ಬಂಧನದ ಭೀತಿಯಲ್ಲಿ ಸ್ಯಾಮ್ ಸಂಗ್ ಕಂಪನಿ ಬಾಸ್ !!!
ಭಾರತದಲ್ಲಿ ಮಧ್ಯಮ ವರ್ಗದ ಸ್ಮಾರ್ಟ್ ಫೋನ್ ಕನಸನ್ನು ನನಸು ಮಾಡಿಕೊಟ್ಟ, ದಕ್ಷಿಣ ಕೊರಿಯಾ ದೇಶದ ಆರ್ಥಿಕ ಅಭಿವೃದ್ಧಿಯಲ್ಲಿ ಗಣನೀಯ ಕಾಣಿಕೆ ನೀಡಿದ್ದ ಸ್ಯಾಮ್ ಸಂಗ್ ಈಗ ಬಿಕ್ಕಟ್ಟನ್ನು ಎದುರಿಸುತ್ತಿದೆ.
ಸಿಯೋಲ್ (ದಕ್ಷಿಣ ಕೊರಿಯಾ), ಜನವರಿ 17: ಭ್ರಷ್ಟಾಚಾರ ಹಾಗೂ ಹಲವಾರು ಹಗರಣಗಳನ್ನು ಮಾಡಿರುವ ಆರೋಪ ಹೊತ್ತಿರುವ ಖ್ಯಾತ ಸ್ಮಾರ್ಟ್ ಫೋನ್ ಹಾಗೂ ಗೃಹಬಳಕೆ ವಸ್ತುಗಳ ಕಂಪನಿಯಾದ ಸ್ಯಾಮ್ ಸಂಗ್ ನ ಉಪಾಧ್ಯಕ್ಷ ಲೀ ಜೀ ಯಂಗ್ ಅವರನ್ನು ಬಂಧಿಸಲು ಇಲ್ಲಿನ ಸರ್ಕಾರ ಸಕಲ ಸಿದ್ಧತೆಗಳನ್ನು ನಡೆಸಿದೆ.
ನ್ಯಾಯಾಲಯದಲ್ಲಿ ನಡೆಯುತ್ತಿರುವ ಲೀ ಮೇಲಿನ ಭ್ರಷ್ಟಾಚಾರ ಆರೋಪಗಳ ಕುರಿತ ವಿಚಾರಣೆಯು ತಾರ್ಕಿಕ ಅಂತ್ಯ ತಲುಪಿದ್ದು, ಶೀಘ್ರದಲ್ಲೇ ಅವರ ವಿರುದ್ಧ ಬಂಧನದ ಆದೇಶ ಹೊರಬೀಳಲಿರುವುದರಿಂದ ಸರ್ಕಾರವು ಈಗಾಗಲೇ ಅದಕ್ಕೆ ಬೇಕಾದ ಸಿದ್ಧತೆಗಳನ್ನು ಮಾಡಿಕೊಂಡಿದೆ ಎಂದು ಮೂಲಗಳು ತಿಳಿಸಿವೆ. ಈಗಾಗಲೇ ಸ್ಯಾಮ್ ಸಂಗ್ ಮನೆಗೆ ಬೆಂಕಿ ಬಿದ್ದಂತಾಗಿದೆ.

ಈ ಬೆಳವಣಿಗೆಗಳು, ಭಾರತದಲ್ಲಿ ಮಧ್ಯಮ ವರ್ಗದ ಸ್ಮಾರ್ಟ್ ಫೋನ್ ಕನಸನ್ನು ನನಸು ಮಾಡಿಕೊಟ್ಟ, ದಕ್ಷಿಣ ಕೊರಿಯಾ ದೇಶದ ಆರ್ಥಿಕ ಅಭಿವೃದ್ಧಿಯಲ್ಲಿ ಗಣನೀಯ ಕಾಣಿಕೆ ನೀಡಿದ್ದ ಸ್ಯಾಮ್ ಸಂಗ್ ಈಗ ಬಿಕ್ಕಟ್ಟನ್ನು ಎದುರಿಸುವಂತಾಗಿದೆ.
ಅಧಿಕೃತವಾಗಿ ಕಂಪನಿಯ ಉಪಾಧ್ಯಕ್ಷರಾಗಿದ್ದರೂ, ಸ್ಯಾಮ್ ಸಂಗ್ ಎಲೆಕ್ಟ್ರಾನಿಕ್ಸ್ ಸಂಸ್ಥೆಯ ಎಲ್ಲಾ ಆಡಳಿತವನ್ನು ತಮ್ಮ ಹಿಡಿತದಲ್ಲಿಟ್ಟುಕೊಂಡಿದ್ದಾರೆಂದು ಲೀ ವಿರುದ್ಧದ ಪ್ರಮುಖ ಆರೋಪವಾಗಿದೆ. ಅಲ್ಲದೆ, ಅವರ ಕುಟುಂಬಸ್ಥರೂ ಕಂಪನಿಯ ಆಡಳಿತದಲ್ಲಿ ಹಸ್ತಕ್ಷೇಪ ಮಾಡುತ್ತಿದ್ದು, ಲಂಚ, ಹಣ ದುರುಪಯೋಗ, ಸುಳ್ಳು ಪ್ರಮಾಣ ಪತ್ರಗಳ ಸೃಷ್ಟಿ ಸೇರಿದಂತೆ ಹಲವಾರು ರೀತಿಯಲ್ಲಿ ಕಂಪನಿಯ ಹಣ ದೋಚಿದ್ದಾರೆನ್ನಲಾಗಿದೆ.
ಈ ಹಿನ್ನೆಲೆಯಲ್ಲಿ, ಲೀ ವಿರುದ್ಧ ಸ್ವತಂತ್ರ್ಯವಾಗಿ ತನಿಖೆ ನಡೆಸಲಾಗಿದ್ದು, ಇದರಲ್ಲಿ ಸ್ಯಾಮ್ ಸಂಗ್ ಕಂಪನಿಯೊಂದಿಗೆ ದೋಸ್ತಿ ಹೊಂದಿರುವ ದಕ್ಷಿಣ ಕೊರಿಯಾದ ಪದಚ್ಯುತ ಅಧ್ಯಕ್ಷೆಯಾದ ಪಾರ್ಕ್ ಗುಯೆನ್ ಹೆ ವಿರುದ್ಧವೂ ಭ್ರಷ್ಟಾಚಾರದ ಆರೋಪಗಳು ಕೇಳಿಬಂದಿವೆ.
ಹಾಗಾಗಿ, ಲೀ ಅವರ ಬಂಧನವಾದರೆ, ಆನಂತರ ಪಾರ್ಕ್ ಅವರ ಬಂಧನವೂ ಜರುಗಬಹುದೆಂದು ನಿರೀಕ್ಷಿಸಲಾಗಿದೆ.
-
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
ಕರ್ನಾಟಕ PGCET 2026 ಅಧಿಸೂಚನೆ ಪ್ರಕಟ: ಎಂಬಿಎ ಸೇರಿ ವಿವಿಧ ಸ್ನಾತಕೋತ್ತರ ಪದವಿ ಪ್ರವೇಶಾತಿಗೆ ಮಾರ್ಚ್ 23 ರಿಂದ ಅರ್ಜಿ ಆಹ್ವಾನ -
ವಿಶ್ವಮಾತೆ ಎನ್ನುತ್ತಾ ಶ್ರೀಚಾಮುಂಡೇಶ್ವರಿಯ ಕನ್ನಡ ಹಾಡು ಹಂಚಿಕೊಂಡ ಪ್ರಧಾನಿ ಮೋದಿ -
ಮಾರ್ಚ್ 21ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ












Click it and Unblock the Notifications