STOP ADANI: ಗಣಿಧಣಿ ವಿರುದ್ಧ ಆಸ್ಟ್ರೇಲಿಯಾದಲ್ಲಿ ಭಾರೀ ಪ್ರತಿಭಟನೆ
ಸಿಡ್ನಿ, ಅಕ್ಟೋಬರ್ 8: ಆಸ್ಟ್ರೇಲಿಯಾದಲ್ಲಿ ಅತೀ ದೊಡ್ಡ ಕಾರ್ಮೈಕಲ್ ಕಲ್ಲಿದ್ದಲು ಗಣಿ ಆರಂಭಿಸಲು ಹೊರಟ ಭಾರತದ ಉದ್ಯಮಿ ಗೌತಮ್ ಅದಾನಿಗೆ ಭಾರೀ ಹಿನ್ನಡೆಯಾಗಿದೆ.
ಗಣಿಗಾರಿಕೆ ಆರಂಭಿಸುವುದರಿಂದ ಪರಿಸರದ ಮೇಲೆ ತೀವ್ರತರದ ಪರಿಣಾಮ ಉಂಟಾಗಲಿದೆ ಎಂದು ಅಪಸ್ವರ ಎತ್ತಿರುವ ಆಸ್ಟ್ರೇಲಿಯಾದ ಪರಿಸರವಾದಿಗಳು ಮತ್ತು ಜನರು ಶನಿವಾರ 'STOP ADANI' (ಸ್ಟಾಪ್ ಅದಾನಿ) ಹೆಸರಿನಲ್ಲಿ ಬೃಹತ್ ಪ್ರತಿಭಟನೆ ನಡೆಸಿದ್ದಾರೆ.
ಪಾರ್ಕ್, ಬೀಚ್ ಗಳಲ್ಲಿ 'STOP ADANI' ಎಂಬ ಪ್ಲೇಕಾರ್ಡ್ ಗಳು, ಮಾನವ ಸರಪಳಿಗಳನ್ನು ರಚಿಸಿ ಆಸ್ಟ್ರೇಲಿಯಾದ ಜನರು ವಿನೂತನ ಪ್ರತಿಭಟನೆಗೆ ಇಳಿದಿದ್ದು ಜಗತ್ತಿನ ಗಮನ ಸೆಳೆದಿದೆ.

ಕ್ವೀನ್ಸ್ ಲ್ಯಾಂಡ್ ನಲ್ಲಿ ಗಣಿಗಾರಿಕೆ ಆರಂಭಿಸುವುದರಿಂದ ಜಾಗತಿಕ ತಾಪಮಾನ ಏರಿಕೆಯಾಗುವುದಲ್ಲದೆ ಗ್ರೇಟ್ ಬ್ಯಾರಿಯರ್ ರೀಫ್ (ಹವಳದ ದಿಬ್ಬಗಳು)ಗೆ ಹಾನಿಯಾಗಲಿದೆ ಎಂದು ಪರಿಸರವಾದಿಗಳು ಪ್ರತಿಭಟನೆಗೆ ಇಳಿದಿದ್ದಾರೆ.
ಒಟ್ಟು ಶನಿವಾರ 45 ಪ್ರತಿಭನೆಗಳನ್ನು ನಡೆಸಲಾಗಿದ್ದು ಸಿಡ್ನಿಯ ಬಿಂದಿ ಬೀಚ್ ನಲ್ಲಿ ಜನರು 'STOP ADANI' ಆಕಾರದಲ್ಲಿ ನಿಂತು ಪ್ರತಿಭಟನೆಯ ಬಸಿ ಮುಟ್ಟಿಸಿದ್ದಾರೆ. ಅದಾನಿ ಗಣಿಯನ್ನು ಅರ್ಧಕರ್ಧ ಆಸ್ಟ್ರೇಲಿಯಾದ ಜನರು ವಿರೋಧಿಸಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

ಒಂದೆಡೆ ಪ್ರತಿಭಟನೆ ನಡೆಯುತ್ತಿದ್ದರೆ ಇನ್ನೊಂದೆಡೆ ಅದಾನಿ 26,000 ಕೋಟಿ ರೂ.ಗಳ ಯೋಜನೆಯಿಂದ ಉದ್ಯೋಗ ಸೃಷ್ಠಿಯಾಗುತ್ತದೆ. ಟ್ಯಾಕ್ಸ್ ರೂಪದಲ್ಲಿ ಸರಕಾರದ ಬೊಕ್ಕಸಕ್ಕೆ ಹಣ ಬಂದು ಬೀಳುತ್ತದೆ. ಭಾರತದ ಗ್ರಾಮೀಣ ಭಾಗಕ್ಕೆ ವಿದ್ಯುತ್ ದೊರೆಯುತ್ತದೆ ಎಂದು ಭರಪೂರ ಭರವಸೆಗಳನ್ನು ನೀಡಿದ್ದಾರೆ.
-
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Banana Price: ತಮಿಳುನಾಡು ಬಿಸಿಗಾಳಿ ಎಫೆಕ್ಟ್ಗೆ ಕುಸಿದ ಬಾಳೆಹಣ್ಣು ಧಾರಣೆ: ಬೆಂಗಳೂರಿನಲ್ಲಿ ಕೆ.ಜಿಗೆ 7 ರೂಪಾಯಿ -
Summer Specail Train: ಮೈಸೂರಿನಿಂದ ಇಲ್ಲಿಗೆ ವಿಶೇಷ ಎಕ್ಸ್ಪ್ರೆಸ್ ರೈಲು, 3 ರಾಜ್ಯಗಳಿಗೆ ಅನುಕೂಲ -
April 12 Horoscope: 12 ರಾಶಿಗಳಿಗೆ ಇಂದು ಹಣ-ಪ್ರೇಮದಲ್ಲಿ ಅದೃಷ್ಟ ಯಾರಿಗೆ? ಸಂಪೂರ್ಣ ವಿವರ -
IPL 2026: ಗಿಲ್ ಮತ್ತು ಬಟ್ಲರ್ ಸ್ಫೋಟಕ ಬ್ಯಾಟಿಂಗ್, ಎಲ್ಎಸ್ಜಿ ಮಣಿಸಿದ ಗುಜರಾತ್ ಟೈಟಾನ್ಸ್ -
Asha Bhosle: ಭಾರತೀಯ ಸಿನಿಮಾ ರಂಗದ ಖ್ಯಾತ ಗಾಯಕಿ ಆಶಾ ಭೋಸ್ಲೆ ಇನ್ನಿಲ್ಲ, ಸಂಗೀತ ರಾಣಿ ಎಂದೇ ಖ್ಯಾತಿ -
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ -
Vijay: ನಟ, ರಾಜಕಾರಣಿ ವಿಜಯ್ ಮಹತ್ವದ ಟ್ವೀಟ್ - ಅಪ್ರಬುದ್ಧ ರಾಜಕಾರಣಿ ಎಂದ ಡಿ.ಕೆ ಶಿವಕುಮಾರ್ Tamil Nadu Assembly Election -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್ -
Transfer: ಕರ್ನಾಟಕ ಶಿಕ್ಷಕರಿಗೆ ಸಿಹಿ ಸುದ್ದಿ: ವರ್ಗಾವಣೆ ನಿಯಮಗಳಲ್ಲಿ ಮಹತ್ವ ಬದಲಾವಣೆ, ಯಾರು ಅರ್ಹರು?












Click it and Unblock the Notifications