ನೊಬೆಲ್ ಪುರಸ್ಕೃತ ದಕ್ಷಿಣ ಆಫ್ರಿಕಾದ ಆರ್ಚ್ ಬಿಷಪ್ ಡೆಸ್ಮಂಡ್ ಟುಟು ನಿಧನ
ಜೋಹಾನ್ಸ್ ಬರ್ಗ್, ಡಿಸೆಂಬರ್ 26: ನೊಬೆಲ್ ಶಾಂತಿ ಪ್ರಶಸ್ತಿ ಪುರಸ್ಕೃತ ದಕ್ಷಿಣ ಆಫ್ರಿಕಾದ ಆರ್ಚ್ ಬಿಷಪ್ ಡೆಸ್ಮಂಡ್ ಟುಟು ಅವರು ಇಂದು ನಿಧನರಾಗಿದ್ದಾರೆ. ದಕ್ಷಿಣ ಆಫ್ರಿಕಾದಲ್ಲಿದ್ದ ವರ್ಣಭೇದ ನೀತಿ ವಿರುದ್ಧ ಹೋರಾಟ ಮಾಡಿದವರಲ್ಲಿ ಟುಟು ಅಗ್ರಗಣ್ಯರಾಗಿದ್ದರು. 90ನೇ ವಯಸ್ಸಿನಲ್ಲಿ ಕೇಪ್ ಟೌನ್ ನಿವಾಸದಲ್ಲಿ ನಿಧನರಾದರು ಎಂದು ಅಧ್ಯಕ್ಷ ಸಿರಿಲ್ ರಮಾಫೋಸಾ ಹೇಳಿದ್ದಾರೆ.
ಸಾಮಾಜಿಕ ಹೋರಾಟ, ಕಪ್ಪುವರ್ಣೀಯರ ಮೇಲೆ ಸವರ್ಣೀಯರ ದಬ್ಬಾಳಿಕೆಯನ್ನು ಎದುರಿಸಿ ಟುಟು ನಡೆಸಿದ ಹೋರಾಟವನ್ನು ಮನ್ನಿಸಿ ಅವರಿಗೆ 1984ರಲ್ಲಿ ನೊಬೆಲ್ ಶಾಂತಿ ಪ್ರಶಸ್ತಿ ಪುರಸ್ಕಾರ ದೊರೆತಿದೆ. ವರ್ಣಭೇದ ನೀತಿ ಅಂತ್ಯವಾದರೂ ದಕ್ಷಿಣ ಆಫ್ರಿಕಾದಲ್ಲಿ ಆಡಳಿತದಲ್ಲಿನ ಅಸಮಾನತೆ, ಅನ್ಯಾಯಗಳನ್ನು ಕಟು ವಾಗಿ ಟುಟು ಟೀಕಿಸಿದ್ದರು.

ನೆಲ್ಸನ್ ಮಂಡೇಲಾ ಅವರ ಜೊತೆಗೂಡಿ ಅಲ್ಪಸಂಖ್ಯಾತ ಬಿಳಿಯರಿಂದ ಆಗುತ್ತಿದ್ದ ಅನ್ಯಾಯದ ವಿರುದ್ಧ ದನಿಯೆತ್ತಿದ್ದರು. ಆಂಗ್ಲ ಮೂಲದ ದಕ್ಷಿಣ ಆಫ್ರಿಕಾದ ಮೊದಲ ಕಪ್ಪುವರ್ಣೀಯ ಆರ್ಚ್ ಬಿಷಪ್ ಎಂದೆನಿಸಿಕೊಂಡಿದ್ದ ಟುಟು ಅವರು ದೇಶಭಕ್ತರಾಗಿ ಸಮಾನ ಹಕ್ಕು ಹೋರಾಟಗಾರರಾಗಿ ಸದಾ ಸ್ಮರಣೀಯ ಎಂದು ಅಧ್ಯಕ್ಷ ರಮಾಫೋಸಾ ಸ್ಮರಿಸಿದ್ದಾರೆ.
"ಆರ್ಚ್ಬಿಷಪ್ ಎಮೆರಿಟಸ್ ಡೆಸ್ಮಂಡ್ ಟುಟು ಅವರ ನಿಧನವು ನಮ್ಮ ರಾಷ್ಟ್ರದ ವಿದಾಯದಲ್ಲಿ ಮತ್ತೊಂದು ಅಧ್ಯಾಯವಾಗಿದ್ದು, ವಿಮೋಚನೆಗೊಂಡ ದಕ್ಷಿಣ ಆಫ್ರಿಕಾವನ್ನು ನಮಗೆ ನೀಡಿದ ಅತ್ಯುತ್ತಮ ದಕ್ಷಿಣ ಆಫ್ರಿಕನ್ನರ ಪೀಳಿಗೆಗೆ ವಿದಾಯ ಹೇಳುತ್ತದೆ" ಎಂದು ಅಧ್ಯಕ್ಷ ಸಿರಿಲ್ ರಾಮಾಫೋಸಾ ಹೇಳಿದರು.
ಟುಟುಗೆ 1990 ರ ದಶಕದ ಉತ್ತರಾರ್ಧದಲ್ಲಿ ಪ್ರಾಸ್ಟೇಟ್ ಕ್ಯಾನ್ಸರ್ ಇರುವುದು ಪತ್ತೆಯಾಯಿತು ಮತ್ತು ಇತ್ತೀಚಿನ ವರ್ಷಗಳಲ್ಲಿ ಅವರು ತಮ್ಮ ಕ್ಯಾನ್ಸರ್ ಚಿಕಿತ್ಸೆಗೆ ಸಂಬಂಧಿಸಿದ ಸೋಂಕುಗಳಿಗೆ ಚಿಕಿತ್ಸೆ ನೀಡಲು ಹಲವಾರು ಸಂದರ್ಭಗಳಲ್ಲಿ ಆಸ್ಪತ್ರೆಗೆ ದಾಖಲಾಗಿದ್ದರು.
Recommended Video
"ಅಂತಿಮವಾಗಿ, 90 ನೇ ವಯಸ್ಸಿನಲ್ಲಿ, ಅವರು ಇಂದು ಬೆಳಿಗ್ಗೆ ಕೇಪ್ ಟೌನ್ನಲ್ಲಿರುವ ಓಯಸಿಸ್ ಫ್ರೈಲ್ ಕೇರ್ ಸೆಂಟರ್ನಲ್ಲಿ ಶಾಂತಿಯುತವಾಗಿ ನಿಧನರಾದರು" ಎಂದು ಆರ್ಚ್ಬಿಷಪ್ ಡೆಸ್ಮಂಡ್ ಟುಟು ಐಪಿ ಟ್ರಸ್ಟ್ನ ಹಂಗಾಮಿ ಅಧ್ಯಕ್ಷೆ ಮತ್ತು ಆರ್ಚ್ಬಿಷಪ್ ಕಚೇರಿಯ ಸಂಯೋಜಕ ಡಾ. ಟುಟು ಕುಟುಂಬದ ಪರವಾಗಿ ಹೇಳಿಕೆಯಲ್ಲಿ ತಿಳಿಸಿದ್ದಾರೆ.
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ












Click it and Unblock the Notifications