ಸ್ಪೇನ್: ಮಹಿಳೆಯರಿಗೆ ಮೂರು ದಿನಗಳ ಋತುಚಕ್ರದ ರಜೆ
ನವದೆಹಲಿ, ಮೇ 11: ಮಹಿಳೆಯರಿಗೆ ಮೂರು ದಿನಗಳ ಋತುಚಕ್ರದ ರಜೆ ನೀಡಲು ಸ್ಪೇನ್ ಸರಕಾರ ತೀರ್ಮಾನಿಸಿದೆ. ಈ ಮೂಲಕ ಋತುಚಕ್ರದ ರಜೆ ನೀಡಿದ ಯೂರೋಪ್ನ ಮೊದಲ ದೇಶ ಎಂಬ ಖ್ಯಾತಿಗೆ ಸ್ಪೇನ್ ಪಾತ್ರವಾಗಲಿದೆ.
ಈ ನೂತನ ಕ್ರಮದಂತೆ ಮುಟ್ಟಿನ ಸಮಯದಲ್ಲಿ ಹೆಚ್ಚಿನ ನೋವು ಅನುಭವಿಸುವ ಸ್ಪೇನ್ನ ಮಹಿಳೆಯರು ತಿಂಗಳಲ್ಲಿ ಮೂರು ದಿನಗಳು ರಜೆ ಪಡೆಯಬಹುದಾಗಿದೆ. ಈ ಕುರಿತು ಮುಂದಿನ ವಾರ ಅಧಿಕೃತವಾಗಿ ಸ್ಪೇನ್ ಸರಕಾರದಿಂದ ಆದೇಶ ಹೊರಬೀಳಲಿದೆ.
ದಕ್ಷಿಣ ಕೊರಿಯಾ, ಜಪಾನ್, ಜಾಂಬಿಯಾ ಮತ್ತುಇಂಡೋನೇಶಿಯಾದಲ್ಲಿ ಈಗಾಗಲೇ ಮಹಿಳೆಯರಿಗೆ ಋತುಚಕ್ರದ ರಜೆ ನೀಡಲಾಗುತ್ತಿದೆ. "ಅನಾರೋಗ್ಯ ಸೇರಿದಂತೆ ತಾತ್ಕಾಲಿಕ ಆರೋಗ್ಯ ಸಮಸ್ಯೆ ಇರುವವರಿಗೆ ರಜೆ ನೀಡಲಾಗುತ್ತದೆ. ಇದೇ ಕ್ರಮವು ಋತುಚಕ್ರದ ಸಮಸ್ಯೆಗೆ ಅನ್ವಯವಾಗಬೇಕು. ಮುಟ್ಟಿನ ಸಮಯದಲ್ಲಿ ತೀವ್ರ ನೋವು ಅನುಭವಿಸುವ ಮಹಿಳೆಯರು ಮನೆಯಲ್ಲಿ ಉಳಿಯಲು ಅನುಮತಿ ನೀಡಬೇಕಿದೆ. ಹೀಗಾಗಿ ಋತುಚಕ್ರದ ರಜೆ ನೀಡಲು ತೀರ್ಮಾನಿಸಲಾಗಿದೆ,'' ಎಂದು ಸ್ಪೇನ್ ಸರಕಾರದ ಕಾರ್ಯದರ್ಶಿ ಏಂಜೆಲಾ ರೋಡ್ರಿಗಸ್ ತಿಳಿಸಿದ್ದಾರೆ.

"25 ವರ್ಷಕ್ಕಿಂತ ಕಡಿಮೆ ವಯಸ್ಸಿನ ಶೇ.20ರಷ್ಟು ಮಹಿಳೆಯರು ಮುಟ್ಟಿನ ಸಮಯದ ನೋವಿನಿಂದಾಗಿ ಶಾಲೆ, ಕಾಲೇಜು ಅಥವಾ ಕೆಲಸಕ್ಕೆ ಹೋಗಲಾಗದೇ ತಪ್ಪಿಸಿಕೊಂಡಿದ್ದಾರೆ. ಇದರ ಜತೆಗೆ ಶೇ.40ರಷ್ಟುಮಹಿಳೆಯರು ಮುಟ್ಟಿನ ತೀವ್ರ ನೋವಿನ ಪರಿಣಾಮ ಕೆಲಸದಲ್ಲಿ ಸರಿಯಾಗಿ ಗಮನಹರಿಸಲು ಸಾಧ್ಯವಾಗದೇ ತೊಂದರೆ ಅನುಭವಿಸುತ್ತಿದ್ದಾರೆ,'' ಎಂದು ಬ್ರಿಟೀಶ್ ಮೆಡಿಕಲ್ ಜರ್ನಲ್ ಅಧ್ಯಯನ ವರದಿ ತಿಳಿಸಿದೆ.
2016ರಲ್ಲಿ ಲಂಡನ್ ವಿಶ್ವವಿದ್ಯಾನಿಲಯದ ಅಧ್ಯಾಪಕರೊಬ್ಬರು, "ಮುಟ್ಟಿನ ನೋವು ಹೃದಯಾಘಾತದ ನೋವಿನಷ್ಟೇ ತೀವ್ರವಾಗಿರುತ್ತದೆ,'' ಎಂದು ಹೇಳಿದ್ದನ್ನು ಇಲ್ಲಿ ಸ್ಮರಿಸಬಹುದು.

ಕಳೆದ ತಿಂಗಳು ಸ್ಪೇನ್ ಸರಕಾರ ನೂತನ ಕಾನೂನು ಒಂದನ್ನು ಜಾರಿಗೊಳಿಸಿದ್ದು, ಅದರ ಪ್ರಕಾರ ಗರ್ಭವನ್ನು ಧರಿಸದೇ ಇರಲು ಮಹಿಳೆ ತೀರ್ಮಾನಿಸಿದಾಗ, ಇದಕ್ಕೆ ವಿರುದ್ಧವಾಗಿ ಅವಳನ್ನು ಬಲವಂತಪಡಿಸಿದರೆ, ಕಿರುಕುಳ ನೀಡಿದರೆ, ಅಂಥ ವ್ಯಕ್ತಿಗೆ ಮೂರರಿಂದ ಒಂದು ವರ್ಷಗಳ ಕಾಲು ಜೈಲು ಶಿಕ್ಷೆ ವಿಧಿಸಬಹುದಾಗಿದೆ. ಜತೆಗೆ ಆ ವ್ಯಕ್ತಿಗೆ ಸಾಮಾಜಿಕ ಕಾರ್ಯ ಮಾಡುವಂತೆ ನ್ಯಾಯಾಲಯ ಸೂಚಿಸಬಹುದಾದ ಕಾನೂನನ್ನುಜಾರಿಗೊಳಿಸಲಾಗಿದೆ.
-
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
PUC ವಿದ್ಯಾರ್ಥಿಗಳ ಗಮನಕ್ಕೆ: ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಗೆ ಇನ್ಮುಂದೆ 2 ವರ್ಷ ಮಾತ್ರ ಅವಕಾಶ -
National Highway: ಕರ್ನಾಟಕದ ನಾಲ್ಕು ಪ್ರಮುಖ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಬಗ್ಗೆ ಮಹತ್ವದ ಮಾಹಿತಿ ಹಂಚಿಕೊಂಡ ನಿತಿನ್ ಗಡ್ಕರಿ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ












Click it and Unblock the Notifications