Slovakia: ಸ್ಲೊವಾಕಿಯಾ ಪ್ರಧಾನಿ ಮೇಲೆ ಗುಂಡಿನ ದಾಳಿ
ಸ್ಲೊವಾಕಿಯಾದ ಪ್ರಧಾನಿ ರಾಬರ್ಟ್ ಫಿಕೊ ಅವರ ಮೇಲೆ ಗುಂಡಿನ ದಾಳಿ ಮಾಡಿರುವ ಆಘಾತಕಾರಿ ಘಟನೆ ನಡೆದಿದೆ. ಗುಂಡಿನ ದಾಳಿ ಬಳಿಕ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿತಕಿತ್ಸೆ ಪಡೆಯುತ್ತಿದ್ದಾರೆ.
ಸೆಂಟ್ರಲ್ ಸ್ಲೊವಾಕಿಯಾದಲ್ಲಿ ಗುಂಡಿನ ದಾಳಿ ವಿಡಿಯೋ ವೈರಲ್ ಆಗಿದೆ. ಭದ್ರತಾ ಪಡೆಗಳು ಗಾಯಗೊಂಡ ಪ್ರಧಾನಿ ಫಿಕೋರನ್ನು ಎತ್ತಿ ಕಾರಿನಲ್ಲಿ ಕೂರಿಸುತ್ತಿರುವುದನ್ನು ನೋಡಬಹುದು. ಗುಂಡಿನ ದಾಳಿ ಮಾಡಿದ ಆರೋಪಿಯನ್ನು ಸ್ಥಳದಲ್ಲೇ ಬಂಧಿಸಿರುವ ದೃಶ್ಯಗಳು ಕೂಡ ಸೆರೆಯಾಗಿವೆ.

ಹ್ಯಾಂಡ್ಲೋವಾದಲ್ಲಿ ದಾಳಿ ನಡೆದ ಸ್ಥಳದಲ್ಲಿ ಪೊಲೀಸರು ಶಂಕಿತ ಬಂದೂಕುಧಾರಿಯನ್ನು ಬಂಧಿಸಿದ್ದಾರೆ, ಸ್ಲೊವಾಕಿಯಾ ಪ್ರಧಾನಿಯ ಮೇಲೆ ದಾಳಿ ಬಗ್ಗೆ ಮಾತನಾಡಿದ, ಸ್ಲೋವಾಕಿಯಾ ಅಧ್ಯಕ್ಷ ಜುಜಾನಾ ಕ್ಯಾಪುಟೋವಾ, ನಾನು ಆಘಾತಕ್ಕೊಳಗಾಗಿದ್ದೇನೆ, ಭಯಾನಕ ಮತ್ತು ಹೇಯ ದಾಳಿಯಿಂದ ನಾವೆಲ್ಲರೂ ಆಘಾತಕ್ಕೊಳಗಾಗಿದ್ದೇವೆ, ಎಂದು ಘಟನೆಯನ್ನು ಖಂಡಿಸಿದ್ದಾರೆ.
ಹ್ಯಾಂಡ್ಲೋವಾದಲ್ಲಿ ಸರ್ಕಾರದ ಸಭೆಯ ನಂತರ, ಫಿಕೋ ಮೇಲೆ ಹತ್ಯೆಯ ಯತ್ನ ನಡೆದಿದೆ, ಸರ್ಕಾರ ಹೇಳಿದ್ದು, ಗಂಭೀರವಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮಾಹಿತಿ ನೀಡಿದೆ.
ಕಳೆದ ಸೆಪ್ಟೆಂಬರ್ನಲ್ಲಿ ನಡೆದ ಸಾರ್ವತ್ರಿಕ ಚುನಾವಣೆಯಲ್ಲಿ ಸ್ಮರ್-ಎಸ್ಡಿ ಪಕ್ಷವನ್ನು ಗೆದ್ದ ಫಿಕೊ, ನಾಲ್ಕು ಬಾರಿ ಪ್ರಧಾನ ಮಂತ್ರಿ ಮತ್ತು ರಾಜಕೀಯ ಅನುಭವಿಯಾಗಿದ್ದು, ಕ್ರೆಮ್ಲಿನ್ ಪರವಾಗಿ ತನ್ನ ದೇಶದ ವಿದೇಶಾಂಗ ನೀತಿಯನ್ನು ತಿರುಗಿಸಿದ ಆರೋಪ ಎದುರಿಸುತ್ತಿದ್ದಾರೆ.
ಶಂಕಿತ ಬಂದೂಕುಧಾರಿ 71 ವರ್ಷದ ಬರಹಗಾರ ಎಂದು ಸ್ಥಳೀಯ ಮಾಧ್ಯಮ ವರದಿ ಮಾಡಿದೆ, ಆದರೆ ಪೊಲೀಸರು ಶಂಕಿತ ಆರೋಪಿ ಬಗ್ಗೆ ಯಾವುದೇ ಮಾಹಿತಿ ಕೊಟ್ಟಿಲ್ಲ.
ದಾಳಿಯ ಬಗ್ಗೆ ಖಂಡನೆ
ಸ್ಲೊವಾಕಿಯಾ ಅಧ್ಯಕ್ಷ-ಚುನಾಯಿತ ಮತ್ತು ಫಿಕೊ ಮಿತ್ರ ಪೀಟರ್ ಪೆಲ್ಲೆಗ್ರಿನಿ ಅವರು ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿದ್ದಾರೆ. "ಉನ್ನತ ಸಾಂವಿಧಾನಿಕ ಅಧಿಕಾರಿಗಳಲ್ಲಿ ಒಬ್ಬರ ಮೇಲಿನ ಹತ್ಯೆಯ ಪ್ರಯತ್ನವು ಸ್ಲೋವಾಕ್ ಪ್ರಜಾಪ್ರಭುತ್ವಕ್ಕೆ ಬೆದರಿಕೆಯಾಗಿದೆ" ಎಂದು ಆತಂಕ ವ್ಯಕ್ತಪಡಿಸಿದ್ದಾರೆ.
ಯೂರೋಪ್ ಒಕ್ಕೂಟದ ಮುಖ್ಯಸ್ಥ ಉರ್ಸುಲಾ ವಾನ್ ಡೆರ್ ಲೇಯೆನ್ ಅವರು "ನೀಚ ದಾಳಿ" ಯನ್ನು ಖಂಡಿಸಿದ್ದಾರೆ.
ಉಕ್ರೇನಿಯನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ "ಭಯಾನಕ" ಗುಂಡಿನ ದಾಳಿಯನ್ನು ಖಂಡಿಸಿದರು ಮತ್ತು ಫಿಕೊ ಚೇತರಿಸಿಕೊಳ್ಳಬೇಕೆಂದು ಹಾರೈಸಿದರು.
ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ಗುಂಡಿನ ದಾಳಿಯನ್ನು "ಘೋರ ಅಪರಾಧ" ಎಂದು ಕರೆದಿದ್ದಾರೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications