ವಿಡಿಯೋ: ಲಂಕಾ ಅಧ್ಯಕ್ಷ ಗೋಟಬಯ ಪೂಲ್ನಲ್ಲಿ ಪ್ರತಿಭಟನಾಕಾರರ ಈಜು
ಕೊಲಂಬೊ, ಜುಲೈ 9: ಆರ್ಥಿಕ ಬಿಕ್ಕಟ್ಟಿನಿಂದಾಗಿ ಆಕ್ರೋಶಗೊಂಡ ಪ್ರತಿಭಟನಾಕಾರರು ಶ್ರೀಲಂಕಾ ಅಧ್ಯಕ್ಷ ಗೋಟಬಯ ರಾಜಪಕ್ಸೆ ಅವರ ಅಧಿಕೃತ ನಿವಾಸಕ್ಕೆ ನುಗ್ಗಿ ಕೊಳದಲ್ಲಿ ಈಜುತ್ತಿರುವ ದೃಶ್ಯ ವೈರಲ್ ಆಗಿದೆ. ಮಾತ್ರವಲ್ಲದೆ ಅಡುಗೆಮನೆಯಲ್ಲಿ ಅಡುಗೆ ಮಾಡುತ್ತಿರುವುದು ಕಂಡುಬಂದಿದೆ.
ದೇಶದ ರಾಷ್ಟ್ರಧ್ವಜಗಳನ್ನು ಬೀಸುತ್ತಾ ಪ್ರತಿಭಟನಾಕಾರರ ಗುಂಪೊಂದು ಕೊಳವನ್ನು ಸುತ್ತುವರೆದಿರುವ ವಿಡಿಯೋ ವೈರಲ್ ಆಗಿದೆ. ಪ್ರತಿಭಟನಾಕಾರರಲ್ಲಿ ಕೆಲವರು ಈಜುಕೊಳದಲ್ಲಿ ಮುಳುಗಿ ಈಜಾಡುತ್ತಿರುವುದು ವಿಡಿಯೋದಲ್ಲಿ ಕಂಡುಬಂದಿದೆ. ಅಷ್ಟರಲ್ಲಾಗಲೇ ಇತ್ತ ಅಡುಗೆ ಮನೆ ತುಂಬಿ ತುಳುಕುತ್ತಿದ್ದು, ದೊಡ್ಡ ಟೇಬಲ್ ಸುತ್ತಲೂ ಪಾತ್ರೆಗಳು ಮತ್ತಿತರ ವಸ್ತುಗಳನ್ನು ಚೆಲ್ಲಾಪಿಲ್ಲಿಯಾಗಿ ಹಾಕಿದ್ದ ಪ್ರತಿಭಟನಾಕಾರರ ಗುಂಪೊಂದು ಆಕ್ರೋಶ ಹೊರಹಾಕಿದೆ. ಇನ್ನೊಂದು ಗುಂಪು ಅಡುಗೆ ಮಾಡುತ್ತಿರುವುದು ಕಾಣಿಸಿದೆ.
ಪರಿಸ್ಥಿತಿ ನಿಯಂತ್ರಣ ತಪ್ಪಲಿದೆ ಎಂದು ಗುಪ್ತಚರ ವರದಿಗಳು ಎಚ್ಚರಿಕೆ ನೀಡಿದ ನಂತರ ಅಧ್ಯಕ್ಷ ರಾಜಪಕ್ಸೆ ಅವರನ್ನು ಸೇನಾ ಪ್ರಧಾನ ಕಚೇರಿಗೆ ಸ್ಥಳಾಂತರಿಸಲಾಯಿತು ಎಂದು ಸರ್ಕಾರದ ಉನ್ನತ ಮೂಲವೊಂದು ತಿಳಿಸಿದೆ. ಪ್ರಧಾನಿ ರನಿಲ್ ವಿಕ್ರಮಸಿಂಘೆ ಅವರು ಪಕ್ಷದ ನಾಯಕರ ತುರ್ತು ಸಭೆಯನ್ನು ಕರೆದಿದ್ದು, ಪರಿಸ್ಥಿತಿಗೆ ಪರಿಹಾರವನ್ನು ಚರ್ಚಿಸಲು ನಿರ್ಧರಿಸಿದ್ದಾರೆ. ಅವರು ಸಭೆ ಕರೆಯುವಂತೆ ಸ್ಪೀಕರ್ಗೆ ಮನವಿ ಮಾಡಿದ್ದಾರೆ.

ಪರಿಸ್ಥಿತಿ ನಿಭಾಯಿಸುವಲ್ಲಿ ರಾಜಪಕ್ಸೆ ವಿಫಲ
ಶ್ರೀಲಂಕಾ ಆಹಾರ ಮತ್ತು ಇಂಧನದ ಕೊರತೆಯನ್ನು ಎದುರಿಸುತ್ತಿದೆ. ಜೊತೆಗೆ ದ್ವೀಪ ರಾಷ್ಟ್ರ ಅಗತ್ಯ ವಸ್ತುಗಳನ್ನು ಆಮದು ಮಾಡಿಕೊಳ್ಳಲು ವಿದೇಶಿ ಮೀಸಲು ಖಾಲಿಯಾದ ನಂತರ ದೀರ್ಘಾವಧಿಯ ಬ್ಲ್ಯಾಕ್ಔಟ್ ಮತ್ತು ರನ್ಅವೇ ಹಣದುಬ್ಬರವನ್ನು ಎದುರಿಸುತ್ತಿದೆ. ಇದನ್ನು ನಿಭಾಯಿಸುವಲ್ಲಿ ಅಧ್ಯಕ್ಷ ರಾಜಪಕ್ಸೆ ವಿಫಲರಾಗಿದ್ದಾರೆ. ಹೀಗಾಗಿ ರಾಜಪಕ್ಸೆ ರಾಜೀನಾಮೆಗೆ ಆಗ್ರಹಿಸಿ ಸಾವಿರಾರು ಮಂದಿ ದೇಶದಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.
ವಿರೋಧ ಪಕ್ಷಗಳು ಮತ್ತು ಕಾರ್ಯಕರ್ತರು ಪೊಲೀಸರ ವಿರುದ್ಧ ಮಾತಿಗಿಳಿದು ಪರಿಸ್ಥಿತಿ ವಿಕೋಪಕ್ಕೆ ತಿರುಗಿದೆ. ಇಂದಿನ ಬೃಹತ್ ರ್ಯಾಲಿಗೆ ನಿನ್ನೆಯಿಂದಲೇ ಜನ ಜಮಾಯಿಸಿದ್ದು ಇದರಿಂದ ಪರಿಸ್ಥಿತಿ ನಿಯಂತ್ರಣಕ್ಕೆ ತರಲು ಕರ್ಫ್ಯೂ ಜಾರಿ ಮಾಡಲಾಗಿದೆ.

ಭದ್ರತೆ ನಡುವೆ ಅಧ್ಯಕ್ಷರ ಮನೆ ಮೇಲೆ ಮುತ್ತಿಗೆ
ಸರ್ಕಾರಿ ವಿರೋಧಿ ಪ್ರತಿಭಟನಾಕಾರರು ಶನಿವಾರ ಪ್ರತಿಭಟನೆ ತೀವ್ರಗೊಳಿಸುವ ಪ್ರತಿಜ್ಞೆ ಮಾಡಿದ್ದಾರೆ. ಹೀಗಾಗಿ ಇಂದು ರಾಜಪಕ್ಸೆ ಅವರ ಅಧಿಕೃತ ನಿವಾಸವನ್ನು ಕಾವಲು ಕಾಯುತ್ತಿರುವ ಪೊಲೀಸರ ಸಂಖ್ಯೆಯನ್ನು ಹೆಚ್ಚಿಸಲಾಗಿದೆ. ಆಕ್ರಮಣಕಾರಿ ರೈಫಲ್ಗಳೊಂದಿಗೆ ಶಸ್ತ್ರಸಜ್ಜಿತ ಸಾವಿರಾರು ಸೈನಿಕರು ಕೊಲಂಬೊಕ್ಕೆ ಮುಂಜಾನೆ ಬಸ್ಗಳನ್ನು ಕಳುಹಿಸಲಾಗಿದೆ.
ಸುಮಾರು 20,000 ಸೈನಿಕರು ಮತ್ತು ಪೊಲೀಸರು ಹಾಗೂ ಮಹಿಳೆಯರನ್ನು ಒಳಗೊಂಡ ಸ್ಥಳದಲ್ಲಿ ಅಲರ್ಟ್ ಘೋಷಿಸಲಾಗಿದೆ. ಅದಾಗಿಯೂ ಇಂದು ಪ್ರತಿಭಟನೆ ಹಿಂಸಾತ್ಮಕವಾಗುವುದಿಲ್ಲ ಎಂದು ನಾವು ಭಾವಿಸುತ್ತೇವೆ ಎಂದು ಸ್ಥಳೀಯ ಉನ್ನತ ರಕ್ಷಣಾ ಅಧಿಕಾರಿ ಸುದ್ದಿಗಾರರಿಗೆ ತಿಳಿಸಿದ್ದಾರೆ. ಆದರೂ ಪ್ರತಿಭಟನಾಕಾರರು ಅಧ್ಯಕ್ಷರ ಮನೆ ಮೇಲೆ ಮುತ್ತಿಗೆ ಹಾಕಿದ್ದಾರೆ.
|
ಪ್ರತಿಭಟನಾಕಾರರ ಆಕ್ರೋಶ
ಶನಿವಾರದ ಪ್ರದರ್ಶನಗಳು ಶಾಂತಿಯುತವಾಗಿ ನಡೆಯುವುದನ್ನು ಖಚಿತಪಡಿಸಿಕೊಳ್ಳುವಂತೆ ವಿಶ್ವಸಂಸ್ಥೆಯು ಶ್ರೀಲಂಕಾದ ಅಧಿಕಾರಿಗಳು ಮತ್ತು ಪ್ರತಿಭಟನಾಕಾರರನ್ನು ಒತ್ತಾಯಿಸಿದೆ. ಜೊತೆಗೆ ಅಸೆಂಬ್ಲಿಗಳ ಪೋಲೀಸಿಂಗ್ನಲ್ಲಿ ಸಂಯಮವನ್ನು ತೋರಿಸಲು ಮತ್ತು ಹಿಂಸಾಚಾರವನ್ನು ತಡೆಯಲು ಅಗತ್ಯವಿರುವ ಎಲ್ಲ ಪ್ರಯತ್ನಗಳನ್ನು ಖಚಿತಪಡಿಸಿಕೊಳ್ಳಲು ನಾವು ಶ್ರೀಲಂಕಾದ ಅಧಿಕಾರಿಗಳನ್ನು ಒತ್ತಾಯಿಸುತ್ತೇವೆ ಎಂದು ಯುಎನ್ ಮಾನವ ಹಕ್ಕುಗಳ ಹೈ ಕಮಿಷನರ್ ಕಚೇರಿ ಹೇಳಿತ್ತು. ಆದರೆ ಪರಿಸ್ಥಿತಿ ಕೈಮೀರಿ ಹೋದಾಗ ಅಧ್ಯಕ್ಷರನ್ನು ಸ್ಥಳದಿಂದ ಸ್ಥಳಾಂತರಿಸಲಾಗಿದೆ.
ಅಧ್ಯಕ್ಷರ ಮನೆಗೆ ಮುತ್ತಿಗೆ ಹಾಕಿದ ಪ್ರತಿಭಟನಾಕಾರರು ಅವರ ಈಜುಕೊಳದಲ್ಲಿ ಈಜು ಅಡುಗೆ ಮನೆಯಲ್ಲಿ ಅಡುಗೆ ಮಾಡುವ ವಿಡಿಯೋ ಹಾಗೂ ಫೋಟೋಗಳು ವೈರಲ್ ಆಗಿವೆ.

ಮಹಿಂದ ರಾಜಪಕ್ಸೆ ಪ್ರಧಾನಿ ಹುದ್ದೆಗೆ ರಾಜೀನಾಮೆ
ತೀವ್ರ ಆರ್ಥಿಕ ಬಿಕ್ಕಟ್ಟಿನಿಂದಾಗಿ ಹಲವು ತಿಂಗಳಿನಿಂದ ಸರಣಿ ಪ್ರತಿಭಟನೆಗೆ ಸಾಕ್ಷಿಯಾಗಿದ್ದ ನೆರೆಯ ದ್ವೀಪರಾಷ್ಟ್ರ ಶ್ರೀಲಂಕಾದಲ್ಲಿ ಮೇ ತಿಂಗಳಲ್ಲಿ ಭಾರಿ ಹಿಂಸಾಚಾರ ಭುಗಿಲೆದ್ದಿತ್ತು. ಘಟನೆಯಲ್ಲಿ ಆಡಳಿತಾರೂಢ ಪಕ್ಷದ ಸಂಸದ ಸೇರಿ ಮೂವರು ಸಾವನ್ನಪ್ಪಿದ್ದು, 200ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಆಡಳಿತಾರೂಢ ಪಕ್ಷದ ಹಲವು ನಾಯಕರ ಮನೆ, ಕಚೇರಿ, ವಾಹನಗಳಿಗೆ ಬೆಂಕಿ ಹಚ್ಚಲಾಗಿದ್ದು, ದೇಶಾದ್ಯಂತ ಪ್ರಕ್ಷುಬ್ಧ ಸ್ಥಿತಿ ನಿರ್ಮಾಣವಾಗಿತ್ತು.
ಈ ಹಿನ್ನೆಲೆಯಲ್ಲಿ ಪರಿಸ್ಥಿತಿ ನಿಯಂತ್ರಣಕ್ಕೆ ದೇಶಾದ್ಯಂತ ಜಾರಿಯಲ್ಲಿರುವ ತುರ್ತುಪರಿಸ್ಥಿತಿ ಜೊತೆಗೆ ಕಫä್ರ್ಯ ಹೇರಲಾಗಿತ್ತು. ಇದೆಲ್ಲದರ ನಡುವೆಯೇ ದೇಶದ ಹಾಲಿ ಪರಿಸ್ಥಿತಿಗೆ ಕಾರಣಕರ್ತ ಎಂಬ ಟೀಕೆಗೆ ಗುರಿಯಾಗಿದ್ದ ಪ್ರಧಾನಿ ಮಹಿಂದ ರಾಜಪಕ್ಸೆ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದರು.
Recommended Video
-
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications