ಎಬೋಲಾ ಭೀತಿ, ಹಜ್ ವೀಸಾ ನಿಷೇಧ
ರಿಯಾದ್, ಆ.8: ಮಾರಕ ಎಬೋಲಾ ವೈರಾಣು ಪೀಡಿತ ರಾಷ್ಟ್ರಗಳಿಂದ ಹಜ್ ಯಾತ್ರೆ ತೆರಳ ಬಯಸುವವರಿಗೆ ಕಹಿ ಸುದ್ದಿ ಇಲ್ಲಿದೆ. ವೈರಾಣು ಪೀಡಿತ ದೇಶಗಳ ಯಾತ್ರಿಗಳಿಗೆ ಹಜ್ ಹಾಗೂ ಉಮ್ರಾಗೆ ತೆರಳಲು ವೀಸಾ ನಿರಾಕರಿಸಲು ಸೌದಿ ಅರೇಬಿಯಾ ಸರ್ಕಾರ ನಿರ್ಧರಿಸಿದೆ.
ಈಗಾಗಲೇ ಪಶ್ಚಿಮ ಆಫ್ರಿಕಾದಿಂದ ದೇಶಕ್ಕೆ ಬಂದಿರುವ ವ್ಯಕ್ತಿಗಳನ್ನು ಪ್ರತ್ಯೇಕವಾಗಿ ಇರಿಸಿ ಚಿಕಿತ್ಸೆ ನೀಡಲಾಗಿದೆ. ಇವರಲ್ಲಿ ಕೆಲವರಿಗೆ ಸೋಂಕು ಇರುವುದು ಪತ್ತೆಯಾಗಿದೆ. ಗುರುವಾರದಂದು ಎಬೋಲಾ ಸೋಂಕಿನಿಂದ ಮೃತಪಟ್ಟ ವ್ಯಕ್ತಿಯ ಸಂಪರ್ಕಕ್ಕೆ ಸಿಕ್ಕಿರುವ ಎಲ್ಲರನ್ನು ಹುಡುಕಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಸೌದಿ ಅರೇಬಿಯಾ ಹೇಳಿದೆ.
ಎಲ್ಲಾ ವೈರಾಣು ಶಂಕಿತರನ್ನು 21 ದಿನಗಳ ಕಾಲ ತೀವ್ರ ನಿಗಾದಲ್ಲಿ ಇರಿಸಲಾಗಿದೆ. ಸದ್ಯಕ್ಕೆ ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ಯಾವುದೇ ಹೊಸ ಕೇಸುಗಳು ದಾಖಲಾಗಿಲ್ಲ ಎಂದು ವೈದಾಧಿಕಾರಿಗಳು ಹೇಳಿದ್ದಾರೆ.

ಪಶ್ಚಿಮ ಆಫ್ರಿಕಾದಲ್ಲಿ ಕಾಣಿಸಿಕೊಂಡು ವಿಶ್ವದ ಹಲವೆಡೆ ಆತಂಕ ಮೂಡಿಸುತ್ತಿರುವ ಎಬೋಲಾ ವೈರಾಣು ಕಾಯಿಲೆ(EVD) ಕಾಯಿಲೆಯನ್ನು ಅಂತಾರಾಷ್ಟ್ರೀಯ ಆರೋಗ್ಯ ತುರ್ತು ಪರಿಸ್ಥಿತಿ ಎಂದು ಶುಕ್ರವಾರದಂದು ವಿಶ್ವ ಆರೋಗ್ಯ ಸಂಸ್ಥೆ(WHO) ಘೋಷಿಸಿದೆ.
2013ರಿಂದ ತೀವ್ರಗೊಂಡಿರುವ ಎಬೋಲಾ ಪೀಡನೆ ಮೊದಲಿಗೆ ಗಿನಿಯಾದಲ್ಲಿ ಕಾಡತೊಡಗಿತು ಈಗ ನೈಜೀರಿಯಾ, ಸಿಯಾರಾ ಲಿಯೋನ್, ಲಿಬೇರಿಯಾದಲ್ಲಿ ಹರಡಿದೆ. ಆ.4 ರ ತನಕ ಸುಮಾರು 1,711 ಕೇಸುಗಳು ದಾಖಲಾಗಿವೆ (1,070 ದೃಢಪಟ್ಟಿದ್ದರೆ, 436 ತೀವ್ರ ಶಂಕೆ ಹಾಗೂ 205 ಶಂಕಿತರು) ಒಟ್ಟು 932 ಜನರನ್ನು ಬಲಿ ಪಡೆದಿದೆ.
ಎಬೋಲಾ ವೈರಸ್ ಗಾಳಿ ಅಥವಾ ನೀರಿನ ಮೂಲಕ ಸಾಂಕ್ರಾಮಿಕವಾಗಿ ಹರಡುವುದಿಲ್ಲ. ರೋಗ ಪೀಡಿತ ರಕ್ತ, ಜಿಹ್ವಾರಸ, ಮೂತ್ರ ಮುಂತಾದವುಗಳ ಸೋಕುವಿಕೆಯಿಂದ ಹರಡುತ್ತದೆ. ಮಲೇರಿಯಾ, ಕಾಲರ, ವೈರಲ್ ಫೀವರ್ ಮಾದರಿಯಲ್ಲೇ ರೋಗದ ಲಕ್ಷಣಗಳು ಕಾಣಿಸಿಕೊಳ್ಳುತ್ತವೆ. ಜ್ವರ, ಗಂಟಲು ನೋವು, ಕೈಕಾಲು ನೋವು, ತಲೆನೋವಿನೊಂದಿಗೆ ಆರಂಭವಾಗಿ ಆಮಶಂಕೆ, ಕರಳು ಬೇನೆ, ಕಿಡ್ನಿ ವೈಫಲ್ಯ ಉಂಟಾಗಲಿದೆ. ಕೊನೆ ಕೊನೆಗೆ ರಕ್ತ ಸ್ರಾವ ಉಂಟಾಗಿ ರೋಗಿ ಸಾವನ್ನಪ್ಪುತ್ತಾನೆ. [ಇಲ್ಲಿವರೆಗಿನ ಸಾವು ನೋವಿನ ಪಟ್ಟಿ]
-
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
Resort: ಕರ್ನಾಟಕದಲ್ಲಿ ಶುರುವಾಯ್ತು ರೆಸಾರ್ಟ್ ರಾಜಕೀಯ: ‘ಅವರು ನಮ್ಮ ಅತಿಥಿಗಳು’ ಎಂದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ -
Horoscope March 13: ಈ ರಾಶಿಯವರ ಬದುಕಲ್ಲಿ ಸಕಾರಾತ್ಮಕ ಬೆಳವಣಿಗೆ, ಅಧಿಕ ಲಾಭ; ದಿನ ಭವಿಷ್ಯ












Click it and Unblock the Notifications