ಶ್ರೀಲಂಕಾದಲ್ಲಿ ಸಾಲುಗಟ್ಟಿ ನಿಂತವರಿಗೆ ಸಿಗುವುದೆಷ್ಟು ಇಂಧನ!?
ಕೊಲಂಬೋ, ಜುಲೈ 16: ಶ್ರೀಲಂಕಾದಲ್ಲಿ ಸೃಷ್ಟಿಯಾಗಿರುವ ಆರ್ಥಿಕ ಬಿಕ್ಕಟ್ಟಿನ ಮಧ್ಯೆ ಇಂಧನ ಕೊರತೆಯನ್ನು ನಿಯಂತ್ರಿಸುವ ಮತ್ತು ನಿರ್ವಹಿಸುವುದಕ್ಕಾಗಿ ರಾಷ್ಟ್ರೀಯ ಇಂಧನ ಕೋಟಾ ಯೋಜನೆಯನ್ನು ಪರಿಚಯಿಸುವುದಕ್ಕೆ ನಿರ್ಧರಿಸಲಾಗಿದೆ.
ಸರ್ಕಾರದ ಕೋಟಾ ಯೋಜನೆ ಅಡಿಯಲ್ಲಿ ರಾಷ್ಟ್ರೀಯ ಗುರುತಿನ ಚೀಟಿಯನ್ನು ಹೊಂದಿರುವ ಪ್ರತಿ ವಾಹನಕ್ಕೆ ಒಂದು ವಾರದಲ್ಲಿ ಇಂತಿಷ್ಟು ಇಂಧನವನ್ನು ಕಡ್ಡಾಯವಾಗಿ ನೀಡುವುದಕ್ಕೆ ನಿಗದಿಪಡಿಸಲಾಗಿದೆ.
ವಾಹನದ ಚಾಸಿಸ್ ಸಂಖ್ಯೆ ಮತ್ತು ವಿವರಗಳನ್ನು ಪರಿಶೀಲಿಸಿದ ನಂತರ QR ಕೋಡ್ ಅನ್ನು ಹಂಚಲಾಗುತ್ತದೆ. ನಂಬರ್ ಪ್ಲೇಟ್ನ ಕೊನೆಯ ಅಂಕಿಯ ಆಧಾರದ ಮೇಲೆ ವಾರದ ಎರಡು ದಿನ ಇಂಧನವನ್ನು ಹಂಚಿಕೆ ಮಾಡಲಾಗುತ್ತದೆ.

ಶ್ರೀಲಂಕಾದಲ್ಲಿ ಪರಿಸ್ಥಿತಿ ಸುಧಾರಣೆ
ಕಳೆದ ಗುರುವಾರವಷ್ಟೇ ಶ್ರೀಲಂಕಾದ ಅಧ್ಯಕ್ಷ ಗೋಟಬಯಾ ರಾಜಪಕ್ಸೆ ತಮ್ಮ ಸ್ಥಾನಕ್ಕೆ ರಾಜೀನಾಮೆಯನ್ನು ಸಲ್ಲಿಸಿದ ಮಾಲ್ಡೀವ್ಸ್ ಮತ್ತು ಅಲ್ಲಿಂದ ಸಿಂಗಾಪೂರಕ್ಕೆ ಪಲಾಯನ ಮಾಡಿದರು. ಇದರ ಮಧ್ಯೆ ದ್ವೀಪರಾಷ್ಟ್ರದಲ್ಲಿ ಪರಿಸ್ಥಿತಿ ಸುಧಾರಣೆ ಕಂಡಿದೆ. ಈ ಹಿನ್ನೆಲೆ ಇಂಧನ ಕೊರತೆಯನ್ನು ಸಮರ್ಥವಾಗಿ ನಿರ್ವಹಿಸುವುದಕ್ಕಾಗಿ ಕೆಲವು ಕಠಿಣ ಕ್ರಮಗಳನ್ನು ಜಾರಿಗೊಳಿಸಲಾಗುತ್ತಿದೆ.

ಪೆಟ್ರೋಲ್-ಡೀಸೆಲ್ ಖರೀದಿಗಾಗಿ ಜನರ ಸರದಿ ಸಾಲು
ಶ್ರೀಲಂಕಾದಲ್ಲಿ ಕಳ್ಳ ಮಾರುಕಟ್ಟೆಯಲ್ಲಿ ಪೆಟ್ರೋಲ್-ಡೀಸೆಲ್ ಮಾರಾಟಕ್ಕೆ ಕಡಿವಾಣ ಹಾಕುವುದು. ಇಂಧನ ಸಂಗ್ರಹಣೆಯನ್ನು ನಿಯಂತ್ರಿಸುವುದು ಹಾಗೂ ದ್ವೀಪರಾಷ್ಟ್ರದ ಮಂದಿಗೆ ಸಮಾನ ರೀತಿಯಲ್ಲಿ ಇಂಧನವನ್ನು ಪೂರೈಸಲು ನಿರ್ಧರಿಸಲಾಗಿದೆ. ಈ ನಿಟ್ಟಿನಲ್ಲಿ ಹೊಸ ಇಂಧನ ವಿತರಣಾ ಕಾರ್ಯ ವಿಧಾನವನ್ನು ರೂಪಿಸಲಾಗುತ್ತಿದೆ. ದೇಶದ ಜನರು ಗ್ಯಾಸ್ ಸ್ಟೇಷನ್ಗಳ ಹೊರಗೆ ಇಂಧನ ತುಂಬಿಸಿಕೊಳ್ಳುವುದಕ್ಕಾಗಿಯೇ ಕಿಲೋಮೀಟರ್ ಉದ್ದದ ಸರತಿ ಸಾಲುಗಳಲ್ಲಿ ನಿಂತಿದ್ದಾರೆ.

ಶ್ರೀಲಂಕಾದಲ್ಲಿ ಶಾಲಾ-ಕಾಲೇಜು ಬಂದ್
ಇಂಧನ ಕೊರತೆಯನ್ನು ಮನಗಂಡು ಹಲವು ರೀತಿ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆ. ಪ್ರತಿನಿತ್ಯ ಉದ್ಯೋಗಿಗಳು ಕಚೇರಿಗಳಿಗೆ ತೆರಳುವುದಕ್ಕಾಗಿ ಇಂಧನ ಬಳಕೆ ಆಗುತ್ತಿರುವುವದು ಹೆಚ್ಚಾಗಿರುವ ಹಿನ್ನೆಲೆ ಉದ್ಯೋಗಿಗಳಿಗೆ ವರ್ಕ್ ಫ್ರಾಮ್ ಹೋಮ್ ಮಾಡುವಂತೆ ಸೂಚನೆ ನೀಡಲಾಗಿದೆ. ಇನ್ನೊಂದು ಕಡೆಯಲ್ಲಿ ಮಕ್ಕಳು ಶಾಲೆಗಳಿಗೆ ಹೋಗುವುದಕ್ಕೆ ಸಾಧ್ಯಯವಾಗದ ಕಾರಣ ಶಾಲೆಗಳನ್ನು ಬಂದ್ ಮಾಡಲಾಗಿದೆ. ಆ ಮೂಲಕ ಇಂಧನ ಬಳಕೆಯ ಪ್ರಮಾಣವನ್ನು ತಗ್ಗಿಸಲು ಯೋಜನೆ ಹಾಕಿಕೊಳ್ಳಲಾಗಿದೆ.

ದ್ವೀಪರಾಷ್ಟ್ರದಿಂದ ಮಾಜಿ ಅಧ್ಯಕ್ಷ ರಾಜಪಕ್ಸೆ ಜೂಟ್
ಇಡೀ ರಾಷ್ಟ್ರವೇ ಆರ್ಥಿಕ ಬಿಕ್ಕಟ್ಟು, ಇಂಧನ ಕೊರತೆ, ಸರ್ಕಾರದ ನಿರ್ವಹಣೆ ವೈಫಲ್ಯದ ಸುಳಿಗೆ ಸಿಲುಕಿದ ಸಂದರ್ಭದಲ್ಲಿ ಜನರು ಕೆರಳಿ ರಸ್ತೆಗೆ ಇಳಿದರು. ಒಂದು ಹಂತದಲ್ಲಿ ಜನರು ಮಾಜಿ ಅಧ್ಯಕ್ಷ ಗೋಟಬಯ ರಾಜಪಕ್ಸೆ ನಿವಾಸಕ್ಕೆ ನುಗ್ಗಿ ವಸ್ತುಗಳನ್ನು ಧ್ವಂಸಗೊಳಿಸಿದರು. ಧಿಕ್ಕಾರ ಘೋಷಣೆಗಳನ್ನು ಕೂಗುತ್ತಿರುವುದರ ಮಧ್ಯೆ ಸರ್ಕಾರದ ಚುಕ್ಕಾಣಿಯನ್ನು ಬಿಟ್ಟು ಓಡಿ ಹೋಗುವ ನಿರ್ಧಾರಕ್ಕೆ ರಾಜಪಕ್ಸೆ ಬಂದರು. ಜುಲೈ 14ರಂದು ರಾಜಪಕ್ಸೆ ತಮ್ಮ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ, ಮಾಲ್ಡೀವ್ಸ್ ಕಡೆಗೆ ಪಲಾಯನ ಮಾಡಿದರು. ಅಲ್ಲಿನ ಶ್ರೀಲಂಕಾ ಪ್ರಜೆಗಳು ಪ್ರತಿಭಟನೆ ಮಾಡುತ್ತಿರುವುದನ್ನು ಅರಿತುಕೊಂಡು ಸಿಂಗಾಪುರಕ್ಕೆ ಹಾರಿದ್ದರು.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications