ಶ್ರೀಲಂಕಾ: ಪ್ರಧಾನಿ ಮನೆಯ ವಿದ್ಯುತ್ ಸಂಪರ್ಕವನ್ನೇ ಕಡಿತಗೊಳಿಸಿದ ಅಧ್ಯಕ್ಷ
ಕೊಲಂಬೊ, ಅಕ್ಟೋಬರ್ 30: ಶ್ರೀಲಂಕಾದಲ್ಲಿ ಉಂಟಾಗಿರುವ ಸಾಂವಿಧಾನಿಕ ಬಿಕ್ಕಟ್ಟು ಇನ್ನಷ್ಟು ಹದಗೆಡುವ ಲಕ್ಷಣಗಳು ಕಾಣಿಸುತ್ತಿವೆ.
ದೇಶದ ಪ್ರಧಾನಿಯ ಅಧಿಕೃತ ನಿವಾಸ 'ಟೆಂಪಲ್ ಟ್ರೀಸ್'ನ ವಿದ್ಯುತ್ ಸಂಪರ್ಕವನ್ನು ಅಧ್ಯಕ್ಷ ಮೈತ್ರಿಪಾಲ ಸಿರಿಸೇನಾ ಅವರ ಆದೇಶದ ಮೇರೆಗೆ ಕಡಿತಗೊಳಿಸಲಾಗಿದೆ ಎಂದು ಟೆಲಿಗ್ರಾಫ್ ವರದಿ ಮಾಡಿದೆ.
ಟೆಂಪಲ್ ಟ್ರೀಸ್ ಅನ್ನು ಬಲವಂತವಾಗಿ ವಶಕ್ಕೆ ಪಡೆದುಕೊಳ್ಳಲು ನಡೆಸಿರುವ ಪ್ರಯತ್ನವಿದು ಎನ್ನಲಾಗಿದೆ. ಕಳೆದ ಶುಕ್ರವಾರ ಪ್ರಧಾನಿ ರನಿಲ್ ವಿಕ್ರಮ ಸಿಂಘೆ ಅವರನ್ನು ಹುದ್ದೆಯಿಂದ ಕಿತ್ತೊಗೆಯಲಾಗಿತ್ತು. ಈಗ ಅವರನ್ನು ಪ್ರಧಾನಿಯ ಅಧಿಕೃತ ನಿವಾಸದಿಂದ ತೆರವುಗೊಳಿಸುವ ಸಲುವಾಗಿ ಸಿರಿಸೇನಾ ಈ ಕ್ರಮ ತೆಗೆದುಕೊಂಡಿದ್ದಾರೆ.

2015ರಲ್ಲಿ ಸಿರಿಸೇನಾ ಮತ್ತು ವಿಕ್ರಮಸಿಂಘೆ ಜತೆಯಾಗಿ ಮೈತ್ರಿ ಮಾಡಿಕೊಂಡು ಮಹಿಂದಾ ರಾಜಪಕ್ಸೆ ಅವರನ್ನು ಅಧ್ಯಕ್ಷೀಯ ಚುನಾವಣೆಯಲ್ಲಿ ಸೋಲಿಸಿದ್ದರು. ವಿಕ್ರಮಸಿಂಘೆ ಪಕ್ಷಕ್ಕೆ ನೀಡಿದ್ದ ಬೆಂಬಲವನ್ನು ಹಿಂಪಡೆದುಕೊಂಡಿರುವ ಸಿರಿಸೇನಾ, ಅವರನ್ನು ಪ್ರಧಾನಿ ಸ್ಥಾನದಿಂದ ಕಿತ್ತೊಗೆದು, ಮಾಜಿ ಅಧ್ಯಕ್ಷ ಮಹಿಂದಾ ರಾಜಪಕ್ಸೆ ಅವರನ್ನು ಪ್ರಧಾನಿಯನ್ನಾಗಿ ನೇಮಿಸಿದ್ದಾರೆ.
ಆದರೆ, ಯುನೈಟೆಡ್ ನ್ಯಾಷನಲ್ ಪಾರ್ಟಿಯ (ಯುಎನ್ಪಿ) ನಾಯಕರಾಗಿರುವ ವಿಕ್ರಮಸಿಂಘೆ ಅವರ ಜತೆಯಾಗಿ ನಿಂತಿರುವ ಬೆಂಬಲಿಗರು, ಟೆಂಪಲ್ ಟ್ರೀಸ್ ನಿವಾಸಕ್ಕೆ ಜನರೇಟರ್ ತಂದು ವಿದ್ಯುತ್ ಪೂರೈಕೆ ವ್ಯವಸ್ಥೆ ಮಾಡಿದ್ದಾರೆ.
ಯುಎನ್ಪಿಯ ಅನೇಕ ಸಂಸದರು ಟೆಂಪಲ್ ಟ್ರೀಸ್ನಲ್ಲಿಯೇ ಮೊಕ್ಕಾಂ ಹೂಡಿದ್ದು, ತಮ್ಮ ಪದಚ್ಯುತ ಪ್ರಧಾನಿಯ ರಕ್ಷಣೆಗೆ ನಿಂತಿದ್ದಾರೆ.
ಅಲ್ಲದೆ, ವಿಕ್ರಮಸಿಂಘೆ ಅವರ ಭದ್ರತೆಗೆ ನಿಯೋಜಿಸಲಾಗಿದ್ದ ಎಸ್ಟಿಎಫ್ ಸಿಬ್ಬಂದಿಯ ಕಡಿತಕ್ಕೂ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಭದ್ರತಾ ಸಿಬ್ಬಂದಿಯ ಕಡಿತದಿಂದ ವಿಕ್ರಮಸಿಂಘೆ ಅವರ ಜೀವಕ್ಕೆ ಅಪಾಯ ಎದುರಾಗುವ ಸಾಧ್ಯತೆ ಇದೆ ಎಂದು ಯುಎನ್ಪಿ ನಾಯಕರು ಕಳವಳ ವ್ಯಕ್ತಪಡಿಸಿದ್ದಾರೆ.
ನಮ್ಮ ಸರ್ಕಾರ ಅಸ್ತಿತ್ವದಲ್ಲಿದ್ದಾಗ ಯಾವುದೇ ಸರ್ಕಾರಿ ಹುದ್ದೆಯಲ್ಲಿ ಇರದ ಮಾಜಿ ರಕ್ಷಣಾ ಕಾರ್ಯದರ್ಶಿ ಗೊಟಬಯಾ ರಾಜಪಕ್ಸ ಅವರಿಗೆ 70 ಎಸ್ಟಿಎಫ್ ಸಿಬ್ಬಂದಿಯ ರಕ್ಷಣೆ ನೀಡಲಾಗಿತ್ತು ಎಂದು ವಿಕ್ರಮಸಿಂಘೆ ಬೆಂಬಲಿಗರು ಹೇಳಿದ್ದಾರೆ.
ಸಂಸದೀಯ ಬಹುಮತ ಇಲ್ಲದೆಯೇ ಮಹಿಂದಾ ರಾಜಪಕ್ಸೆ ಅವರನ್ನು ಪ್ರಧಾನಿಯನ್ನಾಗಿ ನೇಮಿಸಿ ಸಿರಿಸೇನಾ ಆದೇಶ ಹೊರಡಿಸಿರುವುದರ ಬಗ್ಗೆ ನಾಗರಿಕ ಸಮಾಜದ ಸದಸ್ಯರು, ತಜ್ಞರು ಆತಂಕ ವ್ಯಕ್ತಪಡಿಸಿದ್ದಾರೆ. ಸರ್ಕಾರದ ನಡೆಗೆ ತೀವ್ರ ವಿರೋಧ ವ್ಯಕ್ತವಾಗಿದೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications