Myanmar Earthquake: ಥಾಯ್ಲ್ಯಾಂಡ್ ರಾಜಧಾನಿ ಬ್ಯಾಂಕಾಕ್ನಲ್ಲಿ ತುರ್ತು ಪರಿಸ್ಥಿತಿ ಘೋಷಣೆ
ಮನುಷ್ಯರು ಇಂದು ಮತ್ತೊಂದು ಭೀಕರ ಭೂಕಂಪನಕ್ಕೆ ಸಾಕ್ಷಿಯಾಗಿದ್ದಾರೆ ಮ್ಯಾನ್ಮಾರ್ ಹಾಗು ಥಾಯ್ಲೆಂಡ್ ದೇಶಗಳು ಭೀಕರ ಭೂಕಂಪನ ಕಂಡು ನಲುಗಿ ಹೋಗಿದ್ದು, ಭಾರಿ ದೊಡ್ಡದಾಗಿ ಅನಾಹುತ ಸಂಭವಿಸಿದೆ. ಲೆಕ್ಕಕ್ಕೆ ಸಿಗದಷ್ಟು ಕಟ್ಟಡಗಳು ಹಾನಿಗೀಡಾಗಿದ್ದು, ನೂರಾರು ಜನ ನಾಪತ್ತೆಯಾಗಿದ್ದಾರೆ. ಹಾಗೇ ಸಾವಿನ ಸಂಖ್ಯೆ ಕೂಡ ಏರಿಕೆ ಕಾಣುತ್ತಿದೆ. ಇದೇ ಸಮಯದಲ್ಲಿ ದಿಢೀರ್ ಥಾಯ್ಲೆಂಡ್ ರಾಜಧಾನಿಯಲ್ಲಿ ತುರ್ತು ಪರಿಸ್ಥಿತಿ ಘೋಷಣೆ ಮಾಡಲಾಗಿದೆ.
ಮ್ಯಾನ್ಮಾರ್ & ಥಾಯ್ಲೆಂಡ್ ದೇಶಗಳ ಪರಿಸ್ಥಿತಿ ಇಂದು ಬೆಳಗ್ಗೆ ಚನ್ನಾಗಿಯೇ ಇತ್ತು. ಜನರು ಕೂಡ ಸಾಮಾನ್ಯ ದಿನದಂತೆ ತಮ್ಮ ಚಟುವಟಿಕೆ ನಡೆಸುತ್ತಿದ್ದರು. ಆದರೆ ದಿಢೀರ್ ಏನಾಯ್ತೋ ಅಂತಾ ತಿಳಿಯದೆ ಜನರು ಕಟ್ಟಡಗಳನ್ನು ಬಿಟ್ಟು ಹೊರಗೆ ಓಡಿ ಬಂದಿದ್ದಾರೆ. ಹಾಗೇ ಇನ್ನೂ ಕೆಲವರು ರಸ್ತೆಯಲ್ಲಿ ತೆರಳುವ ಸಮಯದಲ್ಲಿ ಜೀವ ಉಳಿಸಿಕೊಳ್ಳಲು ಪರದಾಡಿದ್ದಾರೆ. ಹೀಗೆ ನೋಡ ನೋಡುತ್ತಲೇ ಭೀಕರ ಭೂಕಂಪನ ಎಲ್ಲವನ್ನೂ ಅಲ್ಲೋಲ ಕಲ್ಲೋಲ ಮಾಡಿ ಹಾಕಿದೆ. ಇಂದು ಮಧ್ಯಾಹ್ನ ಮ್ಯಾನ್ಮಾರ್ನಲ್ಲಿ 7.7 ತೀವ್ರತೆ ಪ್ರಬಲ ಭೂಕಂಪನ ಸಂಭವಿಸಿದೆ ಎಂಬ ಸತ್ಯ ಆ ನಂತರ ಜನರಿಗೆ ಗೊತ್ತಾಗಿದೆ.

ದಿಢೀರ್ ತುರ್ತು ಪರಿಸ್ಥಿತಿ ಘೋಷಣೆ
ಭೂಮಿ ಕಂಪಿಸಿದ ರೀತಿ ನೋಡಿ ಇಡೀ ಜಗತ್ತೇ ಬೆಚ್ಚಿಬಿದ್ದಿದ್ದು, ಮ್ಯಾನ್ಮಾರ್ & ಥಾಯ್ಲೆಂಡ್ ದೇಶಗಳ ಜನರು ಜೀವ ಕೈಯಲ್ಲಿ ಹಿಡಿದುಕೊಂಡು ಈಗ ಸಮಯ ಕಳೆಯುತ್ತಿದ್ದಾರೆ. ಸಾವಿನ ಸಂಖ್ಯೆ ಈಗಾಗಲೇ 100 ದಾಟಿದ್ದು, 350 ಜನರು ಮ್ಯಾನ್ಮಾರ್ ದೇಶ ಒಂದರಲ್ಲೇ ಜೀವವನ್ನು ಕಳೆದುಕೊಂಡಿದ್ದಾರೆ. ಮತ್ತೊಂದು ಕಡೆ ಬ್ಯಾಂಕಾಕ್ ಕೂಡ ಭೀಕರ ಭೂಕಂಪನ ಹಿನ್ನೆಲೆಯಲ್ಲಿ ನಲುಗಿದ್ದು, ತುರ್ತು ಪರಿಸ್ಥಿತಿ ಘೋಷಣೆ ಮಾಡಲಾಗಿದೆ. ಥಾಯ್ಲೆಂಡ್ ಸರ್ಕಾರ ಅಗತ್ಯವಾದ ಮುನ್ನೆಚ್ಚರಿಕೆ ಕ್ರಮಗಳನ್ನ ಕೈಗೊಂಡಿದೆ.
ಜೀವ ಉಳಿಸಿಕೊಳ್ಳಲು ಗಾಯಾಳುಗಳ ಪರದಾಟ
ಬ್ಯಾಂಕಾಕ್ ನಗರದಲ್ಲಿ ಕೂಡ ಭಾರಿ ದೊಡ್ಡ ಹಾನಿ ಭೂಕಂಪನ ಪರಿಣಾಮ ಉಂಟಾಗಿದೆ. ಹೀಗಿದ್ದಾಗ ಸಾಕಷ್ಟು ಗಾಯಾಳುಗಳು ಚಿಕಿತ್ಸೆ ಸಿಗದೆ ಪರದಾಡುತ್ತಿದ್ದು, ಅವರಿಗೆ ಟ್ರೀಟ್ಮೆಂಟ್ ಕೊಡುವ ಕೆಲಸ ಸಾಗಿದೆ. ಮತ್ತೊಂದು ಕಡೆ ಕುಸಿದು ಬಿದ್ದಿರುವ ಕಟ್ಟಡಗಳ ಕೆಳಗೆ ನೂರಾರು ಜನರು ಸಿಲುಕಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ಭಯ ಕಾಡುತ್ತಿದೆ. ಆಸ್ಪತ್ರೆಗಳಲ್ಲಿ ಇದೀಗ ಗಾಯಾಳುಗಳ ನರಳಾಟ ಕರುಳು ಹಿಂಡುವಂತಿದೆ.
ಈ ಎಲ್ಲಾ ಕಾರಣಕ್ಕೆ ಇದೀಗ ತುರ್ತು ಪರಿಸ್ಥಿತಿ ಘೋಷಣೆ ಮಾಡಲಾಗಿದ್ದು, ಕೈಮೀರಿದ ಪರಿಸ್ಥಿತಿ ನಿಯಂತ್ರಣಕ್ಕೆ ಬ್ಯಾಂಕಾಕ್ ಆಡಳಿತವು ಒದ್ದಾಡುತ್ತಿದೆ. ಅಂತಾರಾಷ್ಟ್ರೀಯ ಮಟ್ಟದಲ್ಲೂ ಈ ಸುದ್ದಿ ತಲ್ಲಣ ಎಬ್ಬಿಸಿದ್ದು, ಹಲವು ದೇಶಗಳು ಈಗಾಗಲೇ ತಮ್ಮ ತಮ್ಮ ಪ್ರಜೆಗಳಿಗೆ ಎಚ್ಚರಿಕೆಯ ಸಂದೇಶ ರವಾನಿಸಿವೆ. ಸುರಕ್ಷಿತವಾಗಿ ಇರುವಂತೆ ಸೂಚಿಸಲಾಗಿದ್ದು, ಲಕ್ಷಾಂತರ ಪ್ರವಾಸಿಗರು ಪರದಾಡುತ್ತಿದ್ದಾರೆ.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications