ನಾನು ಟ್ವಿಟರ್ ಮುಖ್ಯಸ್ಥನ ಸ್ಥಾನದಿಂದ ಕೆಳಗಿಳಿಯಬೇಕೇ?: ಟ್ವಿಟರ್ನಲ್ಲಿಯೇ ಸಮೀಕ್ಷೆ ಆರಂಭಿಸಿದ ಎಲಾನ್ ಮಸ್ಕ್
ವಾಷಿಂಗ್ಟನ್, ಡಿಸೆಂಬರ್ 19: ಟ್ವಿಟರ್ ಅನ್ನು ಖರೀದಿ ಮಾಡಿದ ಉದ್ಯಮಿ ಎಲಾನ್ ಮಸ್ಕ್ ಹಲವು ಬದಲಾವಣೆಗಳು ಮಾಡಿದ್ದಾರೆ. ಇದು ಟ್ವಿಟರ್ ಸಂಸ್ಥೆ ಕೋಲಾಹಲವನ್ನೇ ಉಂಟುಮಾಡಿದೆ. ಟ್ವಿಟರ್ನಲ್ಲಿ ಜಾರಿಯಾದ ಹೊಸ ನೀತಿಗಳ ಪರಿಣಾಮ ಹಲವರು ನೌಕರಿ ತೊರೆದಿದ್ದಾರೆ, ಇನ್ನು ಹಲವರನ್ನು ಸಂಸ್ಥೆಯೇ ತೆಗೆದುಹಾಕಿದೆ. ಇದು ಜಗತ್ತಿನಾದ್ಯಂತ ಹಲವು ಚರ್ಚೆಗಳನ್ನು ಹುಟ್ಟುಹಾಕಿದೆ.
ಟ್ವಿಟರ್ನಲ್ಲಾದ ಬದಲಾವಣೆಗಳಿಂದ ಜಾಹೀರಾತುದಾರರು ತಮ್ಮ ಜಾಹೀರಾತುಗಳನ್ನು ನೀಡುವುದನ್ನು ನಿಲ್ಲಿಸಿದ್ದಾರೆ. ಇದು ಕಂಪನಿಗೆ ಅಪಾರ ಪ್ರಮಾಣದ ನಷ್ಟ ಉಂಟು ಮಾಡಿದೆ ಎಂದು ಸ್ವತಃ ಎಲಾನ್ ಮಸ್ಕ್ ಹೇಳಿದ್ದಾರೆ. ಇದರಿಂದ ಬೇಸತ್ತಿರುವ ಮಸ್ಕ್ ಟ್ವಿಟರ್ನಲ್ಲಿಯೇ ಸಮೀಕ್ಷೆಯೊಂದನ್ನು ಆರಂಭಿಸಿದ್ದಾರೆ.
'ನಾನು ಟ್ವಿಟರ್ ಮುಖ್ಯಸ್ಥ ಸ್ಥಾನದಿಂದ ಕೆಳಗಿಳಿಯಬೇಕೇ?' ಎಂದು ಲಕ್ಷಾಂತರ ಟ್ವಿಟರ್ ಬಳಕೆದಾರರನ್ನು ಪ್ರಶ್ನಿಸಿದ್ದಾರೆ.

ಈ ಸಮೀಕ್ಷೆಯ ಫಲಿತಾಂಶಗಳಿಗೆ ನಾನು ಬದ್ಧನಾಗಿರುತ್ತೇನೆ ಎಂದು ಮಸ್ಕ್ ತಿಳಿಸಿದ್ದಾರೆ.
ಮುಂದಿನ ಪ್ರಮುಖ ನೀತಿ ಬದಲಾವಣೆಗಳಿಗಾಗಿ ಸಮೀಕ್ಷೆ ನಡೆಯಲಿದೆ. ನಾನು ಬಳಕೆದಾರರಿಗೆ ಕ್ಷೆಮ ಯಾಚಿಸಲಿದ್ದೇನೆ ಎಂದು ಮತ್ತೊಂದು ಟ್ವೀಟ್ನಲ್ಲಿ ತಿಳಿಸಿದ್ದಾರೆ.
Facebook, Instagram ಮತ್ತು Mastodon ಸೇರಿದಂತೆ ಇತರ ನಿರ್ದಿಷ್ಟ ಸಾಮಾಜಿಕ ಮಾಧ್ಯಮಗಳನ್ನು ಪ್ರಚಾರ ಮಾಡಲು ಬಳಸುವ ಖಾತೆಗಳನ್ನು ನಿಷೇಧಿಸುವುದಾಗಿ ಟ್ವಿಟರ್ ಭಾನುವಾರ ಘೋಷಿಸಿದೆ. ಇದಾದ ನಂತರ, ಎಲಾನ್ ಮಸ್ಕ್ ಸಮೀಕ್ಷೆ ಆರಂಭಿಸಿದ್ದಾರೆ.
'ನಮ್ಮ ಅನೇಕ ಬಳಕೆದಾರರು ಇತರ ಸಾಮಾಜಿಕ ಮಾಧ್ಯಮ ಪ್ಲಾಟ್ಫಾರ್ಮ್ಗಳಲ್ಲಿ ಸಕ್ರಿಯರಾಗಿದ್ದಾರೆ. ಆದರೂ, ನಾವು ಇನ್ನು ಮುಂದೆ ಟ್ವಿಟರ್ನಲ್ಲಿ ಕೆಲವು ಸಾಮಾಜಿಕ ಮಾಧ್ಯಮ ಪ್ಲಾಟ್ಫಾರ್ಮ್ಗಳ ಉಚಿತ ಪ್ರಚಾರಕ್ಕೆ ಅನುಮತಿ ನೀಡುವುದಿಲ್ಲ ಎಂದು ಟ್ವಿಟರ್ ಹೇಳಿಕೊಂಡಿದೆ.
'ಇತರ ಸಾಮಾಜಿಕ ಮಾಧ್ಯಮ ಪ್ಲಾಟ್ಫಾರ್ಮ್ಗಳನ್ನು ಪ್ರಚಾರ ಮಾಡುವ ಉದ್ದೇಶದಿಂದ ತೆರೆಯಲಾಗಿರುವ ಖಾತೆಗಳನ್ನು ತೆಗೆದುಹಾಕುತ್ತೇವೆ. ಕೆಳಗಿನ ಪ್ಲಾಟ್ಫಾರ್ಮ್ಗಳ ಲಿಂಕ್ಗಳು ಅಥವಾ ಬಳಕೆದಾರರ ಹೆಸರುಗಳನ್ನು ಒಳಗೊಂಡಿರುವ ಖಾತೆಗಳನ್ನು ತೆಗೆದುಹಾಕುತ್ತೇವೆ: Facebook, Instagram, Mastodon, Truth Social, Tribel, Nostr ಮತ್ತು Post' ಎಂದು ಟ್ವಿಟರ್ ತಿಳಿಸಿದೆ

ಇದಲ್ಲದೆ, ಯಾವುದೇ ಸಾಮಾಜಿಕ ಮಾಧ್ಯಮ ಪ್ಲಾಟ್ಫಾರ್ಮ್ನಿಂದ ಕ್ರಾಸ್-ಪೋಸ್ಟ್ ಮಾಡಲು ಅನುಮತಿ ನೀಡಲಾಗಿದೆ ಎಂದು ಟ್ವಿಟರ್ ಹೇಳಿದೆ.
ಹಲವು ಪ್ರಮುಖ ಪತ್ರಕರ್ತರ ಖಾತೆಗಳನ್ನು ಟ್ವಿಟರ್ನಿಂದ ಅಮಾನತುಗಳಿಸಲಾಗಿದೆ. ಈ ವಿಚಾರವೀಗ ವ್ಯಾಪಕ ಟೀಕೆಗೆ ಗುರಿಯಾಗಿದೆ. ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆಂಟೋನಿಯೊ ಗುಟೆರೆಸ್ ಸಹ ಎಲಾನ್ ಮಸ್ಕ್ ನಿರ್ಧಾರದ ಕುರಿತು ಬೇಸರ ವ್ಯಕ್ತಪಡಿಸಿದ್ದಾರೆ.
ಟ್ವಿಟರ್ನಿಂದ ಪತ್ರಕರ್ತರನ್ನು ಅಮಾನತುಗೊಳಿಸಿದ್ದಕ್ಕೆ ಗುಟೆರೆಸ್ ಅವರು ಬೇಸರ ವ್ಯಕ್ತಪಡಿಸಿದ್ದಾರೆ ಎಂದು ಗುಟೆರೆಸ್ ವಕ್ತಾರ ಸ್ಟೀಫನ್ ಡುಜಾರಿಕ್ ತಿಳಿಸಿದ್ದಾರೆ.
ವಾಕ್ ಸ್ವಾತಂತ್ರ್ಯದ ಜಾಗ ಎಂದು ಪ್ರತಿಪಾದಿಸುವ ವೇದಿಕೆಯಲ್ಲಿ ಮಾಧ್ಯಮದ ಧ್ವನಿಯನ್ನು ಮೌನಗೊಳಿಸಬಾರದು ಎಂದು ಅವರು ತಿಳಿಸಿದ್ದಾರೆ.
ವಿಶ್ವದಾದ್ಯಂತ ಪತ್ರಕರ್ತರು ಸೆನ್ಸಾರ್ಶಿಪ್, ಬೆದರಿಕೆಗಳು ಎದುರಿಸುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಈ ಕ್ರಮವು ಅಪಾಯಕಾರಿಯಾಗಿದೆ ಎಂದು ವಿಶ್ವಸಂಸ್ಥೆ ವಕ್ತಾರರು ಹೇಳಿದ್ದಾರೆ.
-
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
Resort: ಕರ್ನಾಟಕದಲ್ಲಿ ಶುರುವಾಯ್ತು ರೆಸಾರ್ಟ್ ರಾಜಕೀಯ: ‘ಅವರು ನಮ್ಮ ಅತಿಥಿಗಳು’ ಎಂದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ -
Horoscope March 13: ಈ ರಾಶಿಯವರ ಬದುಕಲ್ಲಿ ಸಕಾರಾತ್ಮಕ ಬೆಳವಣಿಗೆ, ಅಧಿಕ ಲಾಭ; ದಿನ ಭವಿಷ್ಯ












Click it and Unblock the Notifications