ಸಿಂಗಾಪುರದಿಂದ 52 ಭಾರತೀಯರು ಗಡಿಪಾರು
ಸಿಂಗಾಪುರ, ಡಿ.17: ಸುಮಾರು 40 ವರ್ಷಗಳ ಇತಿಹಾಸದಲ್ಲಿ ಕಂಡು ಕೇಳರಿಯದ ಭೀಕರ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಂಗಾಪುರ ಸರ್ಕಾರ ಕಠಿಣ ಕ್ರಮ ಜರುಗಿಸಿದೆ. 52 ಮಂದಿ ಭಾರತೀಯರನ್ನು ಗಡಿಪಾರುಗೊಳಿಸಲು ಪರಿಶೀಲನೆ ನಡೆಸಿದ್ದು, ಘಟನೆಯಲ್ಲಿ ಭಾಗಿಯಾಗಿದ್ದಾರೆ ಎನ್ನಲಾದ ಇನ್ನಿತರ ಸುಮಾರು 200 ಮಂದಿಗೆ ಎಚ್ಚರಿಕೆ ನೀಡಲಾಗಿದೆ.
ಡಿಸೆಂಬರ್ 8ರಂದು ಭಾರತೀಯ ಸಮುದಾಯವೇ ಪ್ರಮುಖವಾಗಿ ನೆಲೆಸಿರುವ 'ಲಿಟ್ಲ್ ಇಂಡಿಯಾ' ಪ್ರದೇಶದಲ್ಲಿ ಖಾಸಗಿ ಬಸ್ಸೊಂದು ಭಾರತೀಯನೋರ್ವನಿಗೆ ಢಿಕ್ಕಿ ಹೊಡೆದು ಸಾವಿಗೆ ಕಾರಣವಾಗಿತ್ತು. ಈ ಹಿನ್ನೆಲೆಯಲ್ಲಿ ಭಾರತೀಯ ಸಮುದಾಯವು ನಡೆಸಿದ ಪ್ರತಿಭಟನೆ ಹಿಂಸಾರೂಪಕ್ಕೆ ತಿರುಗಿತ್ತು. ಹಿಂಸಾಚಾರದ ವೇಳೆ ಹಲವರು ಗಾಯಗೊಂಡಿದ್ದು, ಅನೇಕ ವಾಹನಗಳು ಜಖಂಗೊಂಡಿದ್ದವು. ಗಾಯಗೊಂಡವರಲ್ಲಿ 10 ಜನ ಪೊಲೀಸ್ ಅಧಿಕಾರಿಗಳು ಮತ್ತು 4 ಜನರು ರಕ್ಷಣಾ ಸಿಬ್ಬಂದಿ ಇದ್ದರು. [ಲಿಟ್ಲ್ ಇಂಡಿಯಾದಲ್ಲಿ ಭುಗಿಲೆದ್ದ ಹಿಂಸಾಚಾರ]

ಸಿಂಗಾಪುರದಲ್ಲಿ 1969ರಲ್ಲಿ ಇಂಥದ್ದೇ ಭೀಕರ ಹಿಂಸಾಚಾರ ಘಟನೆ ಸಂಭವಿಸಿತ್ತು ಎಂದು ಹೇಳಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ 53 ಮಂದಿ(ಓರ್ವ ಬಾಂಗ್ಲಾ ಪ್ರಜೆಯನ್ನು ಹೊರತುಪಡಿಸಿ ಉಳಿದವರೆಲ್ಲರೂ ಭಾರತೀಯರು)ಯನ್ನು ಶೀಘ್ರದಲ್ಲೇ ಗಡಿಪಾರುಗೊಳಿಸಲಾಗುವುದು ಮತ್ತು ಅವರು ಮರಳಿ ಸಿಂಗಾಪುರಕ್ಕೆ ಬರುವುದರ ವಿರುದ್ಧ ನಿಷೇಧ ಹೇರಲಾಗುವುದು ಎಂದು ಅಧಿಕಾರಿಗಳು ಮಂಗಳವಾರ ಹೇಳಿಕೆಯೊಂದರಲ್ಲಿ ತಿಳಿಸಿದ್ದಾರೆ. [ಕೆಂಪು ಚುಕ್ಕೆಯ ಮೇಲೊಂದು ಕಪ್ಪು ಚುಕ್ಕೆ]
ಏಳು ಮಂದಿಯನ್ನು ಆರೋಪಗಳಿಂದ ಮುಕ್ತಗೊಳಿಸಲಾಗಿದ್ದು, ಒಟ್ಟು 28 ಮಂದಿ ವಿದೇಶಿ ಕಾರ್ಮಿಕ ವಿರುದ್ಧ ಗಲಭೆ ದೋಷಾರೋಪ ಹೊರಿಸಲಾಗಿದೆ. ಇವರೆಲ್ಲರೂ ಭಾರತೀಯರಾಗಿದ್ದು, ಆರೋಪ ಸಾಬೀತಾದಲ್ಲಿ ಏಳು ವರ್ಷಗಳ ಜೈಲುವಾಸ ಹಾಗೂ ಛಡಿಯೇಟು ಶಿಕ್ಷೆ ಎದುರಿಸಲಿದ್ದಾರೆ.
ಪೊಲೀಸರು ಪ್ರಕರಣದ ತನಿಖೆಯನ್ನು ಕಳೆದ ಹತ್ತು ದಿನಗಳ ಅವಧಿಯಲ್ಲಿ ಬಹುತೇಕ ಪೂರ್ಣಗೊಳಿಸಿದ್ದು, ಹೆಚ್ಚಿನ ಬಂಧನ ನಡೆಯುವ ಸಾಧ್ಯತೆಯನ್ನು ಅಲ್ಲಗಳೆದಿದ್ದಾರೆ ಎಂದು ವರದಿಗಳು ತಿಳಿಸಿವೆ. (ಪಿಟಿಐ)
-
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications