Breaking; ತಾಂತ್ರಿಕ ತೊಂದರೆ ಕರಾಚಿಯಲ್ಲಿ ಇಂಡಿಗೋ ವಿಮಾನ ಲ್ಯಾಂಡ್
ಇಸ್ಲಾಮಾಬಾದ್, ಜುಲೈ 17; ಪೈಲೆಟ್ ತಾಂತ್ರಿಕ ತೊಂದರೆ ಪತ್ತೆ ಹಚ್ಚಿದ ಹಿನ್ನಲೆಯಲ್ಲಿ ಶಾರ್ಜಾ- ಹೈದರಾಬಾದ್ ನಡುವಿನ ಇಂಡಿಗೋ ವಿಮಾನ ಕರಾಚಿಯಲ್ಲಿ ಲ್ಯಾಂಡ್ ಆಗಿದೆ. ವಿಮಾನದಲ್ಲಿದ್ದ ಎಲ್ಲಾ ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ.
ಭಾನುವಾರ ಈ ಕುರಿತು ಪ್ರಕಟಣೆ ಮೂಲಕ ಇಂಡಿಗೋ ಮಾಹಿತಿ ನೀಡಿದೆ. ಪೈಲೆಟ್ ತಾಂತ್ರಿಕ ತೊಂದರೆ ಪತ್ತೆ ಹಚ್ಚಿದ ಬಳಿಕ ವಿಮಾನವನ್ನು ಪಾಕಿಸ್ತಾನ ಕಡೆಗೆ ಕಳಿಸಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಕರಾಚಿಯಲ್ಲಿ ಇಳಿಸಲಾಗಿದೆ ಎಂದು ಹೇಳಿದೆ.
ಭಾರತದ ಕಡಿಮೆ ಪ್ರಯಾಣದರದ ವಿಮಾನವಾದ ಇಂಡಿಗೋ ಕರಾಚಿಯಿಂದ ಹೈದರಾಬಾದ್ಗೆ ಆಗಮಿಸುತ್ತಿತ್ತು. ಸದ್ಯ ಕರಾಚಿಯಲ್ಲಿರುವ ಪ್ರಯಾಣಿಕರನ್ನು ಕರೆತರಲು ಮತ್ತೊಂದು ವಿಮಾನವನ್ನು ಕಳಿಸಲಾಗಿದೆ ಎಂದು ಸಂಸ್ಥೆ ತಿಳಿಸಿದೆ.

ಇಂಡಿಗೋ 6ಇ-406 ವಿಮಾನ ಶಾರ್ಜಾದಿಂದ ಹೈದರಾಬಾದ್ಗೆ ಆಗಮಿಸುತ್ತಿತ್ತು. ಈ ವೇಳೆ ಪೈಲೆಟ್ ತಾಂತ್ರಿಕ ತೊಂದರೆ ಪತ್ತೆ ಹಚ್ಚಿದ್ದಾನೆ. ತಕ್ಷಣ ಅಗತ್ಯ ಪ್ರಕ್ರಿಯೆ ಪೂರ್ಣಗೊಳಿಸ ಕರಾಚಿಗೆ ವಿಮಾನ ಕಳಿಸಲಾಗಿದೆ. ಯಶಸ್ವಿಯಾಗಿ ಲ್ಯಾಂಡ್ ಮಾಡಲಾಗಿದೆ.
ಇಂಜಿನ್ ನಂಬರ್ 2 ಅಥವ ಬಲಭಾಗದ ಇಂಜಿನ್ನಲ್ಲಿ ತಾಂತ್ರಿಕ ತೊಂದರೆ ಕಾಣಿಸಿಕೊಂಡಿದೆ ಎಂದು ಸರ್ಕಾರದ ಮೂಲಗಳನ್ನು ಉಲ್ಲೇಖಿಸಿ ಎನ್ಡಿಟಿವಿ ವರದಿ ಮಾಡಿದೆ.
ಎರಡು ವಾರದಲ್ಲಿ ಕರಾಚಿಯಲ್ಲಿ ತುರ್ತಾಗಿ ಲ್ಯಾಂಡ್ ಮಾಡಲಾದ 2ನೇ ವಿಮಾನ ಇದಾಗಿದೆ. ಈ ತಿಂಗಳ ಆರಂಭದಲ್ಲಿ ದೆಹಲಿ-ದುಬೈ ಮಾರ್ಗದ ಸ್ಪೈಸ್ ಜೆಟ್ ವಿಮಾನ ತಾಂತ್ರಿಕ ತೊಂದರೆ ಕಾರಣ ಕರಾಚಿಯಲ್ಲಿ ಲ್ಯಾಂಡ್ ಆಗಿತ್ತು.
138 ಪ್ರಯಾಣಿಕರಿದ್ದ ವಿಮಾನ ಕರಾಚಿಯಲ್ಲಿ ಲ್ಯಾಂಡ್ ಆದ ಬಳಿಕ ದೆಹಲಿಯಿಂದ ಬೇರೆ ವಿಮಾನ ಕಳಿಸಿ ಪ್ರಯಾಣಿಕರನ್ನು ದೆಹಲಿಗೆ ಕರೆತರಲಾಗಿತ್ತು. ಇದರಿಂದಾಗಿ 11 ಗಂಟೆಗಳ ಕಾಲ ಪ್ರಯಾಣಿಕರು ಕರಾಚಿಯಲ್ಲಿ ಉಳಿಯುವಂತಾಗಿತ್ತು. ಪಾಕಿಸ್ತಾನ ಸರ್ಕಾರ ಪ್ರಯಾಣಿಕರಿಗೆ ಅಗತ್ಯ ನೆರವು ನೀಡಿತ್ತು.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications