Breaking: ದಕ್ಷಿಣ ಕೊರಿಯಾದ ಸಿಯೋಲ್ನಲ್ಲಿ ಕಾಲ್ತುಳಿತಕ್ಕೆ 120 ಮಂದಿ ಸಾವು
ಸಿಯೋಲ್, ಅಕ್ಟೋಬರ್ 30: ದಕ್ಷಿಣ ಕೊರಿಯಾದ ರಾಜಧಾನಿ ಸಿಯೋಲ್ನ ಪ್ರಮುಖ ಮಾರುಕಟ್ಟೆಯಲ್ಲಿ ನಡೆದ ಕಾಲ್ತುಳಿತದಲ್ಲಿ ಕನಿಷ್ಠ 120 ಜನರು ಸಾವನ್ನಪ್ಪಿದ್ದು, 100ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಹ್ಯಾಲೋವೀನ್ ಹಬ್ಬಗಳಿಗೆ ಬೃಹತ್ ಜನಸಮೂಹವು ಸೇರಿದ ಸಂದರ್ಭದಲ್ಲಿ ಈ ದುರ್ಘಟನೆ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಈ ಕಿರಿದಾದ ಬೀದಿಗಳಲ್ಲಿ ಅವ್ಯವಸ್ಥೆಯ ನಡುವೆ ತೀವ್ರ ಹೃದಯಘಾತದಿಂದ ಕುಸಿದು ಬಿದ್ದ ಜನರನ್ನು ಪೊಲೀಸರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿಯು ರಕ್ಷಿಸುತ್ತಿರುವುದು ಕಂಡು ಬಂದಿದೆ. ಇದೇ ವೇಳೆ ನೂರಾರು ಅಂಗಡಿಗಳು ಮತ್ತು ಪಾರ್ಟಿ ಸ್ಥಳಗಳನ್ನು ಹೊಂದಿರುವ ಮೆಗಾಸಿಟಿಯ ಕೇಂದ್ರ ಜಿಲ್ಲೆ ಇಟಾವಾನ್ನಲ್ಲಿ ಶನಿವಾರ ರಾತ್ರಿ ಸುಮಾರು 1 ಲಕ್ಷ ಜನ ಸೇರಿದ್ದರು ಎಂದು ಸ್ಥಳೀಯ ಸುದ್ದಿ ವಾಹಿನಿಗಳು ತಿಳಿಸಿವೆ.
ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ನಿರ್ಬಂಧಗಳಿಂದಾಗಿ ಎರಡು ವರ್ಷ ಸ್ಥಗಿತಗೊಂಡಿದ್ದ ಆಚರಣೆಗಳು ಪುನಾರಂಭಗೊಂಡಿವೆ. ಮೊದಲ ಬಾರಿಗೆ ಆಚರಿಸುತ್ತಿರುವ ಹ್ಯಾಲೋವೀನ್ ಹಬ್ಬವು ಅಕ್ಟೋಬರ್ 31ರ ಪೂರ್ವದಲ್ಲೇ ಹೊಸ ಉತ್ಸಾಹವನ್ನು ನೀಡಿತ್ತು.

ಎದೆ ಒತ್ತುವ ಹೃದಯ ವಿದ್ರಾವಕ ಘಟನೆ:
ಸ್ಥಳೀಯ ಕಾಲಮಾನದ ಮಧ್ಯರಾತ್ರಿಯ ಮುನ್ನವೇ ಹತ್ತಾರು ಜನರು ಹೊಟೇಲ್ ಬಳಿ ಪ್ರಜ್ಞಾಹೀನರಾಗಿ ಬಿದ್ದಿದ್ದರು ಎಂದು ದ ಕೊರಿಯಾ ಹೆರಾಲ್ಡ್ ವರದಿ ಮಾಡಿದೆ. ರಾತ್ರಿ 11.30ರ ವೇಳೆಗೆ ಉಸಿರಾಟದ ತೊಂದರೆಗೆ ಸಂಬಂಧಿಸಿದಂತೆ 81 ವರದಿಗಳು ಬಂದಿವೆ ಎಂದು ಅಗ್ನಿಶಾಮಕ ಅಧಿಕಾರಿಗಳು ತಿಳಿಸಿದ್ದಾರೆ. ಸಾಮಾನ್ಯ ಜನರು ಸಹ ಕುಸಿದು ಬಿದ್ದ ಜನರ ಎದೆಯನ್ನು ಒತ್ತುವ ಮೂಲಕ ಪ್ರಾಥಮಿಕ ಚಿಕಿತ್ಸೆ ನೀಡುತ್ತಿರುವ ದೃಶ್ಯವು ಕಂಡು ಬಂದಿತು.
truly the scariest halloween of my life—30 down, 400 rescue workers deployed. please avoid itaewon and stay safe. #이태원사고 pic.twitter.com/PC1GBJt7qk
— Chloe Park 🦋 in Seoul (@chloepark) October 29, 2022
ಎರಡು ಗಂಟೆಗಳ ನಂತರ ಮೊದಲ ಸಾವಿನಬಗ್ಗೆ ಸುದ್ದಿಯಾಯಿತು. ಈ ಸಂಖ್ಯೆಯು ಆರಂಭದಲ್ಲಿ ಒಂಬತ್ತರಿಂದ 59ಕ್ಕೆ ಮತ್ತು ನಂತರ ಒಂದು ಗಂಟೆಯೊಳಗೆ 120ಕ್ಕೆ ಏರಿಕೆ ಆಯಿತು. ಗಾಯಗೊಂಡವರಲ್ಲಿ 20ರ ಹರೆಯದ ಅನೇಕ ಮಹಿಳೆಯರಿದ್ದು, 100ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.
ಅಗ್ನಿಶಾಮಕ ಇಲಾಖೆಯ ಅಧಿಕಾರಿಯೊಬ್ಬರು ಘಟನೆಯನ್ನು ಸುದ್ದಿ ಸಂಸ್ಥೆ ಎಎಫ್ಪಿಗೆ ದೃಢಪಡಿಸಿದರು, ಈ ಘಟನಾ ಸ್ಥಳಕ್ಕೆ 140 ಕ್ಕೂ ಹೆಚ್ಚು ಆಂಬ್ಯುಲೆನ್ಸ್ಗಳನ್ನು ರವಾನಿಸಲಾಗಿದೆ ಎಂದು ಹೇಳಿದರು.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications