SpaceX Mission: 20 ದಿನಗಳ ನಂತರ ಆಕಾಶದಿಂದ ಭೂಮಿಗೆ ಬಂದ ವಿಜ್ಞಾನಿ ಶುಭಾಂಶು ಶುಕ್ಲಾ!
ಭಾರತೀಯ ಬಾಹ್ಯಾಕಾಶ ಲೋಕದಲ್ಲಿ ಇಂದು ಮತ್ತೊಂದು ಇತಿಹಾಸ ನಿರ್ಮಾಣ ಆಗಿದ್ದು, ಭಾರತೀಯ ವಿಜ್ಞಾನಿ ಶುಭಾಂಶು ಶುಕ್ಲಾ ಅವರು 20 ದಿನಗಳ ನಂತರ ಆಕಾಶದಿಂದ ಭೂಮಿಗೆ ಬಂದಿದ್ದಾರೆ. ಮನುಷ್ಯರ ಭವಿಷ್ಯದ ದೃಷ್ಟಿಯಿಂದ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ ಹಲವು ಸಂಶೋಧನೆ ನಡೆಸುವ ಅಗತ್ಯತೆ ಇದ್ದು, ಇದಕ್ಕಾಗಿ ಶುಭಾಂಶು ಶುಕ್ಲಾ ಅವರು ನಾಸಾ ಸಂಸ್ಥೆ ಯೋಜನೆಯಲ್ಲಿ ಪಾಲ್ಗೊಂಡಿದ್ದರು. ಹೀಗೆ ಎಲ್ಲಾ ಸಂಶೋಧನೆಗಳನ್ನು ಯಶಸ್ವಿಯಾಗಿ ಪೂರೈಸಿ ಇದೀಗ ವಾಪಸ್ ಭೂಮಿಗೆ ಬಂದಿದ್ದಾರೆ.
ಬಾಹ್ಯಾಕಾಶ ಸಂಶೋಧನೆಗಳಿಗೆ ಅಂತಾನೇ ನಾಸಾ ಸೇರಿದಂತೆ ಜಾಗತಿಕ ಬಾಹ್ಯಾಕಾಶ ಸಂಶೋಧನೆ ನಡೆಸುವ ಸಂಸ್ಥೆಗಳು ಒಗ್ಗಟ್ಟಾಗಿ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣ ಸ್ಥಾಪನೆ ಮಾಡಿವೆ. ಈ ಮೂಲಕ ಭಾರಿ ದೊಡ್ಡ ಮಟ್ಟದಲ್ಲಿ ಸಂಶೋಧನೆ ನಡೆಸಲಾಗುತ್ತಿದೆ. ಪದೇ ಪದೇ ಭೂಮಿಯಿಂದ ವಿಜ್ಞಾನಿಗಳನ್ನ ಅಲ್ಲಿಗೆ ಅಂದ್ರೆ ಭೂಮಿಯ ಸುತ್ತಲೂ ಸುತ್ತುತ್ತಾ ಇರುವ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ಕಳುಹಿಸಿ, ಸಂಶೋಧನೆ ನಡೆಸಲಾಗುತ್ತಿದೆ. ಅದೇ ರೀತಿ ಭಾರತೀಯ ವಿಜ್ಞಾನಿ ಶುಭಾಂಶು ಶುಕ್ಲಾ ಅವರ ನೇತೃತ್ವದಲ್ಲಿ ಕಳೆದ ತಿಂಗಳು ಬಾಹ್ಯಾಕಾಶ ಯಾನ ಕೈಗೊಳ್ಳಲಾಗಿತ್ತು.

ಬಾಹ್ಯಕಾಶದಲ್ಲಿ ಭರ್ಜರಿ ಸಂಶೋಧನೆ
ಶುಭಾಂಶು ಶುಕ್ಲಾ ಅವರ ನೇತೃತ್ವದಲ್ಲಿ ಜೂನ್ 25 ಬುಧವಾರ ಆಕ್ಸಿಯಮ್-4 ಮಿಷನ್ ಉಡಾವಣೆ ಮಾಡಿತ್ತು ನಾಸಾ ಸಂಸ್ಥೆ. ಆ ಬಳಿಕ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣ ತಲುಪಿದ್ದ ಶುಭಾಂಶು ಶುಕ್ಲಾ ನೇತೃತ್ವದ ತಂಡ, ಸುಮಾರು 20 ದಿನಗಳ ಕಾಲ ಭರ್ಜರಿಯಾಗಿ ಸಂಶೋಧನೆ ನಡೆಸಿದೆ. ಭೂಮಿಯಿಂದ ಹೊರಗಡೆ, ಅಂದ್ರೆ ಬಾಹ್ಯಾಕಾಶದಲ್ಲಿ ಸಸ್ಯಗಳನ್ನು ಬೆಳೆಸುವುದು ಸೇರಿದಂತೆ ಹಲವು ಸೂಕ್ಷ್ಮ ಜೀವಿಗಳ ಮೇಲೆ ಭಾರಿ ಗಂಭೀರ ಅಧ್ಯಯನ ನಡೆಸಲಾಗಿತ್ತು. ಇದೀಗ ಅದೆಲ್ಲಾ ಯಶಸ್ವಿಯಾಗಿದ್ದು, ಶುಭಾಂಶು ಶುಕ್ಲಾ ಅವರು ಭೂಮಿಗೆ ವಾಪಸ್ ಬಂದಿದ್ದಾರೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications