಿಮರು ಯಾತ್ರೆಯಲ್ಲಿ ಭಾಗಿಯಾಗುತ್ತಿದ್ದರು ಎನ್ನುವ ಮಾಹಿತಿ ಲಭ್ಯವಾಗಿದೆ.

ಕೋವಿಡ್ 19 ಲಸಿಕೆಯ ಎರಡು ಡೋಸ್ ಪಡೆದಿರಬೇಕು
ಕೋವಿಡ್-19 ಲಸಿಕೆಯ ಎರಡು ಡೋಸ್ಗಳನ್ನು ಪಡೆದವರು, ಮೊದಲ ಡೋಸ್ ಪಡೆದು ಕನಿಷ್ಠ 14 ದಿನ ಪೂರೈಸಿದವರು ಮತ್ತು ಈಗಾಗಲೇ ಕೋವಿಡ್ ಸೋಂಕಿತರಾಗಿ ಗುಣಮುಖರಾದವರನ್ನು ಸೋಂಕಿನ ವಿರುದ್ಧ ಪ್ರತಿಕಾಯಗಳನ್ನು ಹೊಂದಿದವರು ಎಂದು ಪರಿಗಣಿಸಲಾಗುವುದು ಎಂದು ಸೌದಿ ಅರೇಬಿಯಾದ ಹಜ್ ಮತ್ತು ಉಮ್ರಾ (ಯಾತ್ರೆ) ಸಚಿವಾಲಯ ಹೇಳಿದೆ.

ವರ್ಷದ ಕೊನೆಯ ಹಜ್ ಯಾತ್ರೆಗೂ ಇದೇ ನಿಯಮ ಅನ್ವಯವಾಗಲಿದೆಯೇ?
ಈ ನೂತನ ನಿಯಮವು ರಂಜಾನ್ ತಿಂಗಳ ಆರಂಭದಿಂದ ಜಾರಿಗೆ ಬರಲಿದ್ದು, ಎಷ್ಟು ಸಮಯದ ವರೆಗೆ ಅಸ್ತಿತ್ವದಲ್ಲಿರಲಿದೆ ಎಂದು ತಿಳಿಸಿಲ್ಲ. ಅಲ್ಲದೆ ವರ್ಷದ ಕೊನೆಯಲ್ಲಿ ಬರುವ ಹಜ್ ಯಾತ್ರೆಗೂ ಇದೇ ನಿಯಮ ಅನ್ವಯವಾಗಲಿದೆಯೇ ಎಂಬುದಕ್ಕೆ ಸರ್ಕಾರ ಸ್ಪಷ್ಟನೆ ನೀಡಿಲ್ಲ.
Recommended Video

ಪ್ರವಾದಿಗಳ ಮಸೀದಿ ಪ್ರವೇಶಕ್ಕೂ ಇದೇ ನಿಯಮ ಅನ್ವಯ
ಇಂಥವರಿಗೆ ಮಾತ್ರ ಯಾತ್ರೆ ಕೈಗೊಳ್ಳಲು, ಮೆಕ್ಕಾ ಹಾಗೂ ಮದೀನಾದ ಭವ್ಯ ಮಸೀದಿಗಳಲ್ಲಿ ಪ್ರಾರ್ಥನೆ ಸಲ್ಲಿಸಲು ಅವಕಾಶ ನೀಡಲಾಗುತ್ತದೆ. ಮದಿನಾದಲ್ಲಿರುವ ಪ್ರವಾದಿಗಳ ಮಸೀದಿ ಪ್ರವೇಶಿಸಬೇಕಿದ್ದರೂ ಇದೇ ನಿಯಮ ಅನ್ವಯವಾಗುತ್ತದೆ ಎಂದು ಸಚಿವಾಲಯ ಸ್ಪಷ್ಟಪಡಿಸಿದೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications