ಶೇಖ್ ಹಸೀನಾ ಭಾಷಣಕ್ಕೂ ನಮಗೂ ಸಂಬಂಧವಿಲ್ಲ; ಬಾಂಗ್ಲಾದೇಶಕ್ಕೆ ತಿರುಗೇಟು ಕೊಟ್ಟ ಭಾರತ
ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರ ಹೇಳಿಕೆಗಳನ್ನು ಸ್ವಇಚ್ಛೆಯಿಂದ ನೀಡಿದ್ದಾರೆ. ಇದರಲ್ಲಿ ಭಾರತದ ಯಾವುದೇ ಪಾತ್ರವಿಲ್ಲ ಎಂದು ಭಾರತ ಬಾಂಗ್ಲಾದೇಶಕ್ಕೆ ತಿರುಗೇಟು ನೀಡಿದೆ. ಶೇಖ್ ಹಸೀನಾರ ಹೇಳಿಕೆಗಳನ್ನು ಭಾರತದ ಜೊತೆ ಸಂಬಂಧ ಕಲ್ಪಿಸುವುದು ಎರಡೂ ದೇಶಗಳ ಸಂಬಂಧಕ್ಕೆ ಒಳ್ಳೆಯದಲ್ಲ ಎಂದು ಹೇಳಿದ್ದಾರೆ.
ಮಾಧ್ಯಮಗಳ ಪ್ರಶ್ನೆಗಳಿಗೆ ಉತ್ತರಿಸಿದ ವಿದೇಶಾಂಗ ಸಚಿವಾಲಯದ (ಎಂಇಎ) ವಕ್ತಾರ ರಣಧೀರ್ ಜೈಸ್ವಾಲ್, ಬಾಂಗ್ಲಾದೇಶದ ಹಂಗಾಮಿ ಹೈಕಮಿಷನರ್ ಆಗಿರುವ ಎಂಡಿ ನುರಾಲ್ ಇಸ್ಲಾಂ ಅವರಿಗೆ ವಿದೇಶಾಂಗ ಸಚಿವಾಲಯ ಏಕೆ ಸಮನ್ಸ್ ಜಾರಿ ಮಾಡಿದೆ ಎಂಬುದನ್ನು ಹೇಳಿದ್ದು, ಶೇಖ್ ಹಸೀನಾ ನೀಡಿರುವ ವೈಯಕ್ತಿಕ ಹೇಳಿಕೆಯನ್ನು ಭಾರತದ ಜೊತೆ ತಳುಕು ಹಾಕುವುದು ದ್ವಿಪಕ್ಷೀಯ ಸಂಬಂಧಗಳಿಗೆ ಒಳ್ಳೆಯದಲ್ಲ ಎಂದಿದ್ದಾರೆ.

ಭಾರತವು ಬಾಂಗ್ಲಾದೇಶದ ಜೊತೆ ಸಕಾರಾತ್ಮಕ, ರಚನಾತ್ಮಕ ಮತ್ತು ಉತ್ತಮ ಸಂಬಂಧವನ್ನು ಬಯಸುತ್ತದೆ ಎಂದು ತಿಳಿಸಲಾಗಿದೆ. ಇದನ್ನು ಇತ್ತೀಚಗೆ ನಡೆದ ಹಲವು ಉನ್ನತ ಮಟ್ಟದ ಸಭೆಗಳಲ್ಲಿ ಹೇಳಿದ್ದೇವೆ. ಆದರೂ ಬಾಂಗ್ಲಾದೇಶದ ಅಧಿಕಾರಿಗಳು ನೀಡುವ ಹೇಳಿಕೆಗಳು ಭಾರತವನ್ನು ನಕಾರಾತ್ಮವಾಗಿ ಚಿತ್ರಿಸುತ್ತಲೇ ಇರುವುದು ವಿಷಾದಕರ, ಅವರ ಆಂತರಿಕೆ ಸಮಸ್ಯೆಗಳಿಗೆ ನಮ್ಮನ್ನು ಹೊಣೆಗಾರರನ್ನಾಗಿ ಮಾಡುತ್ತಿದೆ ಎಂದು ರಣಧೀರ್ ಜೈಸ್ವಾಲ್ ಬೇಸರ ವ್ಯಕ್ತಪಡಿಸಿದ್ದಾರೆ.
"ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರ ವೈಯಕ್ತಿಕ ಹೇಳಿಕೆಗಳನ್ನು ನೀಡಿದ್ದಾರೆ. ಇದಕ್ಕೂ ಭಾರತಕ್ಕೂ ಯಾವುದೇ ಸಂಬಂಧವಿಲ್ಲ, ಇದನ್ನು ಭಾರತ ಸರ್ಕಾರದ ನಿಲುವಿನ ಜೊತೆ ಹೋಲಿಕೆ ಮಾಡುವುದು ದ್ವಿಪಕ್ಷೀಯ ಸಂಬಂಧಗಳನ್ನು ಹಾಳು ಮಾಡುತ್ತದೆ ಎಂದು ಹೇಳಿದರು.
ಭಾರತ ಸರ್ಕಾರ ಉತ್ತಮ ಸಂಬಂಧ ಕಾಪಾಡಿಕೊಳ್ಳಲು ಎಲ್ಲಾ ಪ್ರಯತ್ನಗಳನ್ನು ಮಾಡುತ್ತದೆ. ಬಾಂಗ್ಲಾದೇಶವು ವಾತಾವರಣವನ್ನು ಹಾಳು ಮಾಡದೆ ಅದೇ ರೀತಿಯ ಪ್ರತಿಕ್ರಿಯೆ ನೀಡುತ್ತದೆ ಎಂದು ನಾವು ನಿರೀಕ್ಷೆ ಮಾಡಿದ್ದೇವೆ ಎಂದರು.
ಬಾಂಗ್ಲಾದೇಶದ ಸಂಸ್ಥಾಪಕ ಶೇಖ್ ಮುಜಿಬುರ್ ರೆಹಮಾನ್ ಅವರ ಮನೆಯ ಧ್ವಂಸ ಮಾಡಿದ್ದಕ್ಕೆ ಭಾರತ ಬೇಸರ ವ್ಯಕ್ತಪಡಿಸಿದ ಒಂದು ದಿನದ ಬಳಿಕ ವ್ಯವಹಾರಗಳ ಸಚಿವಾಲಯದ ಹೇಳಿಕೆ ಬಂದಿದೆ ಮತ್ತು ಇಂತಹ ವಿಧ್ವಂಸಕ ಕೃತ್ಯವನ್ನು ಬಲವಾಗಿ ಖಂಡಿಸಬೇಕು ಎಂದು ಹೇಳಿದರು.
ಆಕ್ರಮಣ ಮತ್ತು ದಬ್ಬಾಳಿಕೆಯ ಶಕ್ತಿಗಳ ವಿರುದ್ಧ ಬಾಂಗ್ಲಾದೇಶದ ಜನರ ವೀರೋಚಿತ ಪ್ರತಿರೋಧದ ಸಂಕೇತವಾದ ಶೇಖ್ ಮುಜಿಬುರ್ ರೆಹಮಾನ್ ಅವರ ಐತಿಹಾಸಿಕ ನಿವಾಸವನ್ನು ಫೆಬ್ರವರಿ 5, 2025 ರಂದು ಧ್ವಂಸಗೊಳಿಸಲಾಗಿದೆ.
-
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral












Click it and Unblock the Notifications