9 ದಿನದಿಂದ ಗುಹೆಯಲ್ಲಿ ಸಿಲುಕಿದ್ದ ಫುಟ್ಬಾಲ್ ಆಟಗಾರರ ರಕ್ಷಣೆ
Recommended Video

ಚಿಯಾಂಗ್ ರೈ, ಜುಲೈ 3: ಥಾಯ್ಲೆಂಡ್ನ ಗುಹೆಯೊಂದರಲ್ಲಿ ಒಂಬತ್ತು ದಿನಗಳಿಂದ ಸಿಲುಕಿದ್ದ ಫುಟ್ಬಾಲ್ ತಂಡವೊಂದರ 12 ಬಾಲಕರು ಮತ್ತು ಅವರ ಕೋಚ್ ಅನ್ನು ರಕ್ಷಿಸಲಾಗಿದೆ.
ಥಾಯ್ಲೆಂಡ್ನ ವೈಲ್ಡ್ ಬೋರ್ ಎಂಬ ಫುಟ್ಬಾಲ್ ತಂಡದ 11-16ರ ವಯಸ್ಸಿನ ಬಾಲಕರು ಪ್ರವಾಸಕ್ಕೆಂದು ಜೂನ್ 23ರಂದು ಥಾಮ್ ಲುವಾಂಗ್ ನಂಗ್ ನಾನ್ ಎಂಬ ಗುಹೆಯೊಳಗೆ ಹೋಗಿದ್ದರು. ಆದರೆ, ಇದ್ದಕ್ಕಿದ್ದಂತೆ ಸುರಿದ ಭಾರಿ ಮಳೆಗೆ ಉಂಟಾದ ಪ್ರವಾಹದಿಂದಾಗಿ ಕತ್ತಲೆಯ ಗುಹೆಯಿಂದ ಹೊರಬರಲಾರದೆ ಸಿಲುಕಿಕೊಂಡಿದ್ದರು.
ಅವರ ಸಂಪರ್ಕ ಕಷ್ಟವಾಗಿದ್ದರಿಂದ ಮತ್ತು ವಿಪರೀತ ಮಳೆಯಿಂದಾಗಿ ಅವರ ರಕ್ಷಣೆಗೆ ಕಷ್ಟವಾಗಿತ್ತು. ಕೊನೆಗೆ ಅಮೆರಿಕ, ಚೀನಾ, ಆಸ್ಟ್ರೇಲಿಯಾ ಮತ್ತು ಇಂಗ್ಲೆಂಡ್ನ ಪರಿಣತರು ಹಾಗೂ ಥಾಯ್ ನೌಕಾ ಪಡೆಗಳನ್ನು ಒಳಗೊಂಡ ಅಂತರರಾಷ್ಟ್ರೀಯ ರಕ್ಷಣಾ ಕಾರ್ಯತಂಡ ಈ ಬೃಹತ್ ಗುಹೆಯನ್ನು ತಲುಪುವಲ್ಲಿ ಯಶಸ್ವಿಯಾಯಿತು.
Credit: FB Thai Navy Seal pic.twitter.com/nDZ7IkcNos
— 😆😊NongAnne😘😚ThisisLove (@A4Kanitha) 2 July 2018
ಪಟ್ಟಾಯ ಬೀಚ್ ಸಮೀಪದ ಈ ಗುಹೆ ಪ್ರವಾಹದಿಂದ ಜಲಾವೃತವಾಗಿತ್ತು. ಗುಹೆಯೊಳಗೆ ಸುಮಾರು 300-400 ಮೀಟರ್ ಪ್ರವೇಶಿಸಿದ ರಕ್ಷಣಾ ಪಡೆ 9 ದಿನಗಳಿಂದ ಆಹಾರ, ಗಾಳಿ ಬೆಳಕು ಇಲ್ಲದೆ ಒದ್ದಾಡುತ್ತಿದ್ದ ಬಾಲಕರನ್ನು ಪತ್ತೆಹಚ್ಚಿತು.

ಪ್ರವಾಹದಿಂದಾಗಿ ಈ ಬಾಲಕರು ಬದುಕಿರುವುದು ಸಾಧ್ಯವಿಲ್ಲ ಎಂಬ ಅನುಮಾನ ವ್ಯಕ್ತವಾಗಿತ್ತು. ಗುಹೆಯ ಕಡುಕತ್ತಲೆಯೊಳಗೆ ಹೇಗೋ ಜೀವ ಉಳಿಸಿಕೊಂಡಿದ್ದ ಬಾಲಕರು, ರಕ್ಷಣಾ ತಂಡವನ್ನು ನೋಡಿದೊಡನೆ ಖುಷಿಯಿಂದ ಕೂಗಿದರು.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications