ಶ್ರೀಲಂಕಾ ಸರಣಿ ಸ್ಫೋಟ ಹಿಂದಿರುವ ಸಂಘಟನೆಗೆ ತಮಿಳುನಾಡಿನ ಲಿಂಕ್?
ಚೆನ್ನೈ, ಏಪ್ರಿಲ್ 22: ಶ್ರೀಲಂಕಾದಲ್ಲಿ ಭಾನುವಾರದಂದು ಈಸ್ಟರ್ ಸಂಭ್ರಮಾಚರಣೆ ಸಂದರ್ಭದಲ್ಲಿ ಸಂಭವಿಸಿದ ಸರಣಿ ಬಾಂಬ್ ಸ್ಫೋಟದಲ್ಲಿ ಮೃತಪಟ್ಟವರ ಸಂಖ್ಯೆ ಏರಿಕೆಯಾಗುತ್ತಲೆ ಇದೆ. ಈ ನಡುವೆ ಈ ವಿಧ್ವಂಸಕ ಸಂಬಂಧ 7 ಮಂದಿ ಶಂಕಿತರನ್ನು ಬಂಧಿಸಲಾಗಿದೆ ಎಂದು ಶ್ರೀಲಂಕಾದ ರಕ್ಷಣಾ ಸಚಿವರು ತಿಳಿಸಿದ್ದಾರೆ. ಇದು ಯಾವ ಉಗ್ರ ಸಂಘಟನೆಯ ಕೃತ್ಯ ಎಂಬುದು ಇನ್ನು ಬಹಿರಂಗವಾಗಿಲ್ಲ. ಆದರೆ, ಸದ್ಯದ ಮಾಹಿತಿಯಂತೆ ತೌಹಿದ್ ಜಮಾತ್ ಸಂಘಟನೆಯ ಕೃತ್ಯ ಇರಬಹುದು ಎಂಬ ಶಂಕೆ ವ್ಯಕ್ತವಾಗಿದೆ.
ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ
ಇಸ್ಲಾಮಿಕ್ ಉಗ್ರ ಸಂಘಟನೆ ಐಎಸ್ಐಎಸ್ ಕೃತ್ಯದಂತೆ ತೋರುತ್ತಿದೆ. ತೌಹಿದ್ ಜಮಾತ್ ಸಂಘಟನೆ ಬಗ್ಗೆ ಹೆಚ್ಚಿನ ಸಂಶಯವಿದ್ದು, ತಮಿಳುನಾಡಿನಲ್ಲೂ ತನ್ನ ಅಸ್ತಿತ್ವವನ್ನು ಈ ಸಂಘಟನೆ ಹೊಂದಿದೆ ಎಂದು ತನಿಖಾ ಸಂಸ್ಥೆ ಮೂಲಗಳು ಹೇಳಿವೆ.
ಸದ್ಯ ಕೆಲವೆಡೆ ಕರ್ಫ್ಯೂ ಹಿಂಪಡೆಯಲಾಗಿದೆ. ಆದರೆ, ಎಲ್ಲೆಡೆ ಸೇನೆಯನ್ನು ನಿಯೋಜಿಸಲಾಗಿದ್ದು, ಕೊಲಂಬೋ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿಯೂ ಭದ್ರತೆಯನ್ನು ಬಿಗಿಗೊಳಿಸಲಾಗಿದೆ ಎಂದು ಮಿಲಿಟರಿ ವಕ್ತಾರರು ತಿಳಿಸಿದ್ದಾರೆ.

ಹತ್ತು ವರ್ಷಗಳ ಹಿಂದೆ ಲಿಬೆರೇಷನ್ ಟಗರ್ಸ್ ಆಫ್ ತಮಿಳ್ ಈಳಂ
ಹತ್ತು ವರ್ಷಗಳ ಹಿಂದೆ ಲಿಬೆರೇಷನ್ ಟಗರ್ಸ್ ಆಫ್ ತಮಿಳ್ ಈಳಂ(ಎಲ್ ಟಿಟಿಇ) ದಾಳಿ ನಡೆದಿದ್ದು ಬಿಟ್ಟರೆ, ಈ ರೀತಿ ದಾಳಿಯನ್ನು ದ್ವೀಪರಾಷ್ಟ್ರ ಕಂಡಿರಲಿಲ್ಲ. ಆದರೆ, ಸರಣಿ ಸ್ಫೋಟದಲ್ಲಿ ಬಳಸಲಾಗಿರುವ ಸ್ಫೋಟಕವಸ್ತುಗಳು ಹಾಗೂ ಸ್ಫೋಟ ಸಂಭವಿಸಿದ ರೀತಿ, ಚರ್ಚ್ ಗುರಿಯನ್ನಾಗಿಸಿರುವುದನ್ನು ಗಮನಿಸಿದರೆ ಇದು ಇಸ್ಲಾಮಿಕ್ ಸಂಘಟನೆ ಕೃತ್ಯ ಎಂದು ಅನುಮಾನ ವ್ಯಕ್ತವಾಗಿದೆ.

ವಹಾಬಿ ಜತೆ ಸಖ್ಯ ಹೊಂದಿರುವ ಶ್ರೀಲಂಕಾ ತೌಹೀದ್ ಜಮಾತ್
ವಹಾಬಿ ಜತೆ ಸಖ್ಯ ಹೊಂದಿರುವ ಶ್ರೀಲಂಕಾ ತೌಹೀದ್ ಜಮಾತ್ (ಎಸ್ಎಲ್ ಟಿಜೆ) ಈಗ ಶ್ರೀಲಂಕಾದ ಪೂರ್ವ ಪ್ರಾಂತ್ಯದಲ್ಲಿ ಸಕ್ರಿಯಾಗಿದ್ದು, ಶರಿಯಾರ್ ಕಾನೂನು, ಮಹಿಳೆಯರಿಗೆ ಬುರ್ಖಾ ಕಡ್ಡಾಯ, ಮೂಲಭೂತವಾದ ಪ್ರಸಾರ ಮಾಡಲು ಹೆಚ್ಚು ಮಸೀದಿ ನಿರ್ಮಾಣ ಹೀಗೆ ಅನೇಕ ಕಾರ್ಯಗಳಲ್ಲಿ ತೊಡಗಿಕೊಂಡಿವೆ.

22 ಮಿಲಿಯನ್ ಜನಸಂಖ್ಯೆಯಲ್ಲಿ 70% ಬೌದ್ಧ ಧರ್ಮಿಯರು
ಶ್ರೀಲಂಕಾದ 22 ಮಿಲಿಯನ್ ಜನಸಂಖ್ಯೆಯಲ್ಲಿ 70% ಬೌದ್ಧ ಧರ್ಮಿಯರು, 12.6%ರಷ್ಟು ಹಿಂದು, 9.7% ಮುಸ್ಲಿಮರು ಹಾಗೂ 7.6% ಕ್ರೈಸ್ತರಿದ್ದಾರೆ. ಇತ್ತೀಚೆಗೆ ಬಹುಸಂಖ್ಯಾತ ಬೌದ್ಧ ಧರ್ಮೀಯರು ಹಾಗೂ ಮುಸ್ಲಿಮರ ನಡುವೆ ಸಂಘರ್ಷ ಉಂಟಾಗಿತ್ತು. ಆಗ ಕೂಡಾ ಎಸ್ ಎಲ್ ಟಿ ಜೆ ಮೇಲೆ ಅನುಮಾನ ವ್ಯಕ್ತವಾಗಿತ್ತು.

ಭಾನುವಾರದಂದು ಕ್ರೈಸ್ತರ ಸಂಭ್ರಮ
ಆದರೆ, ಭಾನುವಾರದಂದು ಕ್ರೈಸ್ತರ ಸಂಭ್ರಮವನ್ನು ಹಾಳುಗೆಡವಲು ಯತ್ನಿಸಿದವರು ಸಣ್ಣ ಗುಂಪಾಗಿರಲು ಸಾಧ್ಯವಿಲ್ಲ. ದೊಡ್ಡ ಮಟ್ಟದ ಸಂಘಟನೆಯ ನೆರವು ಸಿಕ್ಕಿರಬಹುದು ಎಂದು ಅನುಮಾನಿಸಲಾಗಿದೆ. ಸದ್ಯ ತನಿಖೆ ಜಾರಿಯಲ್ಲಿದ್ದು, ಭಾರತ ಸರ್ಕಾರ ಕೂಡಾ ಎಲ್ಲಾ ರೀತಿ ನೆರವು ನೀಡಲು ಮುಂದಾಗಿದೆ.
-
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
Bengaluru Mumbai Vande Bharat: ಬೆಂಗಳೂರು - ಮುಂಬೈ ಹೊಸ ರೈಲು: ಮಹಾ ಸಿಎಂ ಮಹತ್ವದ ಟ್ವೀಟ್, ಯಾವಾಗ ಪ್ರಾರಂಭ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
ಎರಡು ಬಾರಿ ಕೆಲಸ ಕಳೆದುಕೊಂಡ ಯುವಕನಿಂದ ರೆಸ್ಟೋರೆಂಟ್ ಬ್ಯುಸಿನೆಸ್: ಈಗ ತಿಂಗಳಿಗೆ 1.3 ಕೋಟಿ ರೂ. ಆದಾಯ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
ಬ್ರೋ.. ಒಂದು ವಿಕೆಟ್ ಕಿತ್ತರೂ ನನ್ನ ಫೋಟೋ ಹಾಕಿಲ್ಲ ಯಾಕೆ?; ಆರ್ಸಿಬಿ ಮೆಂಟರ್ ಡಿಕೆಗೆ ಕೃನಾಲ್ ಪಾಂಡ್ಯ ಪ್ರಶ್ನೆ -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ -
Karnataka Rains: ರಾಜ್ಯಾದ್ಯಂತ ಏಪ್ರಿಲ್ 20ರ ತನಕ ಮಳೆ, 6 ಜಿಲ್ಲೆಗಳಿಗೆ ಉಷ್ಣ ಅಲೆ ಮುನ್ಸೂಚನೆ












Click it and Unblock the Notifications