ಕೊಲಂಬೋ, ಜುಲೈ 22: ದ್ವೀಪರಾಷ್ಟ್ರದಲ್ಲಿನ ಆರ್ಥಿಕ ಬಿಕ್ಕಟ್ಟಿನ ಮಧ್ಯೆ ರಾಜಕೀಯ ಬೆಳವಣಿಗೆಗಳು ನಡೆಯುತ್ತಿವೆ. ಶ್ರೀಲಂಕಾದ ನೂತನ ಅಧ್ಯಕ್ಷರ ಆಯ್ಕೆಯಾಗಿ ಬುಧವಾರ ಚುನಾವಣೆ ನಡೆದಿತ್ತು. ಅಧ್ಯಕ್ಷರಾಗಿದ್ದ ಗೋಟಾಬಯ ರಾಜಪಕ್ಸೆ ದೇಶ ಬಿಟ್ಟು ಪಲಾಯನ ಮಾಡಿದ ನಂತರ ಶ್ರೀಲಂಕಾಕ್ಕೆ ಹೊಸ ಅಧ್ಯಕ್ಷರ ನೇಮಕವಾಗಿದೆ.
ನೂತನ ಅಧ್ಯಕ್ಷರಾಗಿ ರನಿಲ್ ವಿಕ್ರಮಸಿಂಘೆ ಗುರುವಾರ ಪ್ರಮಾಣ ವಚನ ಸ್ವೀಕಾರ ಮಾಡಿದರು. ಆದರೆ ತಡರಾತ್ರಿ ಪುನಃ ದೇಶದಲ್ಲಿ ಪ್ರತಿಭಟನೆಗಳು ಆರಂಭವಾಗಿವೆ. ಅಸಮಾಧಾನಗೊಂಡಿರುವ ನೂರಾರು ನಾಗರಿಕರು ಕೊಲಂಬೊದಲ್ಲಿ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ.
ದೇಶದ ಅತ್ಯಂತ ಕೆಟ್ಟ ಆರ್ಥಿಕ ಬಿಕ್ಕಟ್ಟಿನಿಂದ ಕಂಗೆಟ್ಟ ಜನರು ಏಪ್ರಿಲ್ನಲ್ಲಿ ಸರ್ಕಾರದ ವಿರುದ್ಧ ಸಿಡಿದೆದ್ದಿದ್ದರು. ದೇಶದಲ್ಲಿ ನಡೆಯುತ್ತಿರುವ ಪ್ರತಿಭಟನೆ 100 ದಿನಗಳನ್ನು ಪೂರೈಸಿದೆ. ಗೋಟಾಬಯ ರಾಜಪಕ್ಸೆ ರಾಜೀನಾಮೆ ನಂತರ ಜನರ ಆಕ್ರೋಶ ರಾನಿನ್ ವಿಕ್ರಮಸಿಂಘೆ ವಿರುದ್ಧ ತಿರುಗಿದೆ.
Recommended Video
RCB ಅಭಿಮಾನಿಗಳೆಲ್ಲಾ ಈಗ Mumbai Indians ಅಭಿಮಾನಿಗಳು | Oneindia Kannada
ದ್ವೀಪರಾಷ್ಟ್ರದಲ್ಲಿ ಪ್ರತಿಭಟನೆ ತೀವ್ರಗೊಂಡಿದ್ದು ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲು ಪೊಲೀಸರು ಬ್ಯಾರಿಕೇಡ್ ಹಾಕಿದ್ದಾರೆ. ಶ್ರೀಲಂಕಾದಲ್ಲಿ ನಡೆಯುತ್ತಿರುವ ಪ್ರತಿಭಟನೆ ಮತ್ತು ತುರ್ತು ಸಂದರ್ಭವನ್ನು ನಿರ್ವಹಿಸಲು ಸರ್ಕಾರದ ಪ್ರಯತ್ನಗಳು ಹೇಗಿವೆ ಎಂಬುದರ ಕುರಿತು ಕ್ಷಣಕ್ಷಣದ ಮಾಹಿತಿಯನ್ನು ಮುಂದೆ ಓದಿ ತಿಳಿಯಿರಿ.
Jul 22, 2022, 9:23 am IST
ಶ್ರೀಲಂಕಾದಲ್ಲಿ ಮತ್ತೆ ಜನರ ಪ್ರತಿಭಟನೆ
Sri Lanka | Visuals from the vicinity of Sri Lankan Presidential Secretariat, Galle Face in Colombo where an armed forces crackdown on protestors is underway as the crisis-laden country continues to simmer pic.twitter.com/RpVRYqeF34
ಹೊಸ ಅಧ್ಯಕ್ಷರು ಪ್ರಮಾಣ ವಚನ ಸ್ವೀಕಾರ ಮಾಡಿದ ಬಳಿಕ ಮತ್ತೆ ಶ್ರೀಲಂಕಾದಲ್ಲಿ ಪ್ರತಿಭಟನೆ ಆರಂಭವಾಗಿದೆ. ಕೊಲಂಬೊದಲ್ಲಿನ ಗಾಲ್ ಫೇಸ್ ಸ್ಥಳದಲ್ಲಿ ಪ್ರತಿಭಟನೆ ನಡೆಯುತ್ತಿದೆ. ಪ್ರತಿಭಟನಾಕಾರರನ್ನು ತಡೆಯಲು ಪೊಲೀಸರು ಬ್ಯಾರಿಕೇಡ್ ಹಾಕಿದ್ದಾರೆ.
Jul 18, 2022, 8:31 am IST
ಶ್ರೀಲಂಕಾದ ಹಂಗಾಮಿ ಅಧ್ಯಕ್ಷರು ದೇಶದಲ್ಲಿ ತುರ್ತು ಪರಿಸ್ಥಿತಿ ಘೋಷಣೆ ಮಾಡಿದ್ದಾರೆ.
Acting Sri Lankan President Ranil Wickremesinghe declares a State Of Emergency in the country. pic.twitter.com/ycDwJupUa3
ಶ್ರೀಲಂಕಾ ಬಿಕ್ಕಟ್ಟಿನಲ್ಲಿ ಮಧ್ಯಪ್ರವೇಶಿಸುವಂತೆ ತಮಿಳುನಾಡು ಮೂಲದ ಪಕ್ಷಗಳು ಮಾಡಿದ ಮನವಿಯ ನಂತರ ಕೇಂದ್ರ ಸರ್ಕಾರ ಮಂಗಳವಾರ ಸಂಜೆ ಸರ್ವಪಕ್ಷ ಸಭೆ ಕರೆದಿದೆ. ಕೇಂದ್ರ ಸಚಿವರಾದ ನಿರ್ಮಲಾ ಸೀತಾರಾಮನ್ ಮತ್ತು ಡಾ. ಎಸ್. ಜೈಶಂಕರ್ ಬ್ರೀಫಿಂಗ್ಗಳೊಂದಿಗೆ ಸರ್ವಪಕ್ಷ ಸಭೆ ಕರೆಯಲಾಗಿದೆ.
Jul 17, 2022, 12:13 pm IST
ಅಮೆರಿಕದಲ್ಲಿ ಶ್ರೀಲಂಕಾ ನಿವಾಸಿಗಳ ಚಿಕ್ಕ ಗುಂಪು ಶ್ರೀಲಂಕಾದ ಮಾಜಿ ಅಧ್ಯಕ್ಷ ಗೋಟಬಯ ರಾಜಪಕ್ಸ ಪುತ್ರ ಮನೋಜ್ ರಾಜಪಕ್ಸ ನಿವಾಸದ ಮುಂದೆ ಪ್ರತಿಭಟನೆ ನಡೆಸಿದರು. ಗೋಟಬಯ ರಾಜಪಕ್ಸ ಸಿಂಗಾಪುರದಿಂದ ಶ್ರೀಲಂಕಾಕ್ಕೆ ಮರಳುವಂತೆ ಸೂಚಿಸಬೇಕು ಎಂದು ಘೋಷಣೆಗಳನ್ನು ಕೂಗಿದರು.
Jul 17, 2022, 10:41 am IST
ನಾವು 225 ಸಂಸದರು ಅಧ್ಯಕ್ಷರನ್ನು ಆಯ್ಕೆ ಮಾಡಿದ್ದೇವೆ. ಗೋಟಬಯ ರಾಜಪಕ್ಸೆ ಬಹುಮತವನ್ನು ಹೊಂದಿದ್ದಾರೆ ಮತ್ತು ಅಧ್ಯಕ್ಷರನ್ನು ಈ ಸಂಯೋಜನೆಯಿಂದ ಆಯ್ಕೆ ಮಾಡಲಾಗುತ್ತದೆ. ನಾವು ಎಲ್ಲಾ ಸದಸ್ಯರೊಂದಿಗೆ ಮಾತನಾಡುತ್ತಿದ್ದೇವೆ ಎಂದು ಲೋಪಿ ಸಜಿತ್ ಪ್ರೇಮದಾಸ ಹೇಳಿದ್ದಾರೆ.
Jul 15, 2022, 9:24 pm IST
ಶ್ರೀಲಂಕಾದ ಜನರ ಪ್ರಜಾಸತ್ತಾತ್ಮಕ ಆಕಾಂಕ್ಷೆಗಳಿಗೆ ಅಮೆರಿಕ ಬದ್ಧವಾಗಿದೆ ಎಂದು ಕೊಲಂಬೊದಲ್ಲಿರುವ ಅಮೆರಿಕ ರಾಯಭಾರಿ ಹೇಳಿದ್ದಾರೆ. ಕಾನೂನಿನ ನಿಯಮವನ್ನು ಎತ್ತಿಹಿಡಿಯಲು ಎಲ್ಲಾ ಪಕ್ಷಗಳು ಒಟ್ಟಾಗಿ ಕೆಲಸ ಮಾಡಲಿ ಎಂದು ಅವರು ಒತ್ತಾಯಿಸಿದ್ದಾರೆ.
Jul 15, 2022, 6:36 pm IST
ಶ್ರೀಲಂಕಾದ ಮಾಜಿ ಪ್ರಧಾನಿ ಮಹೀಂದ್ರಾ ರಾಜಪಕ್ಸ ದೇಶ ಬಿಟ್ಟು ಹೋಗದಂತೆ ಸುಪ್ರೀಂಕೋರ್ಟ್ ಮಧ್ಯಂತರ ಆದೇಶ ನೀಡಿದೆ. ಜುಲೈ 28ರ ತನಕ ಈ ಆದೇಶ ಜಾರಿಯಲ್ಲಿರುತ್ತದೆ.
Jul 15, 2022, 4:26 pm IST
ಶ್ರೀಲಂಕಾ ಚೀನಾದೊಂದಿಗೆ 4 ಶತಕೋಟಿ ಡಾಲರ್ ಸಹಾಯಕ್ಕಾಗಿ ಮಾತುಕತೆ ನಡೆಸುತ್ತಿದೆ ಮತ್ತು ಚೀನಾ ಸರ್ಕಾರವು ಒಂದು ಹಂತದಲ್ಲಿ ನೆರವು ನೀಡಲು ಒಪ್ಪುತ್ತದೆ ಎಂದು ವಿಶ್ವಾಸ ಹೊಂದಿದೆ ಎಂದು ಬ್ಲೂಮ್ಬರ್ಗ್ ಸುದ್ದಿ ಸಂಸ್ಥೆ ಶುಕ್ರವಾರ ವರದಿ ಮಾಡಿದೆ.
Jul 15, 2022, 1:19 pm IST
ಪ್ರಮಾಣವಚನ ಸ್ವೀಕರಿಸಿದ ವಿಕ್ರಮಸಿಂಘೆ
ರಾನಿಲ್ ವಿಕ್ರಮಸಿಂಘೆ ಅವರು ಎರಡು ತಿಂಗಳ ಅವಧಿಯಲ್ಲಿ ಎರಡನೇ ಬಾರಿಗೆ ಶ್ರೀಲಂಕಾದ ಉನ್ನತ ನಾಯಕರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಶ್ರೀಲಂಕಾದ ಮುಖ್ಯ ನ್ಯಾಯಮೂರ್ತಿ ಜಯಂತ ಜಯಸೂರ್ಯ ಅವರು ವಿಕ್ರಮಸಿಂಘೆ ಅವರು ಹಂಗಾಮಿ ಅಧ್ಯಕ್ಷರಾಗಿ ಪ್ರಮಾಣ ವಚನವನ್ನು ಓದಿದರು.
7 ದಿನಗಳಲ್ಲಿ ನೂತನ ಅಧ್ಯಕ್ಷರನ್ನು ಆಯ್ಕೆ ಮಾಡಲಾಗುತ್ತದೆ ಎಂದು ಶ್ರೀಲಂಕಾ ಸ್ಪೀಕರ್ ಮಹಿಂದ ಯಾಪಾ ಅಬೇವರ್ಧನ ಶುಕ್ರವಾರ ಹೇಳಿದ್ದಾರೆ.
Jul 15, 2022, 11:07 am IST
ಬಿಕ್ಕಟ್ಟು ಪೀಡಿತ ಶ್ರೀಲಂಕಾದ ಸಂಸತ್ತಿನ ಸ್ಪೀಕರ್ ಅಧ್ಯಕ್ಷ ಗೊಟಬಯ ರಾಜಪಕ್ಸೆ ಅವರ ರಾಜೀನಾಮೆ ಪತ್ರವನ್ನು ಅಂಗೀಕರಿಸಿದ್ದಾರೆ. 'ಈ ಹಂತದಿಂದ ನಾವು ಸಾಂವಿಧಾನಿಕವಾಗಿ ಹೊಸ ಅಧ್ಯಕ್ಷರನ್ನು ನೇಮಿಸಲು ಮುಂದಾಗುತ್ತೇವೆ' ಎಂದು ಸ್ಪೀಕರ್ ಮಹಿಂದ ಯಾಪಾ ಅಬೇವರ್ಧನ ಶುಕ್ರವಾರ ಹೇಳಿದ್ದಾರೆ.
#WATCH | Yes resignation has been accepted, legal process will follow...Members will be invited tomorrow (to elect a President): Sri Lanka Speaker Mahinda Yapa Abeywarden confirms President Gotabaya Rajapaksa's resignation pic.twitter.com/jLomNW64Cq
ಶನಿವಾರ ಸಂಸತ್ತಿನ ಸಭೆ ನಡೆಯಲಿದೆ. ಹೀಗಾಗಿ ಸಂಸದರು ಎಲ್ಲಾ ಪ್ರಕ್ರಿಯೆಗಳಲ್ಲಿ ಭಾಗವಹಿಸಲು ಅವಕಾಶ ಮಾಡಿಕೊಡಿ ಎಂದು ಶ್ರೀಲಂಕಾ ಸ್ಪೀಕರ್ ಸಾರ್ವಜನಿಕರನ್ನು ಒತ್ತಾಯಿಸಿದ್ದಾರೆ.
Jul 15, 2022, 8:36 am IST
ಅಧ್ಯಕ್ಷ ಗೊಟಬಯ ರಾಜಪಕ್ಸೆ ರಾಜೀನಾಮೆ ನೀಡುತ್ತಿದ್ದಂತೆ ಶ್ರೀಲಂಕಾದಲ್ಲಿ ಜನರು ಬೀದಿಗಿಳಿದು ಸಂಭ್ರಮಿಸಿದ್ದಾರೆ.
Jul 14, 2022, 10:32 pm IST
ಶ್ರೀಲಂಕಾ ಅಧ್ಯಕ್ಷ ಗೋಟಬಯಾ ರಾಜಪಕ್ಸ ರಾಜೀನಾಮೆ ಬಳಿಕ ಪ್ರತಿಭಟನಾನಿರತರು ಎಲ್ಲಾ ಸರ್ಕಾರಿ ಕಚೇರಿಗಳಿಂದ ವಾಪಸ್ ಆಗಿದ್ದಾರೆ. ಆದರೆ ಅಧ್ಯಕ್ಷರ ನಿವಾಸದಲ್ಲಿರುವವರು ಅಲ್ಲಿಯೇ ಇದ್ದು, ಅಧ್ಯಕ್ಷರ ಕುರ್ಚಿಯಲ್ಲಿ ಕುಳಿತು ಪೋಟೋ ತೆಗೆಸಿಕೊಳ್ಳುತ್ತಿದ್ದಾರೆ.
Jul 14, 2022, 8:56 pm IST
"ಅಧ್ಯಕ್ಷ ಗೋಟಬಯಾ ರಾಜಪಕ್ಸ ರಾಜೀನಾಮೆ ನೀಡಿದ್ದಾರೆ. ಶ್ರೀಲಂಕಾ ಈಗ ಮುಂದುವರಿಯಬಹುದೆಂದು ನಾನು ಭಾವಿಸುತ್ತೇನೆ. ಅಧ್ಯಕ್ಷರು ಇನ್ನೂ ಶ್ರೀಲಂಕಾದಲ್ಲಿದಿದ್ದರೆ ರಾಜೀನಾಮೆ ನೀಡುತ್ತಿರಲಿಲ್ಲ ಎಂದು ನಾನು ನಂಬುತ್ತೇನೆ. ನನ್ನ ಶ್ರೀಲಂಕಾದ ಜನತೆಗೆ ಶುಭಾಶಯಗಳು" ಎಂದು ಮಾಲ್ಡೀವ್ಸ್ ಅಧ್ಯಕ್ಷ ಮೊಹಮ್ಮದ್ ನಶೀದ್ ಹೇಳಿದ್ದಾರೆ.
Jul 14, 2022, 7:27 pm IST
ಶ್ರೀಲಂಕಾದ ಅಧ್ಯಕ್ಷ ಗೋಟಬಯ ರಾಜಪಕ್ಸೆ ರಾಜೀನಾಮೆ ಪತ್ರವನ್ನು ಸ್ಪೀಕರ್ಗೆ ರವಾನಿಸಿದ್ದಾರೆ. ಗೋಟಬಯ ರಾಜಪಕ್ಸೆ ಗುರುವಾರ ಸಿಂಗಾಪುರಕ್ಕೆ ಪ್ರಯಾಣಿಸಿದ್ದಾರೆ.
Jul 14, 2022, 7:01 pm IST
ಶ್ರೀಲಂಕಾದ ಅಧ್ಯಕ್ಷ ಗೋಟಬಯ ರಾಜಪಕ್ಸೆ ಖಾಸಗಿ ಭೇಟಿಯಲ್ಲಿದ್ದಾರೆ ಮತ್ತು ಅವರಿಗೆ ಆಶ್ರಯ ನೀಡಲಾಗಿಲ್ಲ ಎಂದು ಸಿಂಗಾಪುರ ಸರ್ಕಾರವು ಹೇಳಿದೆ. ಈ ಮೂಲಕ ರಾಜಪಕ್ಸೆಗೆ ಖಾಸಗಿ ಭೇಟಿಗಾಗಿ ಸಿಂಗಾಪುರ ಪ್ರವೇಶಿಸಲು ಅನುಮತಿ ನೀಡಿರುವುದು ದೃಢಪಟ್ಟಿದೆ.
Jul 14, 2022, 5:14 pm IST
ಆರ್ಥಿಕ ಬಿಕ್ಕಟ್ಟಿನ ಬಳಿಕ ಶ್ರೀಲಂಕಾದಲ್ಲಿ ಪ್ರತಿಭಟನೆ ಕಾವು ಜೋರಾಗದೆ. ಆಸ್ತಿ ಮತ್ತು ಜೀವ ನಾಶವನ್ನು ತಡೆಯಲು ಅಗತ್ಯ ಬಲವನ್ನು ಬಳಸಲು ಶ್ರೀಲಂಕಾ ಸೈನಿಕರಿಗೆ ಅಧಿಕಾರ ನೀಡಲಾಗಿದೆ ಎಂದು ದೇಶದ ಸೇನೆ ಗುರುವಾರ ಹೇಳಿಕೆಯಲ್ಲಿ ತಿಳಿಸಿದೆ.
Jul 14, 2022, 5:09 pm IST
ಶ್ರೀಲಂಕಾ ಅಧ್ಯಕ್ಷ ಗೊಟಬಯ ರಾಜಪಕ್ಸೆ ಮತ್ತು ಅವರ ಪತ್ನಿಯನ್ನು ಹೊತ್ತ ವಿಮಾನ ಸಿಂಗಾಪುರದಲ್ಲಿ ಲ್ಯಾಂಡ ಆಗಿದೆ.
Jul 14, 2022, 3:25 pm IST
ಆಸ್ತಿ ಮತ್ತು ಜೀವ ನಾಶವನ್ನು ತಡೆಯಲು ಶ್ರೀಲಂಕಾದ ಪಡೆಗಳಿಗೆ ಹೆಚ್ಚಿನ ಬಲವನ್ನು ಬಳಸಲು ಅಧಿಕಾರ ನೀಡಲಾಗಿದೆ ಎಂದು ಸೇನೆಯ ಹೇಳಿಕೆಯನ್ನು ಉಲ್ಲೇಖಿಸಿ ರಾಯಿಟರ್ಸ್ ವರದಿ ಮಾಡಿದೆ.
Jul 14, 2022, 2:56 pm IST
ಶ್ರೀಲಂಕಾದಲ್ಲಿ ತೀವ್ರಗೊಂಡ ಪ್ರತಿಭಟನೆಯಿಂದಾಗಿ ರಾಜಧಾನಿಯಲ್ಲಿ ಕರ್ಫ್ಯೂ ಘೋಷಿಸಲಾಗಿದೆ. ಪ್ರದೇಶಗಳಲ್ಲಿ ಪ್ರದರ್ಶನದ ಸಮಯದಲ್ಲಿ ಯಾವುದೇ ಅಹಿತಕರ ಘಟನೆಯನ್ನು ತಪ್ಪಿಸುವ ಸಲುವಾಗಿ, ಶ್ರೀಲಂಕಾ ಸೇನೆಯು ಮಿಲಿಟರಿ ಶಸ್ತ್ರಸಜ್ಜಿತ ವಾಹನಗಳನ್ನು ರಸ್ತೆಗಳಲ್ಲಿ ನಿಲ್ಲಿಸಿದೆ. ಶ್ರೀಲಂಕಾ ಅಂತಹ ಪರಿಸ್ಥಿತಿಯನ್ನು ಹಿಂದೆಂದೂ ನೋಡಿರಲಿಲ್ಲ. ರಾಜಕಾರಣಿಗಳ ತಪ್ಪು ನೀತಿಗಳು ಜನರನ್ನು ಮತ್ತು ದೇಶವನ್ನು ವಿನಾಶದ ಹಾದಿಗೆ ತಂದಿವೆ.
Jul 14, 2022, 2:03 pm IST
ಶ್ರೀಲಂಕಾದಲ್ಲಿ ತೀವ್ರ ಪ್ರತಿಭಟನೆಯ ನಂತರ ಮಾಲ್ಡೀವ್ಸ್ ರಾಜಧಾನಿ ಮಾಲೆಗೆ ತೆರಳಿದ್ದ ಗೊಟಬಯ ರಾಜಪಕ್ಸೆ ಇಂದು ಸಿಂಗಾಪುರಕ್ಕೆ ತೆರಳಿದರು. ರಾಜಪಕ್ಸೆ ಮಾಲ್ಡೀವ್ಸ್ ತೊರೆದು ಖಾಸಗಿ ಜೆಟ್ನಲ್ಲಿ ಸಿಂಗಾಪುರಕ್ಕೆ ಹೋಗುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ. ಇದಕ್ಕೂ ಮುನ್ನ ರಾಜಪಕ್ಸೆ ಅವರ ದ್ವೀಪ ರಾಷ್ಟ್ರದಿಂದ ಸಿಂಗಾಪುರಕ್ಕೆ ತೆರಳಲು ಖಾಸಗಿ ಜೆಟ್ ವಿಮಾನವೊಂದು ಮಾಲೆಗೆ ಬಂದಿಳಿದಿತ್ತು. ಡೈಲಿ ಮಿರರ್ ಪ್ರಕಾರ, ರಾಜಪಕ್ಸೆ, ಅವರ ಪತ್ನಿ ಅಯೋಮಾ ರಾಜಪಕ್ಸೆ ಮತ್ತು ಇಬ್ಬರು ಭದ್ರತಾ ಅಧಿಕಾರಿಗಳು ಮಂಗಳವಾರ ರಾತ್ರಿ ಮಾಲೆಯಿಂದ ಸಿಂಗಾಪುರಕ್ಕೆ ಸಿಂಗಾಪುರ್ ಏರ್ಲೈನ್ಸ್ ವಿಮಾನವನ್ನು ಹತ್ತಬೇಕಿತ್ತು, ಆದರೆ ಭದ್ರತಾ ಕಾರಣಗಳಿಂದ ಸಮಯಕ್ಕೆ ತಲುಪಲಿಲ್ಲ.
Jul 14, 2022, 12:54 pm IST
ಶ್ರೀಲಂಕಾ ಸರ್ಕಾರವು ಜುಲೈ 14 ರಂದು ಮಧ್ಯಾಹ್ನ 12 ರಿಂದ ಜುಲೈ 15 ಬೆಳಿಗ್ಗೆ 5 ರವರೆಗೆ ಕೊಲಂಬೊದಲ್ಲಿ ಕರ್ಫ್ಯೂ ವಿಧಿಸಿದೆ ಎಂದು ಸರ್ಕಾರವನ್ನು ಉಲ್ಲೇಖಿಸಿ ರಾಯಿಟರ್ಸ್ ವರದಿ ಮಾಡಿದೆ.
Jul 14, 2022, 12:23 pm IST
ಸಾಲದ ಸುಳಿಯಲ್ಲಿ ಸಿಲುಕಿರುವ ಶ್ರೀಲಂಕಾದ ಆರ್ಥಿಕ ಬಿಕ್ಕಟ್ಟು ಪರಿಹಾರಕ್ಕೆ ಆಗ್ರಹಿಸಿ ನಡೆಯುತ್ತಿರುವ ಪ್ರತಿಭಟನೆ ತೀವ್ರಗೊಂಡ ಹಿನ್ನೆಲೆಯಲ್ಲಿ, ದ್ವೀಪ ರಾಷ್ಟ್ರಕ್ಕೆ ತೆರಳಬೇಕಿದ್ದ ನೂರಕ್ಕೂ ಹೆಚ್ಚು ವಿಮಾನಗಳನ್ನು ಭಾರತದ ಕೇರಳದ ಕೊಚ್ಚಿ ಮತ್ತು ತಿರುವನಂತಪುರಂ ವಿಮಾನ ನಿಲ್ದಾಣಗಳಿಗೆ ತಿರುಗಿಸಲಾಗಿದೆ.
Jul 14, 2022, 12:17 pm IST
ಶ್ರೀಲಂಕಾದಲ್ಲಿ ಆರ್ಥಿಕ ಬಿಕ್ಕಟ್ಟಿನಿಂದ ಉದ್ಭವಿಸಿದ ರಾಜಕೀಯ ಬಿಕ್ಕಟ್ಟಿನ ಮಧ್ಯೆ, ಪ್ರತಿಭಟನಾಕಾರರು ರಾಷ್ಟ್ರಪತಿ ಭವನ ಮತ್ತು ಪ್ರಧಾನಿ ನಿವಾಸವನ್ನು ಸುತ್ತುವರೆದಿದ್ದಾರೆ. ಇದೀಗ ಈ ಅಧಿಕೃತ ಕಟ್ಟಡಗಳಿಂದ ದೂರ ಸರಿಯಲಿದ್ದಾರೆ ಎಂಬ ಸುದ್ದಿ ಬಂದಿದೆ. ಶ್ರೀಲಂಕಾದಲ್ಲಿ ಪ್ರತಿಭಟನಾಕಾರರು ಕಟ್ಟಡಗಳನ್ನು ತೊರೆಯುವುದಾಗಿ ಹೇಳಿದ್ದಾರೆ ಎಂದು ಎಎಫ್ಪಿ ವರದಿ ಮಾಡಿದೆ.
Jul 14, 2022, 12:13 pm IST
ಡೈಲಿ ಮಿರರ್ ವರದಿ ಪ್ರಕಾರ, ಶ್ರೀಲಂಕಾ ಅಧ್ಯಕ್ಷ ಗೊಟಬಯ ರಾಜಪಕ್ಸೆಯನ್ನು ಸಿಂಗಾಪುರಕ್ಕೆ ಕರೆದೊಯ್ಯಲು ಖಾಸಗಿ ವಿಮಾನವೊಂದು ಮಾಲ್ಡೀವ್ಸ್ ತಲುಪಿದೆ.
Jul 14, 2022, 10:54 am IST
ಅಧ್ಯಕ್ಷ ಗೊಟಬಯ ರಾಜಪಕ್ಸೆ ಅವರ ರಾಜೀನಾಮೆಯನ್ನು ಇನ್ನೂ ಸ್ವೀಕರಿಸಿಲ್ಲ ಎಂದು ಶ್ರೀಲಂಕಾ ಸಂಸತ್ತಿನ ಸ್ಪೀಕರ್ ಕಚೇರಿ ತಿಳಿಸಿದೆ. ಶ್ರೀಲಂಕಾದ ಅಧ್ಯಕ್ಷ ಗೊಟಬಯ ರಾಜಪಕ್ಸೆ ಮಾಲ್ಡೀವ್ಸ್ನಲ್ಲಿದ್ದಾರೆ ಮತ್ತು ಅವರು ಸಿಂಗಾಪುರಕ್ಕೆ ಹಾರಬೇಕಿತ್ತು ಆದರೆ ಭದ್ರತಾ ಕಾರಣಗಳಿಂದ ಅವರು ಸಿಂಗಾಪುರ್ ಏರ್ಲೈನ್ಸ್ ವಿಮಾನವನ್ನು ಹತ್ತಲು ಸಾಧ್ಯವಾಗಲಿಲ್ಲ. ಸುದ್ದಿ ಪ್ರಕಾರ, ಗೊಟಬಯ ಈಗ ಖಾಸಗಿ ವಿಮಾನಕ್ಕಾಗಿ ಕಾಯುತ್ತಿದ್ದಾರೆ.
Jul 14, 2022, 10:08 am IST
ಶ್ರೀಲಂಕಾದಲ್ಲಿನ ರಾಜಕೀಯ ಪ್ರಕ್ಷುಬ್ಧತೆಯಿಂದ ಉದ್ಭವಿಸುವ ಪರಿಸ್ಥಿತಿಗಳನ್ನು ಪರಿಹರಿಸಲು ವಿಶ್ವಸಂಸ್ಥೆಯು ದೇಶದ ಎಲ್ಲಾ ನಾಯಕರಿಗೆ ಕರೆ ನೀಡಿದೆ. ದೇಶಕ್ಕೆ ಶಾಂತಿ ಮತ್ತು ಪ್ರಜಾಪ್ರಭುತ್ವವನ್ನು ತರಲು ಒಪ್ಪಂದದ ಮನೋಭಾವವನ್ನು ಅಳವಡಿಸಿಕೊಳ್ಳುವಂತೆ ಯುಎನ್ ಸೆಕ್ರೆಟರಿ ಜನರಲ್ ಆಂಟೋನಿಯೊ ಗುಟೆರಸ್ ಎಲ್ಲಾ ಪಕ್ಷದ ನಾಯಕರನ್ನು ಒತ್ತಾಯಿಸಿದರು.
Jul 14, 2022, 9:05 am IST
ಅಧ್ಯಕ್ಷ ಗೋತಬಯ ರಾಜಪಕ್ಸೆ ಅವರು ಮಾಲ್ಡೀವ್ಸ್ನಿಂದ ಸಿಂಗಾಪುರಕ್ಕೆ ತೆರಳುತ್ತಿದ್ದು, ವಿಮಾನ ನಿಲ್ದಾಣದಲ್ಲಿ ಭಾರೀ ಭದ್ರತೆಯನ್ನು ನಿಯೋಜಿಸಲಾಗಿದೆ.
READ MORE
1:15 PM, 11 May
ಶ್ರೀಲಂಕಾದಲ್ಲಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಿ ನಲುಗುತ್ತಿದೆ. ಸರ್ಕಾರದ ವಿರುದ್ಧ ಜನರು ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ.
1:15 PM, 11 May
ದೇಶದ ಹಲವು ಕಡೆ ಪ್ರತಿಭಟನೆ ನಡೆಯುತ್ತಿದೆ. ಜನರ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದೆ.
1:15 PM, 11 May
ದ್ವೀಪ ರಾಷ್ಟ್ರದಲ್ಲಿ ಶಾಂತಿ ಕಾಪಾಡಲು ಪ್ರಯತ್ನಗಳು ನಡೆಯುತ್ತಿವೆ.
1:41 PM, 11 May
ಶ್ರೀಲಂಕಾದಲ್ಲಿ ಕುಪಿತಗೊಂಡ ಪ್ರಜೆಗಳು ಆಡಳಿತ ಪಕ್ಷದ ಮಂತ್ರಿಗಳು, ಸಂಸದರು ಮತ್ತು ಸ್ಥಳೀಯ ಸರ್ಕಾರದ ಸದಸ್ಯರ ಒಡೆತನದ ಹಲವಾರು ಮನೆಗಳು ಮತ್ತು ಇತರ ಆಸ್ತಿಗಳ ಮೇಲೆ ದಾಳಿ ಮಾಡಿದ್ದಾರೆ.
2:59 PM, 11 May
ಶ್ರೀಲಂಕಾದಲ್ಲಿ ಸೋಮವಾರ ನಿಗಂಬೋ ಪ್ರಾಂತ್ಯದಲ್ಲಿ ಸಂಭವಿಸಿದ ಹಿಂಸಾಚಾರದಲ್ಲಿ 8 ಮಂದಿ ಸಾವನ್ನಪ್ಪಿದ್ದಾರೆ. ಸ್ಥಳೀಯ ಪೊಲೀಸರು ಸಹ ಇದನ್ನು ದೃಢಪಡಿಸಿದ್ದಾರೆ.
3:00 PM, 11 May
ಸರ್ಕಾರದ ವಿರುದ್ಧ ಜನರು ಬೀದಿಗಿಳಿದು ಹೋರಾಟ ಮಾಡುತ್ತಿದ್ದಾರೆ. ಹಲವು ದಿನಗಳಿಂದ ನಿರಂತರ ಪ್ರತಿಭಟನೆ ನಡೆಸುತ್ತಿದ್ದಾರೆ ಕಳೆದ ಮೂರು ದಿನಗಳಿಂದ ಪ್ರತಿಭಟನೆ ಹಿಂಸಾರೂಪ ಪಡೆದಿದೆ.
3:01 PM, 11 May
ಸೋಮವಾರ ನಡೆದ ಘಟನೆಯಲ್ಲಿ 200ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, ಅವರಲ್ಲಿ 5-6 ಜನರ ಪರಿಸ್ಥಿತಿ ಗಂಭೀರವಾಗಿದೆ. ಅವರಿಗೆ ವಿವಿಧ ಆಸ್ಪತ್ರೆಯ ಐಸಿಯುಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ನೆಗೋಂಬೋ ಪ್ರಾಂತ್ಯದ ಮಹಾಹುನುಪಿತ್ಯಾ ಎಂಬ ಪ್ರದೇಶದಲ್ಲಿ ಘರ್ಷಣೆ ನಡೆದು, 10 ಹೆಚ್ಚು ವಾಹನಗಳಿಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದರು.
4:54 PM, 11 May
ಕೆಲವು ರಾಜಕೀಯ ವ್ಯಕ್ತಿಗಳು ಮತ್ತು ಅವರ ಕುಟುಂಬಗಳು ಭಾರತಕ್ಕೆ ಪಲಾಯನ ಮಾಡಿದ್ದಾರೆ ಎಂಬ ವದಂತಿಗಳನ್ನು ಕೊಲಂಬೊದಲ್ಲಿರುವ ಭಾರತದ ಹೈಕಮಿಷನ್ ನಿರಾಕರಿಸಿದೆ.
High Commission has recently noticed rumours circulating in sections of media & social media that certain political persons and their families have fled to India. These are fake and blatantly false reports,devoid of any truth or substance.High Commission strongly denies them.
ಶ್ರೀಲಂಕಾಕ್ಕೆ ಸೈನಿಕರನ್ನು ಕಳುಹಿಸುವ ವದಂತಿಗಳನ್ನು ತಳ್ಳಿ ಹಾಕಿದ ಭಾರತ.
The High Commission would like to categorically deny speculative reports in sections of media and social media about #India sending her troops to Sri Lanka. These reports and such views are also not in keeping with the position of the Government of #India. (1/2)
ಎರಡು ವಾರಗಳಲ್ಲಿ ರಾಜಕೀಯ ಸ್ಥಿರತೆ ಇಲ್ಲದಿದ್ದರೆ ರಾಜೀನಾಮೆ ನೀಡುವುದಾಗಿ ಶ್ರೀಲಂಕಾ ಕೇಂದ್ರ ಬ್ಯಾಂಕ್ ಗವರ್ನರ್ ಹೇಳಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.
7:13 PM, 11 May
"ಶ್ರೀಲಂಕಾದಲ್ಲಿ ಹಿಂಸಾಚಾರ ಉಲ್ಬಣಗೊಳ್ಳುತ್ತಿರುವ ಬಗ್ಗೆ ಪ್ರಧಾನ ಕಾರ್ಯದರ್ಶಿ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಅವರು ಎಲ್ಲಾ ಹಿಂಸಾಚಾರವನ್ನು ಖಂಡಿಸುತ್ತಾರೆ ಮತ್ತು ಸಂಯಮವನ್ನು ಚಲಾಯಿಸಲು ಎಲ್ಲಾ ಪಕ್ಷಗಳಿಗೆ ಕರೆ ನೀಡುತ್ತಾರೆ. ಅವರು ಮಾತುಕತೆಯ ಮೂಲಕ ಪ್ರಸ್ತುತ ಸವಾಲುಗಳಿಗೆ ಪರಿಹಾರವನ್ನು ಕಂಡುಕೊಳ್ಳಲು ಎಲ್ಲಾ ಶ್ರೀಲಂಕಾದ ಮಧ್ಯಸ್ಥಗಾರರನ್ನು ಪ್ರೋತ್ಸಾಹಿಸುತ್ತಿದ್ದಾರೆ," ಎಂದು ಪ್ರಧಾನ ಕಾರ್ಯದರ್ಶಿಯ ಉಪ ವಕ್ತಾರ ಫರ್ಹಾನ್ ಹಕ್ ಹೇಳಿದ್ದಾರೆ.
7:14 PM, 11 May
ಶ್ರೀಲಂಕಾದ ಸೆಂಟ್ರಲ್ ಬ್ಯಾಂಕ್ ಗವರ್ನರ್ ನಂದಲಾಲ್ ವೀರಸಿಂಗ್ ಅವರು ರಾಜಕೀಯ ಸ್ಥಿರತೆಯನ್ನು ಮರುಸ್ಥಾಪಿಸಲು ಎರಡು ದಿನಗಳಲ್ಲಿ ಹೊಸ ಸರ್ಕಾರವನ್ನು ನೇಮಿಸದ ಹೊರತು ದೇಶದ ಆರ್ಥಿಕತೆಯು "ವಿಮೋಚನೆ ಮೀರಿ ಕುಸಿಯುತ್ತದೆ" ಎಂದು ಹೇಳಿದರು.
7:15 PM, 11 May
ಶುಕ್ರವಾರದ ವೇಳೆಗೆ ಹೊಸ ಆಡಳಿತ ಅಧಿಕಾರ ವಹಿಸಿಕೊಳ್ಳುವುದು ನಿರ್ಣಾಯಕವಾಗಿದೆ. ಇಲ್ಲವಾದರೆ ದೇಶವು ದುರಂತವನ್ನು ಅನುಭವಿಸುತ್ತದೆ ಎಂದು ವೀರಸಿಂಗ್ ಹೇಳಿದ್ದಾರೆ.
9:17 PM, 11 May
ಬಿಕ್ಕಟ್ಟಿನ ನಡುವೆ ರಾಷ್ಟ್ರವನ್ನುದ್ದೇಶಿಸಿ ಅಧ್ಯಕ್ಷ ಗೋತಬಯ ರಾಜಪಕ್ಸೆ ಭಾಷಣ
11:01 PM, 11 May
"ಯಾವುದೇ ರಾಜಪಕ್ಷಗಳಿಲ್ಲದೆ ನಾನು ಯುವ ಕ್ಯಾಬಿನೆಟ್ ಅನ್ನು ನೇಮಿಸುತ್ತೇನೆ" ಎಂದು ಗೋತಾಬಯ ಹೇಳಿದರು.
11:02 PM, 11 May
ಅಧ್ಯಕ್ಷ ಗೋತಬಯ ಅವರು ಹೊಸ ಸರ್ಕಾರವನ್ನು ಸ್ಥಾಪಿಸಲು ಕೆಲಸ ಮಾಡುತ್ತಿದ್ದಾರೆ ಎಂದು ಹೇಳುತ್ತಾರೆ. ವಾರದೊಳಗೆ ಬಹುಮತದ ವಿಶ್ವಾಸ ಹೊಂದಿರುವ ಹೊಸ ಪ್ರಧಾನಿ ಮತ್ತು ಸಚಿವ ಸಂಪುಟವನ್ನು ನೇಮಕ ಮಾಡುವುದಾಗಿ ಹೇಳಿದ್ದಾರೆ.
11:56 PM, 11 May
ದ್ವೀಪ ರಾಷ್ಟ್ರದಲ್ಲಿ ಬೀಜಿಂಗ್ನ ಗಣನೀಯ ಕಾರ್ಯತಂತ್ರದ ಹೂಡಿಕೆಗಳಿಗೆ ದಾರಿ ಮಾಡಿಕೊಟ್ಟ ಪ್ರಧಾನಿ ಮಹಿಂದಾ ರಾಜಪಕ್ಸೆ ಅವರ ರಾಜೀನಾಮೆ ಕುರಿತು ಪ್ರತಿಕ್ರಿಯಿಸಲು ಚೀನಾ ಬುಧವಾರ ನಿರಾಕರಿಸಿದೆ.
6:59 AM, 12 May
ಶ್ರೀಲಂಕಾದಲ್ಲಿ ಆರ್ಥಿಕ ಬಿಕ್ಕಟ್ಟು, ಉದ್ವಿಗ್ನ ಪರಿಸ್ಥಿತಿಯ ನಡುವೆ ಈ ವಾರದಲ್ಲಿಯೇ ನೂತನ ಪ್ರಧಾನಮಂತ್ರಿಯನ್ನು ಆಯ್ಕೆ ಮಾಡಲಾಗುವುದು ಎಂದು ಶ್ರೀಲಂಕಾದ ಅಧ್ಯಕ್ಷ ಗೊತಬಯ ರಾಜಪಕ್ಸೆ ಹೇಳಿದ್ದಾರೆ.
10:09 AM, 12 May
ಕಳೆದ 24 ಗಂಟೆಯಲ್ಲಿ ಆದ ಪ್ರಮುಖ ಬೆಳವಣಿಗೆಗಳು:
1) ಈ ವಾರದಲ್ಲಿ ಹೊಸ ಪ್ರಧಾನಿ ಆಯ್ಕೆ ಮತ್ತು ಸಂಪುಟ ರಚನೆ ಮಾಡುವುದಾಗಿ ಶ್ರೀಲಂಕಾ ಅಧ್ಯಕ್ಷ ಗೋಟಾಬಯ ರಾಜಪಕ್ಸೆ ಹೇಳಿಕೆ
2) ಮಾಜಿ ಪ್ರಧಾನಿ ಮಹಿಂದಾ ರಾಜಪಕ್ಸೆಗೆ ತಿರುಕೋಣಮಲೈ ನೌಕಾ ನೆಲೆಯಲ್ಲಿ ರಕ್ಷಣೆ
3) ಶ್ರೀಲಂಕಾ ದೇಶಕ್ಕೆ ಮಿಲಿಟರಿ ಆಡಳಿತ ಇಲ್ಲ ಎಂದು ರಕ್ಷಣಾ ಕಾರ್ಯದರ್ಶಿ ಸ್ಪಷ್ಟನೆ
4) ಶ್ರೀಲಂಕಾದ ಸೆಂಟ್ರಲ್ ಬ್ಯಾಂಕ್ ಗವರ್ನರ್ ರಾಜೀನಾಮೆಗೆ ಮುಂದು
ರೀಲಂಕಾದಲ್ಲಿ ಅತ್ಯಂತ ಭೀಕರ ಆರ್ಥಿಕ ಬಿಕ್ಕಟ್ಟಿನ ಹಿನ್ನೆಲೆಯ ನಡೆಯುತ್ತಿರುವ ಉದ್ವಿಗ್ನತೆಯ ನಡುವೆ ಈ ವಾರವೇ ಹೊಸ ಪ್ರಧಾನಮಂತ್ರಿ ಮತ್ತು ಸಂಪುಟವನ್ನು ನೇಮಿಸಲಾಗುವುದು ಎಂದು ಅಧ್ಯಕ್ಷ ಗೋತಬಯ ರಾಜಪಕ್ಸೆ ಹೇಳಿದ್ದಾರೆ.
ಪ್ರಧಾನಿ ಸ್ಥಾನಕ್ಕೆ ಮಹಿಂದಾ ರಾಜಪಕ್ಸೆ ರಾಜೀನಾಮೆ ಕೊಟ್ಟ ಬಳಿಕ ಇದೀಗ ಅಧ್ಯಕ್ಷ ಗೋಟಾಬಯ ರಾಜಪಕ್ಸೆ ರಾಜೀನಾಮೆಗೆ ಒತ್ತಾಯ ಬಲವಾಗಿ ಕೇಳಿಬರುತ್ತಿದೆ. ಆದರೆ ಕುರ್ಚಿಯಿಂದ ಕೆಳಗಿಳಿಯವ ಯಾವ ಧಾವಂತವನ್ನೂ ರಾಜಪಕ್ಸೆ ತೋರಿಸಿಲ್ಲ. ಹೊಸ ಪ್ರಧಾನಿ ನೇತೃತ್ವದಲ್ಲಿ ಈ ವಾರ ಹೊಸ ಸರಕಾರ ರಚಿಸುತ್ತೇನೆ ಎಂದು ಮಾತ್ರ ಹೇಳಿದ್ದಾರೆ.
11:39 AM, 12 May
ಸೋಮವಾರ ನಡೆದ ಹಿಂಸಾಚಾರಗಳ ಹಿನ್ನೆಲೆಯಲ್ಲಿ ದೇಶಾದ್ಯಂತ ವಿಧಿಸಲಾಗಿದ್ದ ಕರ್ಫ್ಯೂ ಇಂದು ಗುರುವಾರ ಬೆಳಗ್ಗೆಯವರೆಗೂ ವಿಸ್ತರಣೆ ಆಗಿದೆ. ನಿನ್ನೆ ಬುಧವಾರ ರಾತ್ರಿ ಕರ್ಫ್ಯೂ ಅಂತ್ಯವಾಗಭೇಕಿತ್ತಾದರೂ ಮುನ್ನೆಚ್ಚರಿಕೆ ದೃಷ್ಟಿಯಿಂದ ನಿಷೇಧಾಜ್ಞೆ ಮುಂದುವರಿಸಲಾಯಿತು.
12:13 PM, 12 May
ಶ್ರಿಲಂಕಾದಲ್ಲಿ ಕರ್ಫ್ಯೂ ಆಜ್ಞೆಯನ್ನು ಗುರುವಾರ ಬೆಳಗ್ಗೆ 7 ಗಂಟೆಗೆ ತೆರವುಗೊಳಿಸುತ್ತಿದ್ದಂತೆಯೇ ರಾಜಧಾನಿ ಕೊಲಂಬೋ ನಗರದಿಂದ ನೂರಾರು ಜನರು ತಂತಮ್ಮ ಊರುಗಳಿಗೆ ದೌಡಾಯಿಸುತ್ತಿದ್ದಾರೆ. ಮಧ್ಯಾಹ್ನ 2ಗಂಟೆಗೆ ಮತ್ತೆ ಕರ್ಫ್ಯೂ ಜಾರಿಗೆ ಬರಲಿರುವ ಹಿನ್ನೆಲೆಯಲ್ಲಿ ಸ್ವಂತ ಊರಿಗೆ ಹೋಗಿ ಗೂಡು ಸೇರಿಕೊಳ್ಳಲು ಜನರು ಬಸ್, ರೈಲು ನಿಲ್ದಾಣಗಳತ್ತ ಮುಗಿಬಿದ್ದಿದ್ದಾರೆ.
6:28 PM, 12 May
225 ಸದಸ್ಯರ ಸಂಸತ್ತಿನಲ್ಲಿ ಕೇವಲ ಒಂದು ಸ್ಥಾನವನ್ನು ಹೊಂದಿರುವ ಶ್ರೀಲಂಕಾದ ಮಾಜಿ ಪ್ರಧಾನಿ ರಾನಿಲ್ ವಿಕ್ರಮಸಿಂಘೆ ಅವರು ಮುಂದಿನ ಪ್ರಧಾನ ಮಂತ್ರಿಯಾಗಬಹುದು ಎಂದು ಮಾಧ್ಯಮ ವರದಿಗಳು ಗುರುವಾರ ಹೇಳಿವೆ.
7:24 PM, 12 May
ಆರ್ಥಿಕ ಬಿಕ್ಕಟ್ಟಿನ ಉದ್ವಿಗ್ನತೆಯ ಮಧ್ಯೆ, ಶ್ರೀಲಂಕಾದ ಅಧ್ಯಕ್ಷ ಗೋತಬಯ ರಾಜಪಕ್ಸೆ ಅವರು ಸಂಸತ್ತಿಗೆ ಮತ್ತಷ್ಟು ಅಧಿಕಾರ ನೀಡಲು 19 ನೇ ತಿದ್ದುಪಡಿಯ ವಿಷಯಗಳನ್ನು ಪುನಃ ಜಾರಿಗೆ ತರಲು ದೇಶದ ಸಂವಿಧಾನವನ್ನು ತಿದ್ದುಪಡಿ ಮಾಡಲು ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದು ಹೇಳಿದರು.
8:36 PM, 12 May
ಪ್ರಜಾಸತ್ತಾತ್ಮಕ ಪ್ರಕ್ರಿಯೆಗಳಿಗೆ ಅನುಗುಣವಾಗಿ ರಚನೆಯಾದ ಶ್ರೀಲಂಕಾದ ಹೊಸ ಸರ್ಕಾರದೊಂದಿಗೆ ಕೆಲಸ ಮಾಡಲು ಭಾರತ ಎದುರು ನೋಡುತ್ತಿದೆ: ಭಾರತೀಯ ಹೈಕಮಿಷನ್
8:37 PM, 12 May
ಹೊಸ ಪ್ರಧಾನಿಯ ನೇಮಕಾತಿ ಮತ್ತು ದ್ವೀಪ ರಾಷ್ಟ್ರದಲ್ಲಿ ರಾಜಕೀಯ ಸ್ಥಿರತೆಯ ಊಹಾಪೋಹದ ಮೇಲೆ ಎರಡು ದಿನಗಳ ಕಾಲ ಮುಚ್ಚಲ್ಪಟ್ಟ ಶ್ರೀಲಂಕಾದ ಷೇರುಗಳ ಸೂಚ್ಯಂಕ ಗುರುವಾರ ಶೇಕಡಾ ಮೂರರಷ್ಟು ಜಿಗಿದಿದೆ ಎಂದು ವಿತರಕರು ತಿಳಿಸಿದ್ದಾರೆ.
9:31 PM, 12 May
ರಾನಿಲ್ ವಿಕ್ರಮಸಿಂಘೆ ಅವರನ್ನು ಶ್ರೀಲಂಕಾದ ಹೊಸ ಪ್ರಧಾನಿಯಾಗಿ ಆಯ್ಕೆ ಮಾಡಲಾಗಿದೆ.
10:09 PM, 12 May
ಶ್ರೀಲಂಕಾದ ಪ್ರಧಾನಿಯಾಗಿ ನೇಮಕಗೊಂಡ ಕೆಲವೇ ದಿನಗಳಲ್ಲಿ, ರನಿಲ್ ವಿಕ್ರಮಸಿಂಘೆ ಅವರು ದ್ವೀಪ ರಾಷ್ಟ್ರದ ಬಿಕ್ಕಟ್ಟಿನ ಆರ್ಥಿಕತೆಯನ್ನು ಮೇಲಕ್ಕೆತ್ತುವ ಸವಾಲನ್ನು ತೆಗೆದುಕೊಂಡಿದ್ದಾರೆ ಮತ್ತು ಅವರ ಸರ್ಕಾರದ ಅಡಿಯಲ್ಲಿ ಭಾರತದೊಂದಿಗಿನ ಸಂಬಂಧಗಳು ಉತ್ತಮಗೊಳ್ಳುತ್ತವೆ ಎಂದು ಹೇಳಿದರು.
11:23 PM, 12 May
ಸರ್ಕಾರದ ಪತನದ ನಂತರ ಸೋಮವಾರ ಶ್ರೀಲಂಕಾದಲ್ಲಿ ಅಶಾಂತಿಗೆ ಉತ್ತೇಜನ ನೀಡಿದ 59 ಸಾಮಾಜಿಕ ಮಾಧ್ಯಮ ಗುಂಪುಗಳನ್ನು ಸ್ಥಳೀಯ ಪೊಲೀಸರು ಗುರುತಿಸಿದ್ದಾರೆ.
Sri Lanka Crisis Live Updates in Kannada: Sri Lankan PM Mahinda Rajapaksa resigns; curfew imposed across nation; Violence erupts across country. Check Latest News, Current Situation and What is Happening in Sri Lanka in kannada.