Earthquake: ಅಫ್ಘಾನಿಸ್ತಾನ ಹಾಗೂ ಚೀನಾದಲ್ಲಿ ಪ್ರಬಲ ಭೂಕಂಪ
Earthquake: ಭಾರತದ ನೆರೆಹೊರೆಯ ರಾಷ್ಟ್ರಗಳಾದ ಅಫ್ಘಾನಿಸ್ತಾನ ಹಾಗೂ ಚೀನಾದಲ್ಲಿ ಇಂದು (ಮೇ 16) ಪ್ರಬಲ ಭೂಕಂಪ ಸಂಭವಿಸಿದೆ. ಭೂಕಂಪನಕ್ಕೆ ಜನರು ತತ್ತರಿಸಿ ಹೋಗಿದ್ದು, ದಿಕ್ಕಪಾಲಾಗಿ ಓಡಿ ಹೋಗಿರುವ ಘಟನೆ ನಡೆದಿದೆ. ಆದರೆ, ಸದ್ಯ ಯಾವುದೇ ಪ್ರಾಣಹಾನಿ ಆಗಿಲ್ಲ ಎಂದು ತಿಳಿದುಬಂದಿದೆ.
ಚೀನಾದ ಬೌಷಾನ್ ಪ್ರದೇಶದಲ್ಲಿ ಶುಕ್ರವಾರ ಮುಂಜಾನೆ 6.30ರ ಸುಮಾರಿಗೆ ಪ್ರಬಲ ಭೂಕಂಪ ಸಂಭವಿಸಿದೆ. ರಿಕ್ಟರ್ ಮಾಪಕದಲ್ಲಿ 4.6 ರಷ್ಟು ಕಂಪನ ದಾಖಲಾಗಿದೆ. ಭೂಕಂಪದ ಕೇಂದ್ರ ಬಿಂದು ಭೂಮಿಯಿಂದ 10 ಕಿಲೋ ಮೀಟರ್ ಆಳದಲ್ಲಿತ್ತು ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಮಾಪನ ಕೇಂದ್ರ ತಿಳಿಸಿದೆ.

ಮತ್ತೊಂದೆಡೆ ಆಫ್ಘಾನಿಸ್ತಾನದಲ್ಲಿಯೂ ಗುರುವಾರ ಮಧ್ಯರಾತ್ರಿ 12.47ರ ವೇಳೆಗೆ ಲಘು ಭೂಕಂಪ ಸಂಭವಿಸಿದೆ. ಇಲ್ಲಿಯೂ ಯಾವುದೇ ಸಾವು, ನೋವುಗಳು, ಆಸ್ತಿಗಳು ಹಾನಿಯಾಗಿಲ್ಲ ಎನ್ನುವ ಮಾಹಿತಿ ಲಭ್ಯವಾಗಿದೆ. ಆದರೆ, ಭಾರತದ ಅಕ್ಕಪಕ್ಕದ ದೇಶಗಳಿಗೆ ಭೂಕಂಪದ ಆತಂಕ ಶುರುವಾಗಿದೆ. ಈಗಾಗಲೇ ಮ್ಯಾನ್ಮಾರ್ ಮತ್ತು ಥೈಲ್ಯಾಂಡ್ ದೇಶಗಳು ಪ್ರಕೃತಿ ವಿಕೋಪದ ಹೊಡೆತಕ್ಕೆ ಅಕ್ಷರಸಃ ನಲುಗಿಹೋಗಿವೆ.
ಜಾಗತಿಕ ಮಟ್ಟದಲ್ಲಿ ಜನವರಿಯಿಂದ ಭಾರತ ಸೇರಿದಂತೆ ಹಲವು ದೇಶಗಳಲ್ಲಿ ಭೂಕಂಪನದ ಅನುಭವವಾಗಿದೆ. ಭಾರತದ ದೆಹಲಿ, ಬಿಹಾರ, ಪಶ್ಚಿಮ ಬಂಗಾಳ ಮತ್ತು ಅಸ್ಸಾಂ ರಾಜ್ಯಗಳಲ್ಲಿ ಭೂಕಂಪನದ ಅನುಭವ ಆಗಿದೆ.
ಅಷ್ಟೇ ಅಲ್ಲದೆ ಏಷ್ಯಾ, ಅಮೆರಿಕ ಮತ್ತು ಇತರ ಖಂಡಗಳ ವಿವಿಧ ದೇಶಗಳಲ್ಲಿಯೂ ಭೂಕಂಪಗಳು ಸಂಭವಿಸಿವೆ ಮತ್ತು ಈಗ ಮ್ಯಾನ್ಮಾರ್ ಸೇರಿದಂತೆ ಭಾರತದಲ್ಲಿ ಮತ್ತೆ ಭೂಕಂಪನದ ಅನುಭವವಾಗಿದೆ. ಆದ್ದರಿಂದ ಭೂಕಂಪದ ಬಗ್ಗೆ ಭಾರೀ ಚರ್ಚೆಯಾಗುತ್ತಿದ್ದು, ಬಾಬಾ ವೆಂಗಾ ಅವರ ಭವಿಷ್ಯವಾಣಿ ನಿಜವಾಗುತ್ತಿದೆ ಎಂದು ಹಲವರರಲ್ಲಿ ಆತಂಕ ಶುರುವಾಗಿದೆ.
ಡಿಸೆಂಬರ್ 26, 2004ರಂದು ಹಿಂದೂ ಮಹಾಸಾಗರದಲ್ಲಿ ಸಂಭವಿಸಿದ ಭೂಕಂಪವು ಭಾರಿ ಸುನಾಮಿ ಅಲೆಗಳನ್ನು ಸೃಷ್ಟಿಸಿತು ಮತ್ತು ಭಾರತ ಸೇರಿದಂತೆ ಹಲವು ದೇಶಗಳಲ್ಲಿ 200,000ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದರು. ಈ ಭೂಕಂಪದ ಪ್ರಮಾಣವು ರಿಕ್ಟರ್ ಮಾಪಕದಲ್ಲಿ 9.2 ಮತ್ತು 9.3 ರ ನಡುವೆ ಇತ್ತು ಮತ್ತು ಇದನ್ನು 21ನೇ ಶತಮಾನದ ಅತ್ಯಂತ ವಿನಾಶಕಾರಿ ಭೂಕಂಪವೆಂದು ಪರಿಗಣಿಸಲಾಗಿದೆ.
-
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
ಡಿವೋರ್ಸ್ವರೆಗೆ ಪತಿಯ ನಿವಾಸದಲ್ಲೇ ವಾಸ್ತವ್ಯಕ್ಕೆ ಅವಕಾಶ ಕಲ್ಪಿಸಿ: ನಟ ವಿಜಯ್ ಪತ್ನಿ ಕೋರ್ಟ್ಗೆ ಮನವಿ -
Yash: ಪತ್ನಿ ರಾಧಿಕಾ ಪಂಡಿತ್ ಹುಟ್ಟುಹಬ್ಬಕ್ಕೆ ಹೊಸ ಲುಕ್ನಲ್ಲಿ ಯಶ್ ಪ್ರತ್ಯಕ್ಷ -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
ಟಿ20 ವಿಶ್ವಕಪ್ 2026 ಫೈನಲ್ ನಂತರ ಎಲ್ಲಾ ಮಾದರಿಯ ಕ್ರಿಕೆಟ್ಗೆ ಸೂರ್ಯಕುಮಾರ್ ಯಾದವ್ ನಿವೃತ್ತಿ ಘೋಷಣೆ ವದಂತಿ -
Vijay Divorce: ಡಿವೋರ್ಸ್ ವದಂತಿ ನಡುವೆಯೇ ನಟಿ ತ್ರಿಶಾ ಜೊತೆ ಕಾಣಿಸಿಕೊಂಡ ದಳಪತಿ ವಿಜಯ್; ವಿಡಿಯೋ ವೈರಲ್ -
UPSC Results: ಯಾದಗಿರಿ ಜಿಲ್ಲೆ ಒಂದರಲ್ಲೇ 4 ಮಂದಿ ಯುಪಿಎಸ್ಸಿ ಪಾಸ್, ಯಾರವರು? ಹಿನ್ನೆಲೆ ಏನು -
Karnataka Weather: ಕಲಬುರಗಿಯಲ್ಲಿ 39 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ ದಾಖಲು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಬಿಸಿಲ ಬೇಗೆ -
ದುಬೈ ವಿಮಾನ ನಿಲ್ದಾಣಕ್ಕೆ ನುಗ್ಗಿದ ಡ್ರೋನ್, ಎಲ್ಲಾ ವಿಮಾನ ಹಾರಾಟ ದಿಢೀರ್ ಸ್ಥಗಿತ | Operation Roaring Lion -
LPG Price Hike: ಗೃಹಬಳಕೆ ಎಲ್ಪಿಜಿ ಸಿಲಿಂಡರ್ ಬೆಲೆ 60 ರೂಪಾಯಿ ಏರಿಕೆ, ವಾಣಿಜ್ಯ ಸಿಲಿಂಡರ್ ದರ 115 ರೂಪಾಯಿ ಹೆಚ್ಚಳ -
SWR: ಬೆಂಗಳೂರಿನಿಂದ ಇಲ್ಲಿಗೆ ಮಾ.10ರಿಂದ ವಿಶೇಷ ರೈಲುಗಳ ಸಂಚಾರ, ವೇಳಾಪಟ್ಟಿ ಹೀಗಿದೆ












Click it and Unblock the Notifications