ಪಾಕ್ನಲ್ಲಿ ರಷ್ಯಾ, ಚೀನಾ, ಇರಾನ್ ಬೇಹುಗಾರಿಕೆ ಅಧಿಕಾರಿಗಳ ಸಭೆ
ಇಸ್ಲಾಮಾಬಾದ್, ಜುಲೈ 11: ಅಫ್ಘಾನಿಸ್ತಾನದಲ್ಲಿ ಇಸ್ಲಾಮಿಕ್ ಸ್ಟೇಟ್ ಉಗ್ರರ ಬೆಳವಣಿಗೆಯ ಕುರಿತಂತೆ ಚರ್ಚಿಸಲು ರಷ್ಯಾ, ಚೀನಾ ಮತ್ತು ಇರಾನ್ಗಳ ಬೇಹುಗಾರಿಕಾ ಮುಖ್ಯಸ್ಥರು ಪಾಕಿಸ್ತಾನದಲ್ಲಿ ಸಭೆ ಸೇರಿದ್ದಾರೆ.
ಅಫ್ಘಾನಿಸ್ತಾನದ ಪ್ರದೇಶದಲ್ಲಿ ಇಸ್ಲಾಮಿಕ್ ಸ್ಟೇಟ್ ಪ್ರಬಲವಾಗಿ ತಲೆ ಎತ್ತುತ್ತಿರುವ ಅಪಾಯಕಾರಿ ಬೆಳವಣಿಗೆ ಬಗ್ಗೆ ಈ ಚರ್ಚೆ ಕೇಂದ್ರೀಕರಿಸಿದೆ ಎಂದು ರಷ್ಯಾದ ವಿದೇಶಿ ಬೇಹುಗಾರಿಕಾ ಸೇವೆಯ ವಕ್ತಾರ ಸರ್ಜಿ ಇವಾನೊವ್ ಹೇಳಿದ್ದಾರೆ.
ರಷ್ಯಾದ ವಿದೇಶಿ ಬೇಹುಗಾರಿಕಾ ನಿರ್ದೇಶಕ ಸರ್ಜಿ ನಾರಿಷ್ಕಿನ್ ಹಾಗೂ ಚೀನಾ ಮತ್ತು ಇರಾನ್ನ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದಾರೆ.

ಅಫ್ಘಾನಿಸ್ತಾನದಲ್ಲಿ ಇಸ್ಲಾಮಿಕ್ ಸ್ಟೇಟ್ ಉಗ್ರರಿಗೆ ಅಮೆರಿಕ ಬೆಂಬಲ ನೀಡುತ್ತಿದೆ ಎಂದು ಕೆಲವು ತಿಂಗಳ ಹಿಂದೆ ರಷ್ಯಾದ ರಾಜತಾಂತ್ರಿಕರು ಆರೋಪಿಸಿದ್ದರು.
2015ರಲ್ಲಿ ಇಸ್ಲಾಮಿಕ್ ಸ್ಟೇಟ್, ತನ್ನ ಆಫ್ಘನ್ ನೆಲೆಯನ್ನು ಸ್ಥಾಪಿಸಿದ್ದಾಗಿ ಘೋಷಣೆ ಮಾಡಿತ್ತು. ಅಮೆರಿಕ ನಡೆಸಿದ ಡ್ರೋಣ್ ದಾಳಿಯಲ್ಲಿ ಅದರ ಇಬ್ಬರು ಪ್ರಮುಖ ನಾಯಕರು ಹತ್ಯೆಯಾಗಿದ್ದರು.
ಆದರೆ, ಆ ಸಂಘಟನೆ ಇಂದಿಗೂ ಅಲ್ಲಿ ಕಾರ್ಯಾಚರಣೆ ನಡೆಸುತ್ತಿದೆ. ಸಿರಿಯಾ ಮತ್ತು ಇರಾಕ್ನ ಸುಮಾರು ನೂರು ಉಗ್ರರು ಇಲ್ಲಿ ನೆಲೆಯೂರಿದ್ದಾರೆ ಎನ್ನಲಾಗಿದೆ.
ಮಧ್ಯಪ್ರಾಚ್ಯದಲ್ಲಿ ನಿರಂತರ ದಾಳಿಗಳ ಬಳಿಕ ದುರ್ಬಲವಾದ ಇಸ್ಲಾಮಿಕ್ ಸ್ಟೇಟ್, ಅಲ್ಲಿಂದ ಅಫ್ಘಾನಿಸ್ತಾನದ ಕಡೆಗೆ ತೆರಳುತ್ತಿದ್ದು, ಅಲ್ಲಿ ಪ್ರಬಲವಾಗುತ್ತಿದೆ. ಇದರ ಬಗ್ಗೆ ಚೀನಾ, ರಷ್ಯಾ ಇರಾನ್ ಮತ್ತು ಪಾಕಿಸ್ತಾನದ ಭದ್ರತಾ ಅಧಿಕಾರಿಗಳು ಕಳವಳಗೊಂಡಿದ್ದಾರೆ ಎಂದು ರಷ್ಯಾದ ಮಾಧ್ಯಮಗಳು ವರದಿ ಮಾಡಿವೆ.
ಅಫ್ಘಾನಿಸ್ತಾನದ ಭದ್ರತಾ ವಿಚಾರವಾಗಿ ಹೆಚ್ಚು ದೃಢವಾದ ನಿರ್ಧಾರಗಳನ್ನು ತೆಗೆದುಕೊಳ್ಳಬೇಕಾಗಿದೆ ಎಂದು ಕಳೆದ ತಿಂಗಳು ನಡೆದ ಶಾಂಘೈ ಸಹಕಾರ ಸಮ್ಮೇಳನದ ವೇಳೆ ಪಾಕಿಸ್ತಾನದಲ್ಲಿ ಉನ್ನತ ಮಟ್ಟದ ಸಭೆ ನಡೆಸುವುದಾಗಿ ಪ್ರಕಟಿಸಲಾಗಿತ್ತು.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications