ಬಂಧನದ ಭೀತಿಯಲ್ಲಿ ಸ್ಯಾಮ್ ಸಂಗ್ ಕಂಪನಿ ಬಾಸ್ !!!
ಭಾರತದಲ್ಲಿ ಮಧ್ಯಮ ವರ್ಗದ ಸ್ಮಾರ್ಟ್ ಫೋನ್ ಕನಸನ್ನು ನನಸು ಮಾಡಿಕೊಟ್ಟ, ದಕ್ಷಿಣ ಕೊರಿಯಾ ದೇಶದ ಆರ್ಥಿಕ ಅಭಿವೃದ್ಧಿಯಲ್ಲಿ ಗಣನೀಯ ಕಾಣಿಕೆ ನೀಡಿದ್ದ ಸ್ಯಾಮ್ ಸಂಗ್ ಈಗ ಬಿಕ್ಕಟ್ಟನ್ನು ಎದುರಿಸುತ್ತಿದೆ.
ಸಿಯೋಲ್ (ದಕ್ಷಿಣ ಕೊರಿಯಾ), ಜನವರಿ 17: ಭ್ರಷ್ಟಾಚಾರ ಹಾಗೂ ಹಲವಾರು ಹಗರಣಗಳನ್ನು ಮಾಡಿರುವ ಆರೋಪ ಹೊತ್ತಿರುವ ಖ್ಯಾತ ಸ್ಮಾರ್ಟ್ ಫೋನ್ ಹಾಗೂ ಗೃಹಬಳಕೆ ವಸ್ತುಗಳ ಕಂಪನಿಯಾದ ಸ್ಯಾಮ್ ಸಂಗ್ ನ ಉಪಾಧ್ಯಕ್ಷ ಲೀ ಜೀ ಯಂಗ್ ಅವರನ್ನು ಬಂಧಿಸಲು ಇಲ್ಲಿನ ಸರ್ಕಾರ ಸಕಲ ಸಿದ್ಧತೆಗಳನ್ನು ನಡೆಸಿದೆ.
ನ್ಯಾಯಾಲಯದಲ್ಲಿ ನಡೆಯುತ್ತಿರುವ ಲೀ ಮೇಲಿನ ಭ್ರಷ್ಟಾಚಾರ ಆರೋಪಗಳ ಕುರಿತ ವಿಚಾರಣೆಯು ತಾರ್ಕಿಕ ಅಂತ್ಯ ತಲುಪಿದ್ದು, ಶೀಘ್ರದಲ್ಲೇ ಅವರ ವಿರುದ್ಧ ಬಂಧನದ ಆದೇಶ ಹೊರಬೀಳಲಿರುವುದರಿಂದ ಸರ್ಕಾರವು ಈಗಾಗಲೇ ಅದಕ್ಕೆ ಬೇಕಾದ ಸಿದ್ಧತೆಗಳನ್ನು ಮಾಡಿಕೊಂಡಿದೆ ಎಂದು ಮೂಲಗಳು ತಿಳಿಸಿವೆ. ಈಗಾಗಲೇ ಸ್ಯಾಮ್ ಸಂಗ್ ಮನೆಗೆ ಬೆಂಕಿ ಬಿದ್ದಂತಾಗಿದೆ.

ಈ ಬೆಳವಣಿಗೆಗಳು, ಭಾರತದಲ್ಲಿ ಮಧ್ಯಮ ವರ್ಗದ ಸ್ಮಾರ್ಟ್ ಫೋನ್ ಕನಸನ್ನು ನನಸು ಮಾಡಿಕೊಟ್ಟ, ದಕ್ಷಿಣ ಕೊರಿಯಾ ದೇಶದ ಆರ್ಥಿಕ ಅಭಿವೃದ್ಧಿಯಲ್ಲಿ ಗಣನೀಯ ಕಾಣಿಕೆ ನೀಡಿದ್ದ ಸ್ಯಾಮ್ ಸಂಗ್ ಈಗ ಬಿಕ್ಕಟ್ಟನ್ನು ಎದುರಿಸುವಂತಾಗಿದೆ.
ಅಧಿಕೃತವಾಗಿ ಕಂಪನಿಯ ಉಪಾಧ್ಯಕ್ಷರಾಗಿದ್ದರೂ, ಸ್ಯಾಮ್ ಸಂಗ್ ಎಲೆಕ್ಟ್ರಾನಿಕ್ಸ್ ಸಂಸ್ಥೆಯ ಎಲ್ಲಾ ಆಡಳಿತವನ್ನು ತಮ್ಮ ಹಿಡಿತದಲ್ಲಿಟ್ಟುಕೊಂಡಿದ್ದಾರೆಂದು ಲೀ ವಿರುದ್ಧದ ಪ್ರಮುಖ ಆರೋಪವಾಗಿದೆ. ಅಲ್ಲದೆ, ಅವರ ಕುಟುಂಬಸ್ಥರೂ ಕಂಪನಿಯ ಆಡಳಿತದಲ್ಲಿ ಹಸ್ತಕ್ಷೇಪ ಮಾಡುತ್ತಿದ್ದು, ಲಂಚ, ಹಣ ದುರುಪಯೋಗ, ಸುಳ್ಳು ಪ್ರಮಾಣ ಪತ್ರಗಳ ಸೃಷ್ಟಿ ಸೇರಿದಂತೆ ಹಲವಾರು ರೀತಿಯಲ್ಲಿ ಕಂಪನಿಯ ಹಣ ದೋಚಿದ್ದಾರೆನ್ನಲಾಗಿದೆ.
ಈ ಹಿನ್ನೆಲೆಯಲ್ಲಿ, ಲೀ ವಿರುದ್ಧ ಸ್ವತಂತ್ರ್ಯವಾಗಿ ತನಿಖೆ ನಡೆಸಲಾಗಿದ್ದು, ಇದರಲ್ಲಿ ಸ್ಯಾಮ್ ಸಂಗ್ ಕಂಪನಿಯೊಂದಿಗೆ ದೋಸ್ತಿ ಹೊಂದಿರುವ ದಕ್ಷಿಣ ಕೊರಿಯಾದ ಪದಚ್ಯುತ ಅಧ್ಯಕ್ಷೆಯಾದ ಪಾರ್ಕ್ ಗುಯೆನ್ ಹೆ ವಿರುದ್ಧವೂ ಭ್ರಷ್ಟಾಚಾರದ ಆರೋಪಗಳು ಕೇಳಿಬಂದಿವೆ.
ಹಾಗಾಗಿ, ಲೀ ಅವರ ಬಂಧನವಾದರೆ, ಆನಂತರ ಪಾರ್ಕ್ ಅವರ ಬಂಧನವೂ ಜರುಗಬಹುದೆಂದು ನಿರೀಕ್ಷಿಸಲಾಗಿದೆ.
-
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
ಗಂಡ-ಹೆಂಡತಿ ಜಗಳ ಇಡೀ ದಿನ ತೋರಿಸಿದರೆ ಸಮಾಜಕ್ಕೆ ಏನು ಪ್ರಯೋಜನ: ಮಾಧ್ಯಮಗಳಿಗೆ ಸಿಎಂ ಪ್ರಶ್ನೆ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
'ಕೋಟಿಗೊಬ್ಬ' ರೀರಿಲೀಸ್: ವಿಷ್ಣುದಾದಾ ಅಭಿಮಾನಿಗಳಿಂದ ಸಂಭ್ರಮ, ಪ್ರಸನ್ನ ಥಿಯೇಟರ್ನಲ್ಲಿ ನಾಳೆ 10,000 ಮಂದಿಗೆ ನಾನ್ವೆಜ್ ಊಟ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Smriti Mandhana: ಸ್ಮೃತಿ ಮಂಧಾನ-ಪಲಾಶ್ ಮುಚ್ಚಲ್ ಮತ್ತೆ ಒಂದಾಗ್ತಾರಾ? ಇಬ್ಬರ ಕುಟುಂಬಗಳ ಸೀಕ್ರೆಟ್ ಮೀಟಿಂಗ್ ವಿಡಿಯೋ ವೈರಲ್ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Government Schools: ಈ ವರ್ಷದಿಂದಲೇ ಸರ್ಕಾರಿ ಶಾಲೆಗಳಲ್ಲಿ ದ್ವಿಭಾಷಾ ನೀತಿ: ಎಲ್ಲ ಶಿಕ್ಷಕರಿಗೆ ಇಂಗ್ಲಿಷ್ ಟ್ರೈನಿಂಗ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಏಪ್ರಿಲ್ 11ರ ದರಪಟ್ಟಿ












Click it and Unblock the Notifications