ಪಿಎನ್ ಬಿ ಹಗರಣ: ಸ್ವಿಸ್ ಬ್ಯಾಂಕ್ ನಂತರ ಸಿಂಗಪುರ ಬ್ಯಾಂಕ್ ಖಾತೆ ಜಪ್ತಿ
ಸಿಂಗಪುರ, ಜುಲೈ 03: ಪಂಜಾಬ್ ನ್ಯಾಷನಲ್ ಬ್ಯಾಂಕಿನ ಬಹುಕೋಟಿ ಹಗರಣದ ಪ್ರಮುಖ ಆರೋಪಿ, ದೇಶಭ್ರಷ್ಟ ಉದ್ಯಮಿ ನೀರವ್ ಮೋದಿ ಅವರಿಗೆ ಸಂಬಂಧಿಸಿದ ಆಸ್ತಿ, ವಸ್ತುಗಳನ್ನು ಜಪ್ತಿ, ಹರಾಜು ಹಾಕಿದ ಬಳಿಕ ತನಿಖಾ ಸಂಸ್ಥೆ ಜಾರಿ ನಿರ್ದೇಶನಲಯವು ಜಪ್ತಿ ಕಾರ್ಯ ಮುಂದುವರೆಸಿದೆ.
ಈ ನಡುವೆ ಸ್ವಿಸ್ ಬ್ಯಾಂಕಿನ ನಾಲ್ಕು ಖಾತೆಗಳು ಜಪ್ತಿಯಾಗಿತ್ತು. ಈಗ ಮೋದಿ ಅವರ ಸೋದರಿಗೆ ಸೇರಿದ ಸಿಂಗಪುರದ ಬ್ಯಾಂಕ್ ಖಾತೆಯನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದೆ.
ಸಿಂಗಪುರದ ಹೈಕೋರ್ಟ್ ಮಂಗಳವಾರದಂದು ನೀರವ್ ಮೋದಿ ಅವರ ಸೋದರಿ ಪೂರ್ವಿ ಮೋದಿ ಮೆಹ್ತಾ ಅವರ ಬ್ಯಾಂಕ್ ಖಾತೆ ಜಪ್ತಿಗೆ ಆದೇಶ ನೀಡಿದೆ. ಸುಮಾರು 14,356 ಕೋಟಿ ರು ಹಗರಣದಲ್ಲಿ ಪೂರ್ವಿ ಅವರು ಕೂಡಾ ಸಹ ಆರೋಪಿಯಾಗಿದ್ದಾರೆ.
ದುಬೈ ಹಾಗೂ ಹಾಂಗ್ ಕಾಂಗ್ ಮೂಲದ ಕಂಪನಿಗೆ ಮೆಹ್ತಾ ಅವರು ನಿರ್ದೇಶಕಿಯಾಗಿದ್ದರು. ನೀರವ್ ಮೋದಿ ಅವರ ಗೀತಾಂಜಲಿ ಸಂಸ್ಥೆಯ ವ್ಯವಹಾರಗಳನ್ನು ನಿರ್ವಹಿಸುತ್ತಿದ್ದರು. ವಿದೇಶಿ ವಿನಿಯಮ ಕಾಯ್ದೆ ಉಲ್ಲಂಘಿಸಿರುವ ಪೂರ್ವಿ ಮೆಹ್ತಾ ಅವರು ಕೂಡಾ ಈ ಮನಿ ಲಾಂಡ್ರಿಂಗ್ ಪ್ರಕರಣದಲ್ಲಿ ಮಹತ್ವದ ಪಾತ್ರ ಹೊಂದಿದ್ದಾರೆ ಎಂದು ಜಾರಿ ನಿರ್ದೇಶನಾಲಯ ತನ್ನ ದೋಷಾರೋಪಣ ಪಟ್ಟಿಯಲ್ಲಿ ಹೇಳಿದೆ.
ನೀರವ್ ಮೋದಿ, ಮೆಹುಲ್ ಚೊಕ್ಸಿ ಅವರು ಭಾರತದಿಂದ ಪರಾರಿಯಾಗಿದ್ದು, ವಿವಿಧ ತನಿಖಾ ಸಂಸ್ಥೆಗಳು ಇವರಿಬ್ಬರನ್ನು ಭಾರತಕ್ಕೆ ಕರೆ ತಂದು ವಿಚಾರಣೆ ನಡೆಸಲು ಯತ್ನಿಸುತ್ತಿವೆ.

ಸ್ವಿಸ್ ಬ್ಯಾಂಕ್ ಖಾತೆ ಜಪ್ತಿ ಮೊತ್ತ
ನೀರವ್ ಮೋದಿಯ 4 ಸ್ವಿಸ್ ಬ್ಯಾಂಕ್ ಖಾತೆಯಿಂದ ಸಿಕ್ಕ ಮೊತ್ತ ಬಹಿರಂಗವಾಗಿದ್ದು, ಸುಮಾರು 283.16 ಕೋಟಿ ರು ಗಳನ್ನು ತನಿಖಾ ಸಂಸ್ಥೆಗಳು ತಮ್ಮ ವಶಕ್ಕೆ ತೆಗೆದುಕೊಂಡಿವೆ. 3,74,11,596 ಡಾಲರ್ ಠೇವಣಿ ಹೊಂದಿದ್ದರೆ, ಸೋದರಿ ಪೂರ್ವಿ ಮೋದಿ ಖಾತೆಯಲ್ಲಿ 27,38,136 ಬ್ರಿಟಿಷ್ ಪೌಂಡ್ ಹೊಂದಿದ್ದರು. ಸುಮಾರು 13,700 ಕೋಟಿ ರು ಪಂಜಾಬ್ ನ್ಯಾಷನಲ್ ಬ್ಯಾಂಕ್ ಹಗರಣದಲ್ಲಿ ಪೂರ್ವಿ ಮೋದಿ ಕೂಡಾ ಸಹ ಆರೋಪಿಯಾಗಿದ್ದಾರೆ.

ಪೂರ್ವಿ ಮೋದಿ ಮೆಹ್ತಾ
ಸಿಂಗಪುರ ಹೈಕೋರ್ಟ್ ಆದೇಶದಂತೆ ಪೂರ್ವಿ ಮೋದಿ ಮೆಹ್ತಾ ಅವರ ಖಾತೆಯನ್ನು ಜಪ್ತಿ ಮಾಡಲಾಗಿದ್ದು, 6.122 ಡಾಲರ್( 44.41 ಕೋಟಿ ರು) ಮೊತ್ತವನ್ನು ವಶಕ್ಕೆ ಪಡೆಯಲಾಗಿದೆ. ಪೂರ್ವಿ ಮೆಹ್ತಾ ಹಾಗೂ ಅವರ ಪತಿ ಮೈಯಾಂಕ್ ಮೆಹ್ತಾ ಒಡೆತನದ ಬ್ರಿಟಿಷ್ ವರ್ಜಿನ್ ಐಲ್ಯಾಂಡ್ ನ ಪೆವಿಲಿಯನ್ ಪಾಯಿಂಟ್ ಕಾರ್ಪೊರೇಷನ್ ಕಂಪನಿ ಹೆಸರಿನಲ್ಲಿ ಖಾತೆ ನಿರ್ವಹಣೆಯಾಗುತ್ತಿತ್ತು.
ಮಾರ್ಚ್ ತಿಂಗಳಿನಲ್ಲಿ ಜಾರಿ ನಿರ್ದೇಶನಾಲಯ ಹಾಕಿರುವ ಹೊಸ ಚಾರ್ಜ್ ಶೀಟ್ ನಲ್ಲಿ ಪಿಎಂಎಲ್ ಎ ಕಾಯ್ದೆ ಉಲ್ಲಂಘನೆ, 1,201.18ಕೋಟಿ ರು ಅಕ್ರಮ ವರ್ಗಾವಣೆ ಆರೋಪವನ್ನು ಪೂರ್ವಿ ಮೇಲೆ ಹಾಕಲಾಗಿದೆ.

ಮನಿಲಾಂಡ್ರಿಂಗ್ ಅವ್ಯವಹಾರ
ನೀರವ್ ಮೋದಿ ಅವರು 6,400 ಕೋಟಿ ರು ಮನಿಲಾಂಡ್ರಿಂಗ್ ಅವ್ಯವಹಾರದಲ್ಲಿ ತೊಡಗಿದ್ದರು ಎಂದು ಜಾರಿ ನಿರ್ದೇಶನಾಲಯವು ತನ್ನ ದೋಷಾರೋಪಣ ಪಟ್ಟಿಯಲ್ಲಿ ಹೇಳಿದೆ. ಪಿಎಂಎಲ್ಎ ಕಾಯ್ದೆ ಉಲ್ಲಂಘನೆಯಡಿಯಲ್ಲಿ ಥೈಲ್ಯಾಂಡ್ ನಲ್ಲಿ 13 ಕೋಟಿ ರು ಮೌಲ್ಯದ ಆಸ್ತಿ ವಶ ಪಡಿಸಿಕೊಳ್ಳಲಾಗಿತ್ತು. ಗೀತಾಂಜಲಿ ಸಮೂಹ ಸಂಸ್ಥೆಗೆ ಸೇರಿದ ಈ ಆಸ್ತಿಗೆ ನೀರವ್ ಅವರ ಅಂಕಲ್ ಮೆಹುಲ್ ಚೋಕ್ಸಿ ಅವರು ಸಹ ಮಾಲೀಕರಾಗಿದ್ದಾರೆ

ಲಂಡನ್ನಿನಲ್ಲಿ ಜಾಮೀನಿಗಾಗಿ ನೀರವ್ ಹೋರಾಟ
ಲಂಡನ್ನಲ್ಲಿ ನೀರವ್ ಮೋದಿಯನ್ನು ಬಂಧಿಸಲಾಗಿದ್ದು, ಆತನನ್ನು ನ್ಯಾಯಾಂಗ ಬಂಧನದಲ್ಲಿ ಇರಿಸಲಾಗಿದೆ. ನೀರವ್ ಮೋದಿ ಅವರು ಜಾಮೀನಿಗಾಗಿ ಐದು ಬಾರಿ ಮನವಿ ಸಲ್ಲಿಸಿದ್ದರೂ ಜಾಮೀನು ಸಿಕ್ಕಿಲ್ಲ. ನೀರವ್ ಮೋದಿಗೆ ಇಂಗ್ಲೆಂಡಿನ ವೆಸ್ಟ್ಮಿನಿಸ್ಟರ್ ಕೋರ್ಟ್ ಜಾಮೀನು ನಿರಾಕರಿಸುತ್ತಾ ಬಂದಿದೆ. ಮೋದಿ ಅವರ ಮಕ್ಕಳು ಲಂಡನ್ನಿನಲ್ಲೇ ವ್ಯಾಸಂಗ ಮಾಡುತ್ತಿದ್ದು, ಲಂಡನ್ ಬಿಡುವುದಿಲ್ಲ, ತನಿಖೆಗೆ ಸಹಕರಿಸುತ್ತಿದ್ದಾರೆ ಎಂದು ಮೋದಿ ಪರ ವಕೀಲರು ವಾದಿಸಿದ್ದರು.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications