ಶ್ರೀಲಂಕಾ; ಪ್ರತಿಭಟನಾಕಾರರ ಶಿಬಿರವನ್ನೇ ಕೆಡವಿದ ಭದ್ರತಾ ಸಿಬ್ಬಂದಿ
ಕೊಲಂಬೋ, ಜುಲೈ 22: ಶ್ರೀಲಂಕಾದ ನೂತನ ಅಧ್ಯಕ್ಷ ರಾನಿಲ್ ವಿಕ್ರಮಸಿಂಘೆ ವಿರುದ್ಧ ಶ್ರೀಲಂಕಾ ಅಧ್ಯಕ್ಷೀಯ ಸಚಿವಾಲಯದ ಆವರಣದ ಹೊರಗೆ ಮತ್ತೆ ಪ್ರತಿಭಟನೆ ತೀವ್ರಗೊಂಡಿದೆ. ಸರ್ಕಾರದ ವಿರುದ್ಧ ಕೆರಳಿದ ಪ್ರತಿಭಟನಾಕಾರರನ್ನು ನಿಯಂತ್ರಿಸಲು ಸಶಸ್ತ್ರ ಸೇನಾ ಸಿಬ್ಬಂದಿಯನ್ನು ನಿಯೋಜನೆ ಮಾಡಲಾಗಿದೆ.
ಕೊಲಂಬೊದಲ್ಲಿರುವ ಶ್ರೀಲಂಕಾದ ಅಧ್ಯಕ್ಷೀಯ ಸಚಿವಾಲಯದ ಆವರಣದ ಹೊರಗೆ ಬ್ಯಾರಿಕೇಡ್ಗಳನ್ನು ಸ್ಥಾಪಿಸಲಾಗಿದೆ. ಇದರಿಂದ ಹೆಚ್ಚಿನ ಸಂಖ್ಯೆಯ ಪ್ರತಿಭಟನಾಕಾರರನ್ನು ಶಸ್ತ್ರಸಜ್ಜಿತ ಭದ್ರತಾ ಸಿಬ್ಬಂದಿ ನಿಯಂತ್ರಿಸಿದರು.
ಶ್ರೀಲಂಕಾ ಸರ್ಕಾರದ ವಿರೋಧಿ ಪ್ರತಿಭಟನಾ ಶಿಬಿರಗಳ ಮೇಲೆ ಭದ್ರತಾ ಸಿಬ್ಬಂದಿಯೇ ಶುಕ್ರವಾರ ಬೆಳಗ್ಗೆ ಹೊತ್ತಿಗೆ ದಾಳಿ ನಡೆಸಿದ್ದಾರೆ ಎಂದು ಪ್ರತಿಭಟನಾಕಾರರು ಇದೀಗ ಆರೋಪಿಸುತ್ತಿದ್ದಾರೆ. "ರಾನಿಲ್ ವಿಕ್ರಮಸಿಂಘೆ ನಮ್ಮನ್ನು ಹೆದರಿಸುವುದಕ್ಕೆ ಪ್ರಯತ್ನಿಸುತ್ತಿದ್ದು, ಅದಕ್ಕಾಗಿಯೇ ಹೀಗೆ ಮಾಡುತ್ತಿದ್ದಾರೆ. ಆದರೆ ನಾವು ಎಂದಿಗೂ ಪ್ರತಿಭಟನೆಯನ್ನು ಬಿಡುವುದಿಲ್ಲ. ನಮ್ಮ ದೇಶವನ್ನು ಇಂತಹ ಅಸಹ್ಯ ರಾಜಕೀಯದಿಂದ ಮುಕ್ತಗೊಳಿಸಲು ನಾವು ಬಯಸುತ್ತೇವೆ" ಎಂದು ಸಶಸ್ತ್ರ ಪಡೆಗಳ ದಮನದ ನಡುವೆ ಪ್ರತಿಭಟನಾಕಾರರೊಬ್ಬರು ಹೇಳಿದ್ದಾರೆ.

ಪ್ರತಿಭಟನಾಕಾರರ ಡೇರೆಗಳನ್ನು ಕೆಡವಿದ ಭದ್ರತಾ ಸಿಬ್ಬಂದಿ
ಶ್ರೀಲಂಕಾ ಅಧ್ಯಕ್ಷೀಯ ಸಚಿವಾಲಯದ ಆವರಣದ ಹೊರಗೆ ಶಸ್ತ್ರಸಜ್ಜಿತ ಭದ್ರತಾ ಸಿಬ್ಬಂದಿಯೇ ಪ್ರತಿಭಟನಾಕಾರರ ಡೇರೆಗಳನ್ನು ಕೆಡವಿದ್ದಾರೆ. ದ್ವೀಪರಾಷ್ಟ್ರದಲ್ಲಿ ನೂತನ ಅಧ್ಯಕ್ಷರ ಆಯ್ಕೆಯ ನಂತರವೂ ಮತ್ತೆ ಹಳಿಗೆ ಬರುವುದಕ್ಕೆ ಪರದಾಡುವ ಸ್ಥಿತಿಯಿದ್ದು, ದೇಶದ ಜನರು ತೀವ್ರ ಆರ್ಥಿಕ ಸಂಕಷ್ಟವನ್ನು ಎದುರಿಸುತ್ತಿದ್ದಾರೆ. ಭವಿಷ್ಯದ ಬಗ್ಗೆ ಇನ್ನೂ ಅನಿಶ್ಚಿತರಾಗಿದ್ದಾರೆ.

ಪಾಸ್ಪೋರ್ಟ್ ಪಡೆಯುವುದಕ್ಕಾಗಿ ಉದ್ದನೆಯ ಸಾಲು
ಈ ಅನಿಶ್ಚಿತತೆ ಮಧ್ಯೆ, ದೇಶಾದ್ಯಂತದ ಶ್ರೀಲಂಕಾದ ಮಂದಿ ಹೊಸ ಪಾಸ್ಪೋರ್ಟ್ ಪಡೆಯಲು ಅಥವಾ ತಮ್ಮ ಹಳೆಯ ಪಾಸ್ಪೋರ್ಟ್ ಅನ್ನು ನವೀಕರಿಸಲು ಕೊಲಂಬೊದ ಪಾಸ್ಪೋರ್ಟ್ ಕಚೇರಿಯಲ್ಲಿ ಸಾಲುಗಟ್ಟಿ ನಿಂತಿದ್ದಾರೆ. "ದೇಶದಲ್ಲಿ ಆಹಾರವಿಲ್ಲ, ಇಂಧನವಿಲ್ಲ ಮತ್ತು ಹಣವಿಲ್ಲ. ನಾವು ಏನು ಮಾಡಬೇಕು, ನಾವು ಹೇಗೆ ಬದುಕಬೇಕು?, ನನ್ನ ಪಾಸ್ಪೋರ್ಟ್ ಪಡೆಯಲು ಮತ್ತು ಉದ್ಯೋಗಕ್ಕಾಗಿ ಕತಾರ್ಗೆ ಹೋಗಲು ನಾನು ಬಂದಿದ್ದೇನೆ. ಇದಕ್ಕಾಗಿ ಮಾತ್ರ ಜನರು ಇಲ್ಲಿಗೆ ಬಂದಿದ್ದಾರೆ," ಎಂದು ಸರದಿಯಲ್ಲಿ ಕಾಯುತ್ತಿರುವ ವ್ಯಕ್ತಿಯೊಬ್ಬರು ತಿಳಿಸಿದ್ದಾರೆ.

ಗುರುವಾರ ರಾನಿಲ್ ವಿಕ್ರಮಸಿಂಘೆ ಪ್ರಮಾಣವಚನ
ಶ್ರೀಲಂಕಾದ ನೂತನ ಅಧ್ಯಕ್ಷರಾಗಿ ರಾನಿಲ್ ವಿಕ್ರಮಸಿಂಘೆ ಸಂಸತ್ತಿನಲ್ಲಿ ಮುಖ್ಯ ನ್ಯಾಯಮೂರ್ತಿ ಜಯಂತ ಜಯಸೂರ್ಯ ಎದುರು ಪ್ರಮಾಣವಚನ ಸ್ವೀಕರಿಸಿದರು. ಬುಧವಾರ ಸಂಸತ್ತಿನಲ್ಲಿ ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಆಯ್ಕೆಯಾಗಿದ್ದರು. ಬುಧವಾರದ ಮತದಾನದ ವೇಳೆ, ದೇಶದಲ್ಲಿ ತೀವ್ರ ಆರ್ಥಿಕ ಪ್ರಕ್ಷುಬ್ಧತೆಯ ಮಧ್ಯೆ ನಡೆದ ಚುನಾವಣೆಯಲ್ಲಿ ವಿಕ್ರಮಸಿಂಘೆ 134 ಮತಗಳನ್ನು ಪಡೆದುಕೊಂಡರು.

ದ್ವೀಪರಾಷ್ಟ್ರದಲ್ಲಿ ಸಂಕಷ್ಟಕ್ಕೆ ಸಿಲುಕಿದ ಪ್ರಜೆಗಳು
ದ್ವೀಪರಾಷ್ಟ್ರದಲ್ಲಿ ಉತ್ಪಾದನೆಗೆ ಮೂಲ ಒಳಹರಿವಿನ ಅಲಭ್ಯತೆ, 2022ರ ಮಾರ್ಚ್ ತಿಂಗಳಿನಿಂದ ಕರೆನ್ಸಿಯ ಶೇಕಡಾ 80ರಷ್ಟು ಕುಸಿತ, ವಿದೇಶಿ ಮೀಸಲು ಕೊರತೆ ಮತ್ತು ಅದರ ಅಂತಾರಾಷ್ಟ್ರೀಯ ಸಾಲದ ಬಾಧ್ಯತೆಗಳನ್ನು ಪೂರೈಸುವಲ್ಲಿ ದೇಶದ ವಿಫಲವಾಯಿತು. ಶ್ರೀಲಂಕಾ ಆರ್ಥಿಕತೆ ಬಿಕ್ಕಟ್ಟಿನ ಸುಳಿಗೆ ಸಿಲುಕಿತು. ಇಂಧನ ಕೊರತೆಯ ನಡುವೆ ಪ್ರತಿದಿನ ನೂರಾರು ಜನರು ಪೆಟ್ರೋಲ್ ಬಂಕ್ ಎದುರಿಗೆ ಸಾಲುಗಟ್ಟಿ ನಿಲ್ಲುವುದಕ್ಕೆ ಶುರು ಮಾಡಿದರು. ಹೆಚ್ಚಿನ ಸಂಖ್ಯೆಯಲ್ಲಿ ಜನರು ತಮ್ಮ ಕಾರು, ಬೈಕ್ ಅನ್ನು ಬಿಟ್ಟು ಬೈಸಿಕಲ್ ಅನ್ನು ಬಳಸುವುದಕ್ಕೆ ಪ್ರಾರಂಭಿಸಿದರು.
ಒಂದು ಹಂತದಲ್ಲಿ ತಾಳ್ಮೆ ಕಳೆದುಕೊಂಡ ಶ್ರೀಲಂಕಾ ಮಂದಿ ಈ ಹಿಂದಿನ ಅಧ್ಯಕ್ಷ ಗೋಟಬಯ ರಾಜಪಕ್ಸೆ ನಿವಾಸಕ್ಕೆ ನುಗ್ಗಿ ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನಾಕಾರರ ಆಕ್ರೋಶ ಕಂಡು ಬೆದರಿದೆ ರಾಜಪಕ್ಸೆ ಮೊದಲು ಮಾಲ್ಡೀವ್ಸ್ಗೆ ಪಲಾಯನ ಮಾಡಿದ್ದು, ಅಲ್ಲಿಂದ ಸಿಂಗಾಪುರಕ್ಕೆ ತೆರಳಿದರು.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications