ಶಾಲೆಯಲ್ಲಿ ಕಾಲ್ತುಳಿತ: 14 ಮಕ್ಕಳ ದಾರುಣ ಸಾವು
ನೈರೋಬಿ, ಫೆಬ್ರವರಿ 4: ಪ್ರಾಥಮಿಕ ಶಾಲೆಯೊಂದರಲ್ಲಿ ಕಾಲ್ತುಳಿತ ಉಂಟಾಗಿ ಕನಿಷ್ಠ 14 ಮಕ್ಕಳು ಮೃತಪಟ್ಟ ಹೃದಯ ವಿದ್ರಾವಕ ಘಟನೆ ಪಶ್ಚಿಮ ಕೀನ್ಯಾದಲ್ಲಿ ನಡೆದಿದೆ.
ಕೀನಾ ರಾಜಧಾನಿ ನೈರೋಬಿಯ ಆಗ್ನೇಯ ವಾಯವ್ಯ ಭಾಗದಲ್ಲಿರುವ ಕಾಕಮೆಗಾ ಪ್ರಾಥಮಿಕ ಶಾಲೆಯಲ್ಲಿ ಸೋಮವಾರ ಮಧ್ಯಾಹ್ನ ಈ ದುರಂತ ಸಂಭವಿಸಿದೆ. 3 ಗಂಟೆ ಸುಮಾರಿಗೆ ಮಕ್ಕಳು ಶಾಲೆಯಿಂದ ಮನೆಗೆ ಹೊರಡುವ ವೇಳೆ ಕಾಲ್ತುಳಿತ ಉಂಟಾಗಿದೆ. ಆದರೆ ಈ ಘಟನೆಗೆ ಕಾರಣ ತಿಳಿದುಬಂದಿಲ್ಲ.
ಕಾಲ್ತುಳಿತದಿಂದ ಕನಿಷ್ಠ 39 ಮಕ್ಕಳಿಗೆ ತೀವ್ರ ಗಾಯಗಳಾಗಿವೆ. ಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಪೊಲೀಸ್ ಮುಖ್ಯಸ್ಥ ಡೇವಿಡ್ ಕಬೆನಾ ತಿಳಿಸಿದ್ದಾರೆ.

ಶಾಲೆ ಮುಗಿಯುತ್ತಿದ್ದಂತೆಯೇ ವಿದ್ಯಾರ್ಥಿಗಳು ತರಗತಿಯಿಂದ ಕೆಳಕ್ಕಿಳಿಯಲು ಮೆಟ್ಟಿಲಿನಿತ್ತ ಒಟ್ಟಿಗೆ ಧಾವಿಸಿದ್ದರು. ಕಿರಿದಾಗಿದ್ದ ಮೆಟ್ಟಿಲು ಕುಸಿದು ಈ ದುರಂತ ಸಂಭವಿಸಿದೆ ಎಂದು ವರದಿಗಳು ಹೇಳಿವೆ. ಇನ್ನು ಕೆಲವು ಮಕ್ಕಳು ಗಾಬರಿಯಿಂದ ಓಡಿದ್ದರಿಂದ ಮೂರನೇ ಮಹಡಿಯಿಂದ ಕೂಡ ಕೆಳಕ್ಕೆ ಬಿದ್ದಿರುವುದು ವರದಿಯಾಗಿದೆ.
ನೈರೋಬಿಯ ಶಾಲೆಯೊಂದರಲ್ಲಿ ಕಳೆದ ವರ್ಷದ ಸೆಪ್ಟೆಂಬರ್ನಲ್ಲಿ ತರಗತಿ ಕಟ್ಟಡ ಕುಸಿದು ಎಂಟು ಮಕ್ಕಳು ಮೃತಪಟ್ಟು, 69 ಮಕ್ಕಳು ಗಾಯಗೊಂಡಿದ್ದರು.
ಈ ಘಟನೆ ಕೀನ್ಯಾದಲ್ಲಿನ ಶಾಲೆಗಳಲ್ಲಿ ಮಕ್ಕಳ ಸುರಕ್ಷತೆಯ ಕುರಿತು ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಪೊಲೀಸರು ಘಟನೆ ಕುರಿತು ತನಿಖೆ ಆರಂಭಿಸಿರುವುದಾಗಿ ತಿಳಿಸಿದ್ದಾರೆ.
-
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ












Click it and Unblock the Notifications