ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಶ್ರೀಲಂಕಾ ಸರಣಿ ಬಾಂಬ್ ಸ್ಫೋಟ: ಇನ್ನಿಬ್ಬರು ಕನ್ನಡಿಗರು ಸಾವು

|
Google Oneindia Kannada News

ಕೋಲಂಬೋ, ಏಪ್ರಿಲ್ 22: ಶ್ರೀಲಂಕಾದ ಕೋಲಂಬೋದಲ್ಲಿ ನಡೆದ ಬಾಂಬ್ ದಾಳಿಯಲ್ಲಿ ಇನ್ನಿಬ್ಬರು ಕನ್ನಡಿಗರು ಬಲಿಯಾಗಿದ್ದಾರೆ.

ಶ್ರೀಲಂಕಾದಲ್ಲಿ ಇಲ್ಲಿ ತನಕ ಸಂಭವಿಸಿದ ಭೀಕರ ಸ್ಫೋಟಗಳು ಶ್ರೀಲಂಕಾದಲ್ಲಿ ಇಲ್ಲಿ ತನಕ ಸಂಭವಿಸಿದ ಭೀಕರ ಸ್ಫೋಟಗಳು

ಬಾಂಬ್ ಸ್ಫೋಟದಲ್ಲಿ ಮೃತಪಟ್ಟವರ ಸಂಖ್ಯೆ ಸೋಮವಾರ 290ಕ್ಕೆ ಏರಿದ್ದು, ಘಟನೆಯಲ್ಲಿ ಇಬ್ಬರು ಕನ್ನಡಿಗರು ಮೃತಪಟ್ಟಿದ್ದಾರೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವೆ ಸುಷ್ಮಾ ಸ್ವರಾಜ್ ಮಾಹಿತಿ ನೀಡಿದ್ದಾರೆ.

ಏಳು ಮಂದಿ ಜೆಡಿಎಸ್ ಮುಖಂಡರು ಶ್ರೀಲಂಕಾದಲ್ಲಿ ನಾಪತ್ತೆ ?ಏಳು ಮಂದಿ ಜೆಡಿಎಸ್ ಮುಖಂಡರು ಶ್ರೀಲಂಕಾದಲ್ಲಿ ನಾಪತ್ತೆ ?

ಕೆ.ಜಿ. ಹನುಮಂತರಾಯಪ್ಪ ಮತ್ತು ಎಂ. ರಂಗಪ್ಪ ಬಾಂಬ್ ಸ್ಫೋಟದಲ್ಲಿ ಬಲಿಯಾದ ಕನ್ನಡಿಗರು. ಇವರಿಬ್ಬರೂ ನೆಲಮಂಗಲ ತಾಲ್ಲೂಕಿನವರು ಎನ್ನಲಾಗಿದೆ. ಮಂಗಳೂರಿನ ಸುರತ್ಕಲ್ ಮೂಲದ ರಜೀನಾ ಖಾದರ್ ಕುಕ್ಕಡೆ ಶ್ಯಾಂಗ್ರಿಲಾ ಹೋಟೆಲ್‌ನಲ್ಲಿ ನಡೆದ ದಾಳಿಯಲ್ಲಿ ಬಲಿಯಾಗಿದ್ದರು.

sri lanka colombo bomb blast 2 more karnataka person death

'ನಿನ್ನೆ ನಡೆದ ದಾಳಿಗಳಲ್ಲಿ ಇಬ್ಬರು ಮೃತಪಟ್ಟಿರುವುದರ ಬಗ್ಗೆ ಖಚಿತಪಡಿಸಲು ದುಃಖಿಸುತ್ತೇವೆ' ಎಂದು ಕೆ.ಜಿ. ಹನುಮಂತರಾಯಪ್ಪ ಮತ್ತು ಎಂ. ರಂಗಪ್ಪ ಅವರ ಹೆಸರನ್ನು ಶ್ರೀಲಂಕಾದಲ್ಲಿ ಭಾರತೀಯ ರಾಹಭಾರ ಕಚೇರಿ ಟ್ವೀಟ್ ಮಾಡಿತ್ತು. ಅದನ್ನು ಸಚಿವೆ ಸುಷ್ಮಾ ಸ್ವರಾಜ್ ರೀಟ್ವೀಟ್ ಮಾಡಿದ್ದಾರೆ.

 ಶ್ರೀಲಂಕಾ ಬಾಂಬ್ ಸ್ಫೋಟ: 5 ಮಂದಿ ಭಾರತೀಯರು ಸೇರಿ ಮೃತರ ಸಂಖ್ಯೆ 290ಕ್ಕೆ ಏರಿಕೆ ಶ್ರೀಲಂಕಾ ಬಾಂಬ್ ಸ್ಫೋಟ: 5 ಮಂದಿ ಭಾರತೀಯರು ಸೇರಿ ಮೃತರ ಸಂಖ್ಯೆ 290ಕ್ಕೆ ಏರಿಕೆ

ಇದರಿಂದ ಬಾಂಬ್ ಸ್ಫೋಟದಲ್ಲಿ ಬಲಿಯಾದ ಭಾರತೀಯರ ಸಂಖ್ಯೆ ಆರಕ್ಕೆ ಏರಿದೆ. ಲಕ್ಷ್ಮಿ, ನಾರಾಯಣ್ ಚಂದ್ರಶೇಖರ್ ಮತ್ತು ರಮೇಶ್ ಎಂಬುವವರು ದಾಳಿಯಲ್ಲಿ ಮೃತಪಟ್ಟಿರುವುದಾಗಿ ಸುಷ್ಮಾ ಸ್ವರಾಜ್ ಅವರು ಭಾನುವಾರ ತಿಳಿಸಿದ್ದರು.

English summary
Two more Kannadigas from Nelamangala Taluk died in a series of bomb blast incident in Sri Lanka. KG Hanumantharayappa and M Rangappa were died in attack, Minister Sushma Swaraj confirmed.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X