ಶ್ರೀಲಂಕಾ ಚುನಾವಣೆ: ಮುಸ್ಲಿಂ ಮತದಾರರಿದ್ದ ಬಸ್ ಮೇಲೆ ಗುಂಡಿನ ದಾಳಿ
ಕೊಲಂಬೋ, ನವೆಂಬರ್ 16: ಉಗ್ರರ ದಾಳಿ ಹಾಗೂ ರಾಜಕೀಯ ಅಸ್ಥಿರತೆಯಿಂದ ಕಂಗೆಟ್ಟಿರುವ ನೆರೆಯ ದ್ವೀಪರಾಷ್ಟ್ರ ಶ್ರೀಲಂಕಾದಲ್ಲಿ ಶನಿವಾರ ಅಧ್ಯಕ್ಷೀಯ ಚುನಾವಣೆ ನಡೆಯುತ್ತಿದೆ. ಮತದಾನಕ್ಕಾಗಿ ತೆರಳುತ್ತಿದ್ದ ಅಲ್ಪಸಂಖ್ಯಾತ ಮುಸ್ಲಿಮ್ ಮತದಾರರಿದ್ದ ಬಸ್ಗಳ ಮೇಲೆ ಬಂದೂಕುಧಾರಿಗಳು ಗುಂಡಿನ ದಾಳಿ ನಡೆಸಿದ ಘಟನೆ ವರದಿಯಾಗಿದೆ.
ಬಂದೂಕುಧಾರಿಗಳು ನೂರಕ್ಕೂ ಅಧಿಕ ವಾಹನಗಳಿಗೆ ಬೆಂಗಾವಲಾಗಿ ತೆರಳುತ್ತಿದ್ದ ವಾಹನಗಳ ಮೇಲೆ ಗುಂಡಿನ ದಾಳಿ ನಡೆಸಿ ಬಸ್ಗಳ ಮೇಲೆ ಕಲ್ಲುತೂರಾಟ ನಡೆಸಿದರು. ಜತೆಗೆ ರಸ್ತೆಯಲ್ಲಿ ಟೈರ್ಗಳನ್ನು ಸುಟ್ಟು ರಸ್ತೆ ತಡೆ ನಡೆಸಿದರು. ಘಟನೆಯಲ್ಲಿ ಯಾವುದೇ ಸಾವು ನೋವಿನ ವರದಿಯಾಗಿಲ್ಲ.
35 ಅಭ್ಯರ್ಥಿಗಳು ಅಧ್ಯಕ್ಷ ಸ್ಥಾನಕ್ಕೆ ಪೈಪೋಟಿ ನಡೆಸುತ್ತಿದ್ದು, 15 ಮಿಲಿಯನ್ಗೂ ಅಧಿಕ ಮತದಾರರು ಒಬ್ಬರನ್ನು ಆಯ್ಕೆ ಮಾಡಲಿದ್ದಾರೆ. ಸೋಮವಾರದ ವೇಳೆಗೆ ಚುನಾವಣೆಯ ಫಲಿತಾಂಶ ಪ್ರಕಟವಾಗುವ ನಿರೀಕ್ಷೆಯಿದೆ.

ಕಣದಲ್ಲಿ 35 ಅಭ್ಯರ್ಥಿಗಳಿದ್ದರೂ, ಇಲ್ಲಿ ಆಡಳಿತಾರೂಢ ಯುಎನ್ಪಿ ನಾಯಕ ಸಜಿತ್ ಪ್ರೇಮದಾಸ ಮತ್ತು ಮಾಜಿ ರಕ್ಷಣಾ ಕಾರ್ಯದರ್ಶಿ, ವಿರೋಧಪಕ್ಷವಾದ ಶ್ರೀಲಂಕಾ ಪೊಡುಜನ ಪೆರಾಮುನಾದ (ಎಸ್ಪಿಪಿ) ಗೋಟಬಾಯ ರಾಜಪಕ್ಸ ಅವರ ನಡುವೆ ನೇರ ಹಣಾಹಣಿ ಇದೆ.
ಮಾಜಿ ಅಧ್ಯಕ್ಷ ಮಹಿಂದ ರಾಜಪಕ್ಸ ಅವರ ಸಹೋದರನಾದ ಗೋಟಬಾಯ ರಾಜಪಕ್ಸ ಎಲ್ಟಿಟಿಇ ವಿರುದ್ಧದ ಶ್ರೀಲಂಕಾ ಸೇನೆಯ ಹೋರಾಟದಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಹೀಗಾಗಿ ಅಲ್ಲಿನ ಬಹುಸಂಖ್ಯಾತ ಬೌದ್ಧ ಸಮುದಾಯದ ಬೆಂಬಲ ಅವರ ಕಡೆಗಿದೆ.
ಅವರ ಎದುರಾಳಿಯಾಗಿರುವ ಸಜಿತ್ ಪ್ರೇಮದಾಸ ಮಾಜಿ ಅಧ್ಯಕ್ಷ ರಣಸಿಂಘೆ ಪ್ರೇಮದಾಸ ಅವರ ಮಗ. ಈಗಿನ ಯುಎನ್ಪಿ ಸರ್ಕಾರದಲ್ಲಿ ಸಚಿವರಾಗಿದ್ದಾರೆ. ಶ್ರೀಲಂಕಾದ ತಮಿಳರನ್ನು ಪ್ರತಿನಿಧಿಸುವ ತಮಿಳ್ ನ್ಯಾಷನಲ್ ಅಲೈಯನ್ಸ್, ತಮ್ಮ ಬೆಂಬಲವನ್ನು ಪ್ರೇಮದಾಸ ಅವರಿಗೆ ನೀಡಿದೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications