ಕ್ಯಾಲಿಫೋರ್ನಿಯಾದಲ್ಲಿ ಸಿಖ್ ಯುವಕನ ಬರ್ಬರ ಹತ್ಯೆ
ಈ ವಾರದಲ್ಲಿ ಅಮೆರಿಕದಲ್ಲಿ ನಡೆದಿರುವ ಮೂರ ಹತ್ಯೆ ಇದಾಗಿದೆ. ಶನಿವಾರವಷ್ಟೇ, ಸಾನ್ ಜೋಸ್ ಎಂಬಲ್ಲಿ ಮಂಗಳೂರು ಮೂಲದ ದಂಪತಿಯನ್ನು ದುಷ್ಕರ್ಮಿಯೊಬ್ಬ ಶೂಟೌಟ್ ಮಾಡಿ ಹತ್ಯೆಗೈದಿದ್ದ.
ಕ್ಯಾಲಿಫೋರ್ನಿಯಾ, ಮೇ 8: ಸುಮಾರು 32 ವರ್ಷದ ಜಗಜೀತ್ ಸಿಂಗ್ ಎಂಬ ಸಿಖ್ ಯುವಕನೊಬ್ಬನನ್ನು ಕ್ಯಾಲಿಫೋರ್ನಿಯಾದಲ್ಲಿ ಇರಿದು ಕೊಲ್ಲಲಾಗಿದೆ ಎಂದು ಪಿಟಿಐ ಹೇಳಿದೆ.
ಕ್ಯಾಲಿಫೋರ್ನಿಯಾದ ಮಳಿಗೆಯೊಂದರಲ್ಲಿ ಸಿಗರೇಟು ಖರೀದಿಗೆ ಸಂಬಂಧಿಸಿದಂತೆ ಉಂಟಾದ ಅಲ್ಪ ಗಲಾಟೆಯಿಂದಾಗಿ ಈ ಯುವಕನನ್ನು ಯುವಕನೊಬ್ಬ ಕೊಂದಿದ್ದಾನೆ.[ಅಮೆರಿಕದಲ್ಲಿ ಮಂಗಳೂರು ಮೂಲದ ದಂಪತಿ ಹತ್ಯೆ]

ಈ ವಾರದಲ್ಲಿ ಅಮೆರಿಕದಲ್ಲಿ ನಡೆದಿರುವ ಮೂರ ಹತ್ಯೆ ಇದಾಗಿದೆ. ಶನಿವಾರವಷ್ಟೇ, ಸಾನ್ ಜೋಸ್ ಎಂಬಲ್ಲಿ ಮಂಗಳೂರು ಮೂಲದ ದಂಪತಿಯನ್ನು ದುಷ್ಕರ್ಮಿಯೊಬ್ಬ ಶೂಟೌಟ್ ಮಾಡಿ ಹತ್ಯೆಗೈದಿದ್ದ.
ಪಂಜಾಬ್ ನ ಕಪುರ್ತಲಾ ನಗರ ಮೂಲದ ಜಗಜೀತ್ ಸಿಂಗ್, ಕೆಲ ವರ್ಷಗಳ ಹಿಂದೆ ಅಮೆರಿಕಕ್ಕೆ ಹೋಗಿದ್ದರು. ಕ್ಯಾಲಿಫೋರ್ನಿಯಾದ ದಿನಸಿ ಮಳಿಗೆಯೊಂದರಲ್ಲಿ ಅವರು ಕೆಲಸ ಮಾಡುತ್ತಿದ್ದರು.[ಅಮೆರಿಕಾದಲ್ಲಿ ಭಾರತೀಯ ಮೂಲದ ವೈದ್ಯ ಅನುಮಾನಾಸ್ಪದ ಸಾವು]
ಸೋಮವಾರ, ಯುವಕನೊಬ್ಬ ಅಂಗಡಿಗೆ ಬಂದು ನಿರ್ದಿಷ್ಟ ಬ್ರಾಂಡ್ ನ ಸಿಗರೇಟು ಕೇಳಿದ. ಹಾಗಾಗಿ, ನಿಯಮಗಳ ಪ್ರಕಾರ, ಜಗಜೀತ್ ಸಿಂಗ್ ಯುವಕನ ಐಡಿ ಕಾರ್ಡ್ ನೀಡುವಂತೆ ಕೇಳಿದ್ದಾರೆ. ಆತ ಐಡಿ ಕಾರ್ಡ್ ತೋರಿಸದಿದ್ದ ಹಿನ್ನೆಲೆಯಲ್ಲಿ ಆತನಿಗೆ ಸಿಗರೇಟ್ ಕೊಡಲು ಜಗಜೀತ್ ನಿರಾಕರಿಸಿದ್ದಾರೆ.
ಇದರಿಂದ ಕುಪಿತಗೊಂಡ ಆತ ಬಾಯಿಬಂದಂತೆ ಬಯ್ದಾಡುತ್ತಾ, ಜಗಜೀತ್ ಅವರನ್ನು ಜನಾಂಗೀಯ ನಿಂದನೆಗೆ ಗುರಿಪಡಿಸಿ ಬುಸುಗುಡುತ್ತಾ 'ಇದರ ಘೋರ ಪರಿಣಾಮ ಅನುಭವಿಸಬೇಕಾಗುತ್ತದೆ' ಎಂದು ಎಚ್ಚರಿಕೆ ನೀಡಿ ಹೋಗಿದ್ದಾನೆ.
ಹಾಗೆ, ಅಂಗಡಿಯಿಂದ ಹೊರಹೋಗದ ಅರ್ಧಗಂಟೆ ನಂತರ ಪುನಃ ಅಂಗಡಿಯೊಳಕ್ಕೆ ನುಗಿದ್ದ ಆ ಯುವಕ ಕ್ಯಾಶ್ ಕೌಂಟರ್ ನಲ್ಲಿದ್ದ ಜಗ್ ಜೀತ್ ಸಿಂಗ್ ಅವರನ್ನು ತನ್ನೊಂದಿಗೆ ತಂದಿದ್ದ ಚೂರಿಯಿಂದ ನೋಡನೋಡುತ್ತಲೇ ಇರಿದು ಹತ್ಯೆಗೈದ ಎಂದು ಅದೇ ಅಂಗಡಿಯಲ್ಲಿ ಕೆಲಸ ಮಾಡುತ್ತಿರುವ ಮತ್ತೊಬ್ಬ ಭಾರತೀಯ ಸುಖ್ವಿಂದರ್ ಸಿಂಗ್ ತಿಳಿಸಿದ್ದಾರೆ.
ಸಮಗ್ರ ಘಟನೆಯು ಅಂಗಡಿಯಲ್ಲಿನ ಸಿಸಿಟಿವಿಯಲ್ಲಿ ದಾಖಲಾಗಿದ್ದು, ಇದರ ಆಧಾರದ ಮೇರೆಗೆ ಪೊಲೀಸರು ತನಿಖೆ ಆರಂಭಿಸಿದ್ದಾರೆ.
-
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion -
LPG Gas: ಗೃಹ-ವಾಣಿಜ್ಯ ಸಿಲಿಂಡರ್ ಬುಕಿಂಗ್ ಮಿತಿ, ದಾಸ್ತಾನು ನಿಯಮಗಳೇನು? ಗ್ಯಾಸ್ ದರಪಟ್ಟಿ












Click it and Unblock the Notifications