ಮೆಕ್ಕಾ ಮಸೀದಿ ಮೇಲೆ ಉಗ್ರರ ದಾಳಿಗೆ ವಿಫಲ ಯತ್ನ
ಜೆಡ್ಡಾ, ಜೂನ್ 24 : ರಂಜಾನ್ ಹಬ್ಬಕ್ಕೆ ಇನ್ನೂ ಎರಡೇ ದಿನ ಬಾಕಿ ಇರುವಾಗ ಜಗತ್ ಪ್ರಸಿದ್ಧ ಮೆಕ್ಕಾ ಮಸೀದಿ ಮೇಲೆ ಉಗ್ರರು ನಡೆಸಲು ಯತ್ನಿಸಿದ ಎರಡು ದಾಳಿಗಳನ್ನು ಶುಕ್ರವಾರ ವಿಫಲಗೊಳಿಸಲಾಗಿದೆ.
ಮೆಕ್ಕಾ ಮಸೀದಿ ಮೆಲೆ ಎರಡು ಪ್ರತ್ಯೇಕ ದಾಳಿಗಳು ಮತ್ತು ಜೆಡ್ಡಾದಲ್ಲಿ ಮತ್ತೊಂದು ದಾಳಿ ನಡೆಸಲು ಉಗ್ರರು ಹುನ್ನಾರ ನಡೆಸಿದ್ದರು ಎಂದು ಸೌದಿ ಅರೇಬಿಯಾದ ಆಂತರಿಕ ಸಚಿವಾಲಯದ ಭದ್ರತಾ ವಕ್ತಾರ ಮನ್ಸೌರ್ ಅಲ್-ತುರ್ಕಿ ಹೇಳಿದ್ದಾರೆ.
ಶುಕ್ರವಾರದ ಪ್ರಾರ್ಥನೆಗೆ ಬರುವ ಭಕ್ತಾದಿಗಳನ್ನು ಗುರಿಯಾಗಿಟ್ಟುಕೊಂಡು ದಾಳಿ ನಡೆಸಲು ಎರಡು ತಂಡಗಳು ಸಿದ್ಧವಾಗಿದ್ದವು. ಆದರೆ, ಸಕಾಲದಲ್ಲಿ ಭದ್ರತಾ ಸಿಬ್ಬಂದಿ ನಡೆಸಿದ ಕಾರ್ಯಾಚರಣೆಯಿಂದ ಭಾರೀ ಅನಾಹುತ ತಪ್ಪಿದೆ.

ಮೆಕ್ಕಾ ಮಸೀದಿಯ ಬಳಿಯಲ್ಲಿಯೇ ಮನೆಯೊಂದರಲ್ಲಿ ಮಾನವ ಬಾಂಬ್ ಅಡಗಿಕೊಂಡಿದ್ದ. ಭದ್ರತಾ ಸಿಬ್ಬಂದಿಗೆ ಈ ವಿಷಯ ತಿಳಿದು ಆತನನ್ನು ಸುತ್ತುವರಿಯುತ್ತಲೇ, ಅವರ ಮೇಲೆ ಗುಂಡು ಹಾರಿಸುತ್ತ, ತನ್ನನ್ನು ತಾನೇ ಉಡಾಯಿಸಿಕೊಂಡಿದ್ದಾನೆ.
ಈ ಘಟನೆಯಲ್ಲಿ ಓರ್ವ ಮಹಿಳೆ ಕೂಡ ಸೇರಿದಂತೆ ಐವರನ್ನು ಬಂಧಿಸಲಾಗಿದೆ ಎಂದು ಅಲ್ ಅರೇಬಿಯಾ ವರದಿ ಮಾಡಿದೆ. ಗುಂಡಿನ ಚಕಮಕಿಯಲ್ಲಿ ಐವರು ಭದ್ರತಾ ಸಿಬ್ಬಂದಿಗಳೂ ಗಾಯಗೊಂಡಿದ್ದಾರೆ.

ಕಳೆದ ವರ್ಷ ಸರಿಯಾಗಿ ಇದೇ ಸಮಯದಲ್ಲಿ, ರಂಜನ್ ಮುನ್ನಾ ದಿನ ಇರಾಕಿನಲ್ಲಿ ಭಾರೀ ಬಾಂಬ್ ದಾಳಿ ನಡೆಸಲಾಗಿತ್ತು. ಆ ದಾಳಿಯಲ್ಲಿ 120ಕ್ಕೂ ಹೆಚ್ಚು ಜನರು ಪ್ರಾಣ ಕಳೆದುಕೊಂಡಿದ್ದರು. ಈಗಲೂ ಅದೇ ಹುನ್ನಾರ ಇಟ್ಟುಕೊಂಡು ದಾಳಿಗೆ ಯತ್ನಿಸಲಾಗಿದೆ.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ












Click it and Unblock the Notifications