Breaking; ಶ್ರೀಲಂಕಾದ ಅಧ್ಯಕ್ಷರಾಗಿ ವಿಕ್ರಮಸಿಂಘೆ ಅಧಿಕಾರ ಸ್ವೀಕಾರ
ಕೊಲಂಬೋ, ಜುಲೈ 21: ಶ್ರೀಲಂಕಾದ ನೂತನ ಅಧ್ಯಕ್ಷರಾಗಿ ಹಿರಿಯ ರಾಜಕಾರಣಿ ರಾನಿಲ್ ವಿಕ್ರಮಸಿಂಘೆ ಗುರುವಾರ ಪ್ರಮಾಣ ವಚನ ಸ್ವೀಕರಿಸಿದರು. ಬುಧವಾರ ನಡೆದ ಚುನಾವಣೆಯಲ್ಲಿ ಅವರು ಅಧ್ಯಕ್ಷರಾಗಿ ಆಯ್ಕೆಯಾಗಿದ್ದರು.
ಆರ್ಥಿಕ ಬಿಟ್ಟಿನ ನಂತರ ಶ್ರೀಲಂಕಾದಲ್ಲಿ ರಾಜಕೀಯದಲ್ಲಿ ಭಾರೀ ಬದಲಾವಣೆ ನಡೆದಿತ್ತು. ಅಧ್ಯಕ್ಷರಾಗಿದ್ದ ಗೊಟಬಯ ರಾಜಪಕ್ಸ ಸಿಂಗಾಪುರಕ್ಕೆ ಪಲಾಯ ಮಾಡಿದ್ದರು. ಬಳಿಕ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.
ರಾಜಪಕ್ಸ ಅವರ ಬಹುಕಾಲದ ಮಿತ್ರರಾಗಿರುವ ರಾನಿಲ್ ವಿಕ್ರಮಸಿಂಘೆ ಗುರುವಾರ ಶ್ರೀಲಂಕಾದ 8ನೇ ಅಧ್ಯಕ್ಷರಾಗಿದ್ದು, ಶ್ರೀಲಂಕಾವನ್ನು ಸುವ್ಯವಸ್ಥಿತವಾಗಿ ಮುನ್ನಡೆಸುವ ಕಾರ್ಯ ನಿರ್ವಹಿಸಲಿದ್ದಾರೆ.

ಹಿರಿಯ ರಾಜಕಾರಣಿ ವಿಕ್ರಮಸಿಂಘೆ (73) ಅವರು ಸಂಸತ್ತಿನಲ್ಲಿ ಮುಖ್ಯ ನ್ಯಾಯಾಧೀಶರಾದ ಜಯಂತ್ ಜಯಸೂರ್ಯ ಸಮ್ಮುಖದಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಶ್ರೀಲಂಕಾವನ್ನು ಈಗಿರುವ ಆರ್ಥಿಕ ಬಿಕ್ಕಟ್ಟಿನಿಂದ ಹೊರತರುವ ಕಠಿಣ ಸವಾಲು ಹೊಸ ಅಧ್ಯಕ್ಷರ ಮುಂದಿದೆ.
ಶ್ರೀಲಂಕಾದಲ್ಲಿ ಆರ್ಥಿಕ ಬಿಟ್ಟಿನಿಂದ ಅಲ್ಲಿನ ಜನರು ಬೀದಿಗಿಳಿದು ಪ್ರತಿಭಟನೆ ನಡೆಸಿದ್ದರು. ಅಧ್ಯಕ್ಷ ಗೊಟಬಯ ರಾಜಪಕ್ಸ ಮನೆಗೆ ಮುತ್ತಿಗೆ ಹಾಕಿದ್ದರು. ಬಳಿಕ ದೇಶದ ರಾಜಕೀಯದಲ್ಲಿ ಭಾರೀ ಬದಲಾವಣೆ ಆಗಿದೆ.
ಬುಧವಾರ ಅಧ್ಯಕೀಯ ಚುನಾವಣೆ ನಡೆದಿದ್ದು, ಅದರಲ್ಲಿ ವಿಕ್ರಮ ಸಿಂಘೆ ಅವರು ಅಧಿಕ ಮತ ಗಳಿಸಿ ಆಯ್ಕೆಯಾಗಿದ್ದರು. ಕಳೆದ ಕೆಲವು ದಿನಗಳಲ್ಲಿ ಸಂಸತ್ತಿನ ಭದ್ರತಾ ವ್ಯವಹಾರಗಳಲ್ಲಿ ತಮ್ಮ ಕರ್ತವ್ಯವನ್ನು ನಿರ್ವಹಿಸಿದ ಮೂರು ಸಶಸ್ತ್ರ ಪಡೆಗಳು ಮತ್ತು ಪೊಲೀಸರಿಗೆ ವಿಕ್ರಮ ಸಿಂಘೆ ಅವರು ಬುಧವಾರ ಕೃತಜ್ಞತೆ ತಿಳಿಸಿದ್ದಾರೆ.
Recommended Video
ನೂತನ ಅಧ್ಯಕ್ಷ ವಿಕ್ರಮಸಿಂಘೆ ನೇತೃತ್ವದಲ್ಲಿ ಕಾರ್ಯನಿರ್ವಹಿಸಲು ಸುಮಾರು 25 ಸದಸ್ಯರ ಸಚಿವ ಸಂಪುಟ ತುರ್ತಾಗಿ ನೇಮಕಗೊಳ್ಳಲಿದೆ ಎಂದು ಅಲ್ಲಿನ ರಾಜಕೀಯ ಮೂಲಗಳು ತಿಳಿಸಿವೆ.
ಅವಧಿಗೂ ಮೊದಲೇ ಶ್ರೀಲಂಕಾದಲ್ಲಿ ಹೊಸ ಅಧ್ಯಕ್ಷರ ಆಯ್ಕೆ ನಡೆದಿದೆ. ನೂತನ ಅಧ್ಯಕ್ಷ ರಾನಿಲ್ ವಿಕ್ರಮಸಿಂಘೆ ಅಧಿಕಾರಾವಧಿ ನವೆಂಬರ್ 2024ರ ತನಕ ಇದೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications