ಪರ್ವತವನ್ನು ಅಲ್ಲಾಡಿಸಬಹುದು ಚೀನಾ ಸೇನೆಯನ್ನಲ್ಲ: ಭಾರತಕ್ಕೆ ಎಚ್ಚರಿಕೆ
ಪರ್ವತವನ್ನಾದರೂ ಅಲುಗಾಡಿಸಬಹುದು, ಆದರೆ ಚೀನಾದ ಸೇನೆಯನ್ನಲ್ಲ ಎಂದು ಚೀನಾ, ಭಾರತಕ್ಕೆ ಎಚ್ಚರಿಕೆ ನೀಡಿದೆ. ಒಂದು ವೇಳೆ ಭಾರತ ಯುದ್ದಕ್ಕೆ ಸಿದ್ದವಾದರೆ ಈಗಿರುವ ಭೂಭಾಗವನ್ನೂ ಕಳೆದುಕೊಳ್ಳಬೇಕಾಗಬಹುದು ಎಂದು ಚೀನಾ ಹೇಳಿದೆ.
ಬೀಜಿಂಗ್, ಜುಲೈ 24: ಚೀನಾ ರಕ್ಷಣಾ ಸಚಿವಾಲಯ ಸೋಮವಾರ (ಜುಲೈ 24) ಭಾರತಕ್ಕೆ ಖಡಕ್ ಸಂದೇಶ ರವಾನಿಸಿದ್ದು ದೋಕ್ಲಾಂ ಗಡಿಯಿಂದ ಸೇನೆಯನ್ನು ಹಿಂದಕ್ಕೆ ಪಡೆಯದಿದ್ದಲ್ಲಿ ಪರಿಸ್ಥಿತಿ ನೆಟ್ಟಗಿರುವುದಿಲ್ಲ ಎಂದು ಎಚ್ಚರಿಸಿದೆ.
ಒಂದು ವೇಳೆ ಪರ್ವತವನ್ನಾದರೂ ಅಲುಗಾಡಿಸಬಹುದು, ಆದರೆ ಚೀನಾದ ಸೇನೆಯನ್ನಲ್ಲ ಎಂದು ಎಚ್ಚರಿಕೆ ನೀಡಿರುವ ಚೀನಾ, ಒಂದು ವೇಳೆ ಭಾರತ ಯುದ್ದಕ್ಕೆ ಸಿದ್ದವಾದರೆ ಈಗಿರುವ ಭೂಭಾಗವನ್ನೂ ಕಳೆದುಕೊಳ್ಳಬೇಕಾಗಬಹುದು ಎಂದು ಹೇಳಿದೆ.
ಚೀನಾದ ಪೀಪಲ್ಸ್ ಲಿಬರೇಶನ್ ಆರ್ಮಿಯನ್ನು ಅಲುಗಾಡಿಸುವುದು ಕಷ್ಟ ಎಂದಿರುವ ಚೀನಾ ರಕ್ಷಣಾ ಸಚಿವಾಲಯದ ವಕ್ತಾರ ವು ಕಿಯಾನ್, ನಮ್ಮ ದೇಶದ ಭಾಗವನ್ನು ಹೇಗೆ ರಕ್ಷಿಸಿಕೊಳ್ಳಬೇಕೆಂದು ಚೀನಾಗೆ ಗೊತ್ತಿದೆ ಎಂದು ಹೇಳಿದ್ದಾರೆ.

ದೋಕ್ಲಾಂ ಚೀನಾದ ಸ್ವತ್ತು ಎಂದಿರುವ ಕಿಯಾನ್, ಪೀಪಲ್ಸ್ ಲಿಬರೇಶನ್ ಆರ್ಮಿ ಕಾಲಕ್ಕೆ ತಕ್ಕಂತೆ ತನ್ನ ಶಕ್ತಿಯನ್ನು ಬಲಪಡಿಸಿಕೊಂಡು ಬರುತ್ತಲೇ ಇದೆ. ದೇಶದ ರಕ್ಷಣೆ ಮತ್ತು ಸಾರ್ವಭೌಮತೆಯ ವಿಚಾರದಲ್ಲಿ ಯಾವುದೇ ರಾಜಿಯಿಲ್ಲ ಎಂದು ಕಿಯಾನ್ ಹೇಳಿದ್ದಾರೆ.
1962ರಲ್ಲಿ ಭಾರತದ ಹೀನಾಯ ಸೋಲನ್ನು ಮತ್ತೆ ನೆನೆಪಿಸಿರುವ ಕಿಯಾನ್, ಭಾರತ ತನ್ನ ಸೇನೆಯನ್ನು ಹಿಂದಕ್ಕೆ ಪಡೆಯದೇ ಇದ್ದಲ್ಲಿ ನಾವು ಹೆಚ್ಚಿನ ಸಂಖ್ಯೆಯಲ್ಲಿ ಸೈನಿಕರನ್ನು ಗಡಿಗೆ ಕಳುಹಿಸಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.
-
ಪ್ರಧಾನಿ ಮೋದಿಗೆ ಕರೆ ಮಾಡಿದ ಟ್ರಂಪ್: ಶಾಂತಿ ಸ್ಥಾಪನೆಗೆ ಭಾರತದ ಬೆಂಬಲ, ಮಹತ್ವ ಮಾತುಕತೆ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ












Click it and Unblock the Notifications