ಮಕ್ಕಳಲ್ಲಿ ಹೆಚ್ಚಾದ ಕೊರೊನಾ ರೂಪಾಂತರ ಸೋಂಕು; ಶಾಲೆಗಳಿಗೆ ಬೀಗ ಜಡಿದ ಸಿಂಗಪುರ
ಸಿಂಗಪುರ, ಮೇ 17: ಸಿಂಗಪುರದಲ್ಲಿ ರೂಪಾಂತರಗೊಂಡಿರುವ ಕೊರೊನಾ ಸೋಂಕು ಮಕ್ಕಳಲ್ಲಿ ಹೆಚ್ಚಾಗಿ ಕಂಡುಬರುತ್ತಿದೆ. ಈ ಹಿನ್ನೆಲೆಯಲ್ಲಿ ಸಿಂಗಪುರ ಆಡಳಿತಾಧಿಕಾರಿಗಳು ಎಚ್ಚರಿಕೆ ನೀಡಿದ್ದು, ಬುಧವಾರದಿಂದ ಶಾಲೆಗಳನ್ನು ಮುಚ್ಚಲು ನಿರ್ಧರಿಸಲಾಗಿದೆ.
ಕಳೆದ ಎಂಟು ತಿಂಗಳಿನಿಂದ ಸಿಂಗಪುರ ಕೊರೊನಾ ಸೋಂಕಿನಿಂದ ಮುಕ್ತವಾಗಿತ್ತು. ಆದರೆ ಈಚೆಗೆ ಕೊರೊನಾ ಪ್ರಕರಣಗಳು ಮತ್ತೆ ಪತ್ತೆಯಾಗಿದ್ದು, ಸರ್ಕಾರ ಕಠಿಣ ನಿಯಮಗಳನ್ನು ಹೇರಲು ನಿರ್ಧರಿಸಿದೆ. ಜೊತೆಗೆ ಕೊರೊನಾ ರೂಪಾಂತರ ಸೋಂಕು ಮಕ್ಕಳ ಮೇಲೆ ಹೆಚ್ಚಾಗಿ ಪರಿಣಾಮ ಬೀರುತ್ತಿದೆ ಎಂಬ ಕಾರಣಕ್ಕೆ ಪ್ರಾಥಮಿಕ, ಪ್ರೌಢಶಿಕ್ಷಣ ಹಾಗೂ ಕಾಲೇಜುಗಳನ್ನು ಮೇ 19ರಿಂದ ಮುಚ್ಚಲು ನಿರ್ಧರಿಸಲಾಗಿದೆ.
ಭಾನುವಾರ ಸಿಂಗಪುರದಲ್ಲಿ 38 ಜನರಲ್ಲಿ ಕೊರೊನಾ ಸೋಂಕು ದೃಢಪಟ್ಟಿತ್ತು. ಎಂಟು ತಿಂಗಳ ನಂತರ ಇದೇ ಮೊದಲ ಬಾರಿ ಒಂದೇ ದಿನದಲ್ಲಿ ದಾಖಲಾದ ಅತಿ ಹೆಚ್ಚು ಪ್ರಕರಣ ಇದಾಗಿತ್ತು. ಜೊತೆಗೆ ಶಾಲೆಗೆ ತೆರಳುತ್ತಿದ್ದ ಮಕ್ಕಳಿಗೆ ಕೊರೊನಾ ಸೋಂಕು ತಗುಲಿರುವುದು ಪತ್ತೆಯಾದ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.

"ಭಾರತದಲ್ಲಿ ಮೊದಲ ಬಾರಿ ಪತ್ತೆಯಾಗಿದ್ದ B.1.617 ರೂಪಾಂತರ ಸೋಂಕಿನಂಥ ಮಾದರಿ ಮಕ್ಕಳ ಮೇಲೆ ಹೆಚ್ಚಿನ ಪರಿಣಾಮ ಬೀರುತ್ತಿರುವುದು ಗೋಚರಿಸಿದೆ. ಇದು ಅತ್ಯಂತ ವೇಗವಾಗಿ ಹರಡುತ್ತಿದೆ. ಆದರೆ ಸೋಂಕಿಗೆ ಒಳಗಾಗಿರುವ ಮಕ್ಕಳ ಸ್ಥಿತಿ ಗಂಭೀರವಾಗಿಲ್ಲ. ಮುಂಜಾಗ್ರತಾ ಕ್ರಮವಾಗಿ ಶಾಲೆಗಳನ್ನು ಮುಚ್ಚಲು ಸೂಚಿಸಲಾಗಿದೆ" ಎಂದು ಆರೋಗ್ಯ ಸಚಿವ ಆನ್ ಯೆ ಕಂಗ್ ತಿಳಿಸಿದ್ದಾರೆ.
-
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ..












Click it and Unblock the Notifications