ನೆದರ್ಲೆಂಡ್ ನಲ್ಲಿ ಶೂಟೌಟ್ : ಉಗ್ರರ ದಾಳಿ ಶಂಕೆ, ಹಲವರಿಗೆ ಗಾಯ
ಹೇಗ್ (ನೆದರ್ಲೆಂಡ್), ಮಾರ್ಚ್ 18 : ಡಚ್ ನಗರಿ ಉಟ್ರೆಚ್ ನ ಟ್ರಾಮ್ ವೊಂದರಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಹಲವರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಈ ಘಟನೆಯ ಹಿಂದೆ ಉಗ್ರರ ಕೈವಾಡವಿದೆಯಾ ಎಂಬುದು ದೃಢಪಡಬೇಕಿದೆ.
ಪೊಲೀಸರು ತ್ವರಿತವಾಗಿ ತನಿಖೆ ಆರಂಭಿಸಿದ್ದು, ಈ ಶೂಟೌಟ್ ನ ಹಿಂದೆ ಭಯೋತ್ಪಾದಕರ ಕೈವಾಡದ ಬಗ್ಗೆ ವಿಚಾರಣೆ ಮಾಡುತ್ತಿದ್ದಾರೆ. ಸೋಮವಾರ ಬೆಳಿಗ್ಗೆ ಸ್ಥಳೀಯ ಕಾಲಮಾನ 10.45ರ ಸುಮಾರಿಗೆ 24 ಅಕ್ಟೋಬರ್ ಸ್ಕ್ವೇರ್ ನಲ್ಲಿ ಈ ಘಟನೆ ಜರುಗಿದೆ. ಅಪರಿಚಿತ ವ್ಯಕ್ತಿ ಬೇಕಾಬಿಟ್ಟಿ ಗುಂಡಿನ ದಾಳಿ ನಡೆಸಿದ್ದರಿಂದ ಕನಿಷ್ಠ 7 ಜನ ಗಾಯಗೊಂಡಿದ್ದಾರೆ.
ಇಡೀ ಸ್ಥಳವನ್ನು ಪೊಲೀಸರು ಸುತ್ತುವರಿದಿದ್ದು, ಜನರ ರಕ್ಷಣೆಗಾಗಿ ಮೂರು ಹೆಲಿಪಾಕ್ಟರ್ ಗಳನ್ನು ಕೂಡ ಕಳುಹಿಸಲಾಗಿದೆ. ಸ್ಥಳದಲ್ಲಿ ವೈದ್ಯಕೀಯ ಸಿಬ್ಬಂದಿ ಮತ್ತು ಆಂಬ್ಯುಲೆನ್ಸ್ ಗಳನ್ನು ಕೂಡ ತರಿಸಲಾಗಿದೆ. ಅದೃಷ್ಟವಶಾತ್ ಯಾರೂ ಸಾವಿಗೀಡಾಗಿಲ್ಲ. ಈ ಘಟನೆಯ ಬಗ್ಗೆ ನಿಖರವಾದ ಚಿತ್ರಣ ಇನ್ನೂ ಬರಬೇಕಿದೆ.

ಇಂಥ ಘಟನೆಗಳು ಮರುಕಳಿಸುವ ಸಾಧ್ಯತೆ ಇರುವುದರಿಂದ ಜನರು ಈ ಸಮಯ ಮನೆಯಲ್ಲಿಯೇ ಇರಬೇಕು ಎಂದು ಪೊಲೀಸರು ಕಿವಿಮಾತು ಹೇಳಿದ್ದಾರೆ.
ನ್ಯೂಜಿಲೆಂಡ್ ನಲ್ಲಿ ಭೀಕರ ಭಯೋತ್ಪಾದಕ ದಾಳಿ ನಡೆದ ಎರಡೇ ದಿನಗಳಲ್ಲಿ ನೆದರ್ಲೆಂಡ್ ನಲ್ಲಿ ಈ ಘಟನೆ ನಡೆದಿದ್ದು ಕಳವಳಕ್ಕೀಡು ಮಾಡಿದೆ. ನ್ಯೂಜಿಲೆಂಡ್ ನಲ್ಲಿ ನಡೆದಿದ್ದ ಘಟನೆಯಲ್ಲಿ ಐವತ್ತು ಜನರು ಗುಂಡಿನ ದಾಳಿಗೆ ಹತರಾಗಿ ಹಲವರು ಗಾಯಗೊಂಡಿದ್ದರು.
-
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
Resort: ಕರ್ನಾಟಕದಲ್ಲಿ ಶುರುವಾಯ್ತು ರೆಸಾರ್ಟ್ ರಾಜಕೀಯ: ‘ಅವರು ನಮ್ಮ ಅತಿಥಿಗಳು’ ಎಂದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ -
Horoscope March 13: ಈ ರಾಶಿಯವರ ಬದುಕಲ್ಲಿ ಸಕಾರಾತ್ಮಕ ಬೆಳವಣಿಗೆ, ಅಧಿಕ ಲಾಭ; ದಿನ ಭವಿಷ್ಯ












Click it and Unblock the Notifications