Sri Lanka Crisis; ವಾಟ್ಸಪ್, ಫೇಸ್ಬುಕ್ ಬಳಕೆಗೆ ನಿರ್ಬಂಧ
ಕೊಲಂಬೊ, ಏಪ್ರಿಲ್ 03; ಆರ್ಥಿಕ ಮುಗ್ಗಟ್ಟಿಗೆ ಸಿಲುಕಿರುವ ಶ್ರೀಲಂಕಾದಲ್ಲಿ ಪರಿಸ್ಥಿತಿ ಪ್ರಕ್ಷುಬ್ಧಗೊಂಡಿದೆ. ನೂರಾರು ಜನರು ಅಧ್ಯಕ್ಷರ ನಿವಾಸಕ್ಕೆ ಮುತ್ತಿಗೆ ಹಾಕಲು ಪ್ರಯತ್ನ ನಡೆಸಿದ ಬಳಿಕ ತುರ್ತು ಪರಿಸ್ಥಿತಿ ಘೋಷಣೆ ಮಾಡಲಾಗಿದೆ.
ದೇಶದಲ್ಲಿ ಜನರ ಪ್ರತಿಭಟನೆ ನಿಯಂತ್ರಣಕ್ಕೆ ತರಲು ಸಾಮಾಜಿಕ ಜಾಲತಾಣಗಳನ್ನು ಬಂದ್ ಮಾಡಲಾಗಿದೆ. ಭಾನುವಾರದಿಂದ ಎಲ್ಲಾ ಸಾಮಾಜಿಕ ಜಾಲತಾಣಗಳಿಗೆ ನಿರ್ಬಂಧ ಹೇರಲಾಗಿದೆ. ಈ ಮೂಲಕ ಜನರಿಗೆ ಪ್ರತಿಭಟನೆಯ ಮಾಹಿತಿ ತಲುಪದಂತೆ ಎಚ್ಚರವಹಿಸಲಾಗಿದೆ.
ಶನಿವಾರ ಮತ್ತು ಭಾನುವಾರ ಶ್ರೀಲಂಕಾದಲ್ಲಿ ವೀಕೆಂಡ್ ಕರ್ಫ್ಯೂ ಜಾರಿಗೊಳಿಸಲಾಗಿದೆ. ಇದರ ಜೊತೆಗೆ ಫೇಸ್ ಬುಕ್, ವಾಟ್ಸಪ್ ಸೇರಿದಂತೆ ಸಾಮಾಜಿಕ ಜಾಲತಾಣಗಳನ್ನು ಬಂದ್ ಮಾಡಲಾಗಿದೆ. ಶ್ರೀಲಂಕಾದ ಅಧ್ಯಕ್ಷ ಗೊಟಬಯ ರಾಜಪಕ್ಸ ಶುಕ್ರವಾರ ತುರ್ತು ಪರಿಸ್ಥಿತಿ ಘೋಷಣೆ ಮಾಡಿದ್ದಾರೆ.

ಶುಕ್ರವಾರ ನೂರಾರು ಜನರು ಕೊಲಂಬೊದಲ್ಲಿರುವ ಶ್ರೀಲಂಕಾದ ಅಧ್ಯಕ್ಷ ಗೊಟಬಯ ರಾಜಪಕ್ಸ ನಿವಾಸಕ್ಕೆ ಮುತ್ತಿಗೆ ಹಾಕಲು ಆಗಮಿಸಿದ್ದರು. ಆಗ ತುರ್ತು ಪರಿಸ್ಥಿತಿ ಘೋಷಣೆ ಮಾಡಲಾಗಿದ್ದು, ದೇಶಾದ್ಯಂತ ಸೋಮವಾರ ಮುಂಜಾನೆ ತನಕ ಕರ್ಫ್ಯೂ ಜಾರಿಯಲ್ಲಿರುತ್ತದೆ.
ರಾಜೀನಾಮೆಗೆ ಒತ್ತಾಯ; ಶ್ರೀಲಂಕಾದಲ್ಲಿ ತೀವ್ರ ಆರ್ಥಿಕ ಮುಗ್ಗಟ್ಟಿನ ಹಿನ್ನಲೆಯಲ್ಲಿ ಅಧ್ಯಕ್ಷ ಗೊಟಬಯ ರಾಜಪಕ್ಸ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಶುಕ್ರವಾರ ಬೃಹತ್ ಪ್ರತಿಭಟನೆ ನಡೆದಿತ್ತು. ಅಧ್ಯಕ್ಷರ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದವರನ್ನು ಸರ್ಕಾರ ಭಯೋತ್ಪಾದಕರು ಎಂದು ಕರೆದಿದತ್ತು.
ಅಧ್ಯಕ್ಷರ ನಿವಾಸದ ಮುಂದಿನ ಪ್ರತಿಭಟನೆ ವೇಳೆ ಉದ್ರಿಕ್ತ ಜನರು ಪೊಲೀಸರ ವಾಹನಗಳಿಗೆ ಬೆಂಕಿ ಹಚ್ಚಿದ್ದರು. ಲಾಠಿ ಚಾರ್ಚ್ ಮಾಡಿ, ಅಶ್ರುವಾಯು ಪ್ರಯೋಗ ಮಾಡಿ ಪೊಲೀಸರು ಜನರನ್ನು ಚದುರಿಸಿದ್ದರು.
ಅಧ್ಯಕ್ಷರ ನಿವಾಸದ ಮುಂದಿನ ಪ್ರತಿಭಟನೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ 12ಕ್ಕೂ ಅಧಿಕ ಜನರನ್ನು ಬಂಧಿಸಲಾಗಿದೆ. ಶ್ರೀಲಂಕಾದಲ್ಲಿ ಶಾಂತಿ ಕಾಪಾಡಲು ಭಾರತದಿಂದ ಸೇನೆ ಕಳಿಸಲಾಗಿದೆ ಎಂಬ ಸಾಮಾಜಿಕ ಜಾಲತಾಣಗಳ ಸುದ್ದಿಯನ್ನು ಆಡಳಿತ ತಳ್ಳಿ ಹಾಕಿದೆ. ಸ್ಥಳೀಯ ಪೊಲೀಸರು ಪರಿಸ್ಥಿತಿ ಹತೋಟಿಗೆ ತರಲು ಶಕ್ತರಾಗಿದ್ದಾರೆ ಎಂದು ಹೇಳಿದೆ.
ಶ್ರೀಲಂಕಾದಲ್ಲಿ ಇಂಧನ, ಆಹಾರ ಪದಾರ್ಥಗಳ ಬೆಲೆ ಗಗನಕ್ಕೆ ಏರಿದೆ. ದೇಶದಲ್ಲಿ ವಿದ್ಯುತ್ ಕೊರತೆ ಉಂಟಾಗಿದ್ದು ಸುಮಾರು 10 ಗಂಟೆಗಳ ಕಾಲ ಪವರ್ ಕಟ್ ಜಾರಿಯಲ್ಲಿದೆ. ಇದರಿಂದಾಗಿ ಆಡಳಿತದ ವಿರುದ್ಧ ಜನರು ಆಕ್ರೋಶಗೊಂಡಿದ್ದು, ಪ್ರತಿಭಟನೆ ನಡೆಸುತ್ತಿದ್ದಾರೆ.
ದ್ವೀಪ ರಾಷ್ಟ್ರ ಶ್ರೀಲಂಕಾದಲ್ಲಿ ಜನರು ಅಗತ್ಯ ವಸ್ತುಗಳನ್ನು ಖರೀದಿ ಮಾಡಲು ಸಹ ಪರದಾಟ ನಡೆಸುತ್ತಿದ್ದಾರೆ. ಅಗತ್ಯ ವಸ್ತುಗಳನ್ನು ಬೇರೆ ದೇಶಗಳಿಂದ ಆಮದು ಮಾಡಿಕೊಂಡರೂ ಅದಕ್ಕೆ ಹಣ ಪಾವತಿ ಮಾಡಲಾಗದ ಸ್ಥಿತಿಗೆ ದೇಶ ತಲುಪಿದೆ.
1948ರ ಸ್ವಾತಂತ್ರ್ಯದ ಬಳಿಕ ಶ್ರೀಲಂಕಾ ಅತ್ಯಂತ ಭೀಕರ ಆರ್ಥಿಕ ಮುಗ್ಗಟ್ಟು ಎದುರಿಸುತ್ತಿದೆ. ಅಗತ್ಯ ವಸ್ತುಗಳ ಬೆಲೆ ಏರಿಕೆ, ಇಂಧನ ದಾಸ್ತಾನು ಕೊರತೆ ಮುಂತಾದವುಗಳಿಗೆ ಆಡಳಿತಾರೂಢ ಸರ್ಕಾರದ ನೀತಿಗಳೇ ಕಾರಣ ಎಂದು ಜನರು ಆರೋಪಿಸುತ್ತಿದ್ದಾರೆ. ಆದ್ದರಿಂದ ಅಧ್ಯಕ್ಷರ ರಾಜೀನಾಮೆಗೆ ಒತ್ತಾಯಿಸುತ್ತಿದ್ದಾರೆ.
ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಶ್ರೀಲಂಕಾಕ್ಕೆ ಭಾರತ ನೆರವು ನೀಡಲು ಮುಂದಾಗಿದೆ. ಈಗಾಗಲೇ 40,000 ಟನ್ ಅಕ್ಕಿಯನ್ನು ಕಳುಹಿಸಲಾಗುತ್ತಿದ್ದು, ಈ ಪ್ರಕ್ರಿಯೆ ಆರಂಭವಾಗಿದೆ. ವಿದ್ಯುತ್ ಉತ್ಪಾದನೆಗೆ ಸಹ ಭಾರತ ಸಹಾಯ ಮಾಡಲಿದೆ ಎಂಬ ಮಾಹಿತಿ ಇದೆ.
ಸಾಮಾಜಿಕ ಜಾಲತಾಣಗಳ ಮೇಲಿನ ನಿರ್ಬಂಧದ ಬಗ್ಗೆ ಮಾತನಾಡಿದ ಯುವ ಜನ ಮತ್ತು ಕ್ರೀಡಾ ಸಚಿವ ನಮಲ್ ರಾಜಪಕ್ಸೆ, ಇಂತಹ ನಿರ್ಬಂಧವನ್ನು ನಾನು ಎಂದಿಗೂ ಬಯಸುವುದಿಲ್ಲ. ವಿಪಿಎನ್ ಲಭ್ಯತೆ ಇರುವ ತನಕ ಇಂತಹ ನಿರ್ಬಂಧ ಉಪಯೋಗಕ್ಕೆ ಬರುವುದಿಲ್ಲ. ಅಧಿಕಾರಿಗಳು ಈ ನಿರ್ಧಾರವನ್ನು ಮರುಪರಿಶೀಲಿಸಬೇಕು ಎಂದು ಹೇಳಿದ್ದಾರೆ.
-
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ -
ಆರ್ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ಕೇವಲ 42 ಎಸೆತಗಳಲ್ಲಿ 94 ರನ್ ಸಿಡಿಸಿದ ಅಭಿಷೇಕ್ ಶರ್ಮಾ: ಭಾರೀ ವೈರಲ್












Click it and Unblock the Notifications