ನೆಗಡಿ ಇದೆ ಎಂದಾಕ್ಷಣ ಕೊರೊನಾ ಪರೀಕ್ಷೆ ಮಾಡಿಸಬೇಕೆ?: ತಜ್ಞರು ಏನಂತಾರೆ
ಕಳೆದ ವರ್ಷ ಈ ಚಳಿಗಾಲದಲ್ಲಿ ನಿಮಗೆ ಜ್ವರ ಬಂದಿತ್ತಾ, ಗಂಟಲು ಕೆರೆತ ಉಂಟಾಗಿತ್ತಾ, ಶೀತವಾಗಿತ್ತಾ ಎನ್ನುವುದು ಮುಖ್ಯವಲ್ಲ.
ಈ ಚಳಿಗಾಲದಲ್ಲಿ ಅಂತಹ ಯಾವುದೇ ತೊಂದರೆಗಳು ಕಾಣಿಸಿಕೊಂಡರೂ ಹೆದರುವ ಪರಿಸ್ಥಿತಿ ನಿರ್ಮಾಣವಾಗಿದೆ.
ರೋಗ ನಿಯಂತ್ರಣ ಮತ್ತು ತಡೆಗಟ್ಟುವಿಕೆ ಕೇಂದ್ರದ ಮಾಹಿತಿ ಪ್ರಕಾರ ರೋಗದ ಯಾವುದೇ ಒಂದು ಲಕ್ಷಣ ಕಂಡುಬಂದರೂ ಕೂಡ ಪರೀಕ್ಷೆ ಮಾಡಿಸಲೇಬೇಕು. ಆದರೆ ಯಾವುದೇ ಲಕ್ಷಣಗಳು ಸಣ್ಣ ಪ್ರಮಾಣದಲ್ಲಿದ್ದರೆ ಪರೀಕ್ಷೆಯ ಅಗತ್ಯವಿಲ್ಲ ಎಂದು ಕೆಲವು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ಪ್ರತಿವರ್ಷವೂ ಒಂದೆರೆಡು ರೋಗಗಳು ಸಾಮಾನ್ಯ
ಪ್ರತಿವರ್ಷವೂ ದೊಡ್ಡವರಿಗೆ ಒಂದೆರೆಡು ಉಸಿರಾಟದ ಸೋಂಕು ಮತ್ತು ಮಕ್ಕಳಿಗೆ ಸುಮಾರು ಐದು ರೀತಿಯ ಉಸಿರಾಟದ ಸೋಂಕುಗಳು ತಗುಲುತ್ತವೆ. ಹಾಗೆಂದ ಮಾತ್ರಕ್ಕೆ ಎಲ್ಲದಕ್ಕೂ ಪರೀಕ್ಷೆ ಮಾಡುತ್ತಿರಲು ಸಾಧ್ಯವಿಲ್ಲ ಎಂದು ಪ್ರೊ.ಅರ್ನಾಲ್ಡ್ ಎಸ್ ಮೋಂಟೊ ತಿಳಿಸಿದ್ದಾರೆ.

ನಿಮ್ಮ ಕುಟುಂಬ ಉಳಿಯಬೇಕಿದ್ದರೆ ಪರೀಕ್ಷೆ ಮಾಡಿಸಿ
ಯೂನಿವರ್ಸಿಟಿ ಆಫ್ ಚಿಕಾಗೊದ ಎಮಿಲಿ ಲಂಡನ್ ಮಾತನಾಡಿ, ಕೊವಿಡ್ ಆರಂಭ ಹಾಗೂ ನೆಗಡಿಯ ವ್ಯತ್ಯಾಸ ಕುರಿತು ಹೇಳಲು ಸಾಧ್ಯವಿಲ್ಲ.ನಿಮ್ಮ ಕುಟುಂಬದವರನ್ನು ರಕ್ಷಿಸಿಕೊಳ್ಳಬೇಕೆಂದರೆ ನೀವು ರೋಗದ ಯಾವುದೇ ಒಂದು ಲಕ್ಷಣಗಳು ಕಂಡು ಬಂದರೂ ಅದನ್ನು ನಿರ್ಲಕ್ಷಿಸಬೇಡಿ, ಆಸ್ಪತ್ರೆಗೆ ಹೋಗಿ ಪರೀಕ್ಷಿಸಿಕೊಳ್ಳಿ ಎಂದು ಸಲಹೆ ನೀಡಿದ್ದಾರೆ.

ನಿರ್ದಿಷ್ಟವಾದ ಉತ್ತರವಿಲ್ಲ
ಕೇವಲ ನೆಗಡಿ ಕಾಣಿಸಿಕೊಂಡಾಕ್ಷಣ ಆಸ್ಪತ್ರೆಗೆ ಹೋಗಬೇಕೆ ಎನ್ನುವ ಪ್ರಶ್ನೆ ಸಾಕಷ್ಟು ಮಂದಿಯನ್ನು ಕಾಡುತ್ತಿದೆ. ಕಳೆದ ವರ್ಷವೂ ನನಗೆ ಜ್ವರ, ಶೀತವಾಗಿತ್ತು, ಹಾಗೆಯೇ ಗುಣಮುಖನಾಗಿದ್ದೆ, ಈ ಬಾರಿಗೂ ಹಾಗೆಯೇ ಕಡಿಮೆಯಾಗುತ್ತದೆ ಅದಕ್ಕೆ ಆಸ್ಪತ್ರೆ ಏಕೆ ಎಂದು ಕೆಲವರು ಪ್ರಶ್ನೆ ಮಾಡುತ್ತಿದ್ದಾರೆ. ಆದರೆ ಇದ್ಯಾವುದಕ್ಕೂ ನಿರ್ದಿಷ್ಟ ಉತ್ತರವಿಲ್ಲ. ಕೆಲವು ತಜ್ಞರು ಕೊವಿಡ್ ಯಾವುದು ಸಾಮಾನ್ಯ ನೆಗಡಿಯಾವುದು ಎಂದು ಆರಂಭದಲ್ಲಿ ವ್ಯತ್ಯಾಸ ಗುರುತಿಸುವುದು ಕಷ್ಟ ಹಾಗಾಗಿ ಆಸ್ಪತ್ರೆಗೆ ತೆರಳಿ ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಸಲಹೆ ನೀಡಿದರೆ, ಇನ್ನು ಕೆಲವು ತಜ್ಞರು ಶೀತ, ಜ್ವರ ಎಲ್ಲಾ ವರ್ಷ ವರ್ಷವೂ ಬರುವಂಥದ್ದು ಹೀಗಾಗಿ ರೋಗದ ಸಣ್ಣ ಲಕ್ಷಣಗಳಿದ್ದರೆ ಚಿಕಿತ್ಸೆ ಅಗತ್ಯವಿಲ್ಲ ಎಂದು ಹೇಳಿದ್ದಾರೆ.

ಕೊರೊನಾ ಲಕ್ಷಣಗಳೇನು?
ನೆಗಡಿ, ಸೀನುವುದು, ಗಂಟಲು ತುರಿಕೆ, ಜ್ವರ, ಕಣ್ಣಿನಲ್ಲಿ ನೀರು ತುಂಬಿಕೊಂಡಿರುವುದು ಕೊರೊನಾ ಸೋಂಕಿನ ಸಾಮಾನ್ಯ ಲಕ್ಷಣವಾಗಿದೆ. ಅಷ್ಟೇ ಅಲ್ಲದೆ ಉಸಿರಾಟ ತೊಂದರೆ, ತಲೆನೋವು, ಮೈಕೈ ನೋವು, ವಾಸನೆ ಗ್ರಹಿಕೆ ಇಲ್ಲದಿರುವುದು ಕೂಡ ಒಂದು ಲಕ್ಷಣವಾಗಿದೆ.
Recommended Video
-
ರಾಜ್ಯದ ಕಳೆದ 3 ವರ್ಷಗಳ ದ್ವಿತೀಯ PUC ಫಲಿತಾಂಶದ ಹೈಲೈಟ್ಸ್; ಮೇಲುಗೈ ಸಾಧಿಸಿದ ಜಿಲ್ಲೆಗಳು ಯಾವುವು? ಇಲ್ಲಿದೆ ಮಾಹಿತಿ -
ಹೈಟೆಕ್ ಬೆಂಗಳೂರು ಬಿಸಿನೆಸ್ ಕಾರಿಡಾರ್: 65ಮೀ ವಿಸ್ತರಣೆ, ಮೆಟ್ರೋ-ಸೈಕಲ್ ಟ್ರ್ಯಾಕ್ಗಳೂ ಲಭ್ಯ; ವಿನ್ಯಾಸ ವಿವರ -
Horoscope April 8: ಕೆಲವರಿಗೆ ಯಶಸ್ಸು, ಕೆಲವರಿಗೆ ಜಾಗ್ರತೆ ಸೂಚಿಸುವ ದಿನ ಭವಿಷ್ಯ -
Bengaluru Road: ಬನ್ನೇರುಘಟ್ಟ ರಸ್ತೆ ಪ್ರಯಾಣಿಕರಿಗೆ ಗುಡ್ನ್ಯೂಸ್: ಸಮಗ್ರ ಅಭಿವೃದ್ಧಿಗೆ ಜಿಬಿಎ ಮಾಸ್ಟರ್ ಪ್ಲಾನ್ -
April 9 Horoscope: 12 ರಾಶಿಗಳಿಗೆ ಇಂದು ಸಂತೋಷ, ಸವಾಲು ಮತ್ತು ಅವಕಾಶಗಳ ಮಿಶ್ರ ಫಲ -
Iran 10 Demands: ಕದನ ವಿರಾಮಕ್ಕೆ ಇರಾನ್ ವಿಧಿಸಿರುವ 10 ಷರತ್ತುಗಳ ವಿವರ ಇಲ್ಲಿದೆ, ನ್ಯೂಕ್ಲಿಯರ್ ಬೇಡ ಎಂದಿದ್ಯಾಕೆ -
Karnataka Rain: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಈ ಭಾಗಗಳಲ್ಲಿ ಭಾರೀ ಮಳೆ: ಐಎಂಡಿ -
ನಿಮ್ಮ ಸಂಬಳಕ್ಕೆ ಎಷ್ಟು ಬೆಲೆಯ ಮನೆ ಖರೀದಿಸಬಹುದು? Viral ಆಗುತ್ತಿದೆ ಬೆಂಗಳೂರಿನ ಸಿಎ ತಿಳಿಸಿದ 20-30-40 ರೂಲ್ -
Bengaluru Rent House: ಬೆಂಗಳೂರಲ್ಲಿ 1 BHK ಬಾಡಿಗೆ ಮನೆ ಸ್ಕ್ಯಾಮ್; 30,000 ಕೊಟ್ಟರೂ ಒಳ್ಳೆ ಮನೆ ಸಿಗ್ತಿಲ್ಲ, ವೈರಲ್ ಪೋಸ್ಟ್ -
Donald Trump: ಹಾರ್ಮುಜ್ ಜಲಸಂಧಿ ವಿಚಾರದಲ್ಲಿ ಇರಾನ್ ಕಳಪೆ ಕೆಲಸ ಮಾಡಿದೆ: ಡೊನಾಲ್ಡ್ ಟ್ರಂಪ್ -
Viral: ಬೆಂಗಳೂರಿಗೆ ಕಾಲಿಟ್ಟಿತೇ ಡೇಂಜರಸ್ 'ಜಾಂಬಿ ಡ್ರಗ್'?: ಯುವಕನ ವಿಡಿಯೋ ನೋಡಿ ಬೆಚ್ಚಿಬಿದ್ದ ಸಿಲಿಕಾನ್ ಸಿಟಿ ಜನ -
Gold Rate April 8: ಯುದ್ಧ ನಿಂತ ಬೆನ್ನಲ್ಲೇ ಚಿನ್ನ - ಬೆಳ್ಳಿ ಬೆಲೆ ಭಾರೀ ಹೆಚ್ಚಳ, ಎಷ್ಟಿದೆ ಇಂದಿನ ಚಿನ್ನದ ಬೆಲೆ












Click it and Unblock the Notifications