ಹಿಮ ಚಂಡಮಾರುತಕ್ಕೆ ಸ್ಥಬ್ದಗೊಂಡಿದೆ ಬಫೆಲೊ
ನ್ಯೂಯಾರ್ಕ್, ನ. 20: ಅಮೆರಿಕದ ನ್ಯೂ ಯಾರ್ಕ್ ರಾಜ್ಯದ ಬಫೆಲೊ ನಗರದಲ್ಲಿ ಬುಧವಾರ ಬಿದ್ದ ದಾಖಲೆ ಪ್ರಮಾಣದ ಹಿಮ ಮಳೆಯಿಂದ ನಗರ ಹಿಮಾಚ್ಛಾದಿತವಾಗಿದೆ. ಏಳು ಜನ ಸಾವಿಗೀಡಾಗಿದ್ದು, ಓರ್ವ ಗರ್ಭಿಣಿ ಆಸ್ಪತ್ರೆಗೆ ತೆರಳಲಾಗದೆ ಮನೆಯಲ್ಲಿಯೇ ಮಗುವಿಗೆ ಜನ್ಮ ನೀಡಿದ್ದಾಳೆ.
ಎಲ್ಲರ ಮನೆ ಹಾಗೂ ಕಾರುಗಳು ಹಿಮಾಚ್ಛಾದಿತವಾಗಿರುವ ಹಿನ್ನೆಲೆಯಲ್ಲಿ ಜನರು ಮನೆಯ ಬಾಗಿಲನ್ನೂ ತೆರೆಯಲಾಗದೆ ಹೊರಬರಲಾಗದ ಪರಿಸ್ಥಿತಿಯಲ್ಲಿದ್ದಾರೆ. ಹೊರಬಂದವರು ವಿವಿಧ ಮನೆಗಳು ಹಾಗೂ ವಾಹನಗಳ ಮೇಲಿನ ಹಿಮ ತೆಗೆಯುವುದರಲ್ಲಿ ನಿರತರಾಗಿದ್ದಾರೆ.

ಈಗ ಬಂದಿರುವ ಒಂದು ಚಂಡ ಮಾರುತವು ನಗರದಲ್ಲೆಡೆ 5.5 ಅಡಿ ಎತ್ತರದ ಹಿಮದ ಹೊದಿಕೆಯನ್ನು ಸೃಷ್ಟಿಸಿದೆ. ಗುರುವಾರ ಮತ್ತೊಂದು ಚಂಡ ಮಾರುತ ಬರುವ ನಿರೀಕ್ಷೆ ಇದ್ದು, ಹಿಮದ ಹೊದಿಕೆ ಇನ್ನೂ 3 ಅಡಿ ಎತ್ತರವಾಗಬಹುದೆಂದು ಅಂದಾಜಿಸಲಾಗಿದೆ.
ರಾಜ್ಯದ 212 ಕಿ.ಮೀ. ದೂರದವರೆಗೆ ಸುಮಾರು 100 ವಾಹನಗಳು ಹಿಮದಲ್ಲಿ ಹುಗಿದುಕೊಂಡಿವೆ. ರಾಜ್ಯದ ಪ್ರಮುಖ ಹೆದ್ದಾರಿ ಕೂಡ ಬುಧವಾರ ಬಂದ್ ಆಗಿತ್ತು. ಬಸ್ನಲ್ಲಿ ಪ್ರಯಾಣಿಸುತ್ತಿದ್ದ ನಯಾಗರ ವಿಶ್ವವಿದ್ಯಾಲಯದ ಬಾಸ್ಕೆಟ್ಬಾಲ್ ತಂಡ ಹಿಮ ಮಳೆಯಲ್ಲಿ ಸಿಕ್ಕಿಬಿದ್ದಿದೆ.

ಸಂಪೂರ್ಣ ನಗರವನ್ನು ಸ್ವಚ್ಛಗೊಳಿಸಲು 4ರಿಂದ 5 ದಿನಗಳೇ ಬೇಕು ಎಂದು ನ್ಯೂಯಾರ್ಕ್ ರಾಜ್ಯಪಾಲ ಆಂಡ್ರ್ಯೂ ಕಾಮೊ ತಿಳಿಸಿದ್ದಾರೆ. ಅಲ್ಲದೆ, ನಾವು ಏನೇನನ್ನೋ ಸಾಧಿಸಿದ್ದೇವೆ. ಆದರೆ, ಈ ಹಿಮ ದೊಡ್ಡ ಸವಾಲಾಗಿ ಪರಿಣಮಿಸಿದೆ ಎಂದು ಅಸಹಾಯಕತೆ ವ್ಯಕ್ತಪಡಿಸಿದ್ದಾರೆ.
ಅಮೆರಿಕದ ಎಲ್ಲ 50 ರಾಜ್ಯಗಳಲ್ಲಿನ ತಾಪಮಾನ ಘನೀಕರಣಕ್ಕಿಂತ ಕಡಿಮೆ ಪ್ರಮಾಣಕ್ಕೆ ಇಳಿದಿದೆ. ಆದ್ದರಿಂದ ಸುರಕ್ಷತೆಯ ದೃಷ್ಟಿಯಿಂದ ಎಲ್ಲರೂ ಮನೆಯೊಳಗೇ ಇರಬೇಕು. ಶೀಘ್ರ ರಸ್ತೆಗಳನ್ನು ಸ್ವಚ್ಛಗೊಳಿಸಲಾಗುವುದು ಎಂದು ಸರ್ಕಾರಿ ಅಧಿಕಾರಿಗಳು ತಿಳಿಸಿದ್ದಾರೆ.

-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ












Click it and Unblock the Notifications