Earthquake: ತೈವಾನ್ನಲ್ಲಿ ಮತ್ತೆ ಪ್ರಬಲ ಭೂಕಂಪನ: ಅಲುಗಾಡಿದ ಕಟ್ಟಡಗಳು- ಬೆಚ್ಚಿಬಿದ್ದ ಜನ!
ತೈವಾನ್ನಲ್ಲಿ ಪ್ರಬಲ ಭೂಕಂಪನ ಸಂಭವಿಸಿದ್ದು ಕಟ್ಟಡಗಳು ಅಲುಗಾಡಿದ ಅನುಭವವಾಗಿದೆ. ಇದರಿಂದ ಜನ ಆತಂಕದಿಂದ ಮನೆ ಬಿಟ್ಟು ಹೊರ ಓಡಿ ಬಂದಿದ್ದಾರೆ. ಇಂದು ಬೆಳಗ್ಗೆ 6.3 ತೀವ್ರತೆಯಲ್ಲಿ ಭೂಮಿ ಕಂಪಿಸಿದೆ. ಇದರಿಂದಾಗಿ ತೈವಾನ್ನಾದ್ಯಂತ ಆತಂಕದ ವಾತಾವರಣ ಮನೆ ಮಾಡಿದೆ.
ತೈವಾನ್ನ ಪೂರ್ವ ನಗರವಾದ ಹುವಾಲಿಯನ್ನಿಂದ 34 ಕಿಮೀ ದೂರದಲ್ಲಿ ಪ್ರಬಲ ಭೂಕಂಪ ಸಂಭವಿಸಿದೆ. ಈ ಬಗ್ಗೆ ತೈವಾನ್ನ ಭೂಕಂಪನ ಮೇಲ್ವಿಚಾರಣಾ ಸಂಸ್ಥೆ ದೃಢಪಡಿಸಿದೆ. ಭೂಕಂಪದ ತೀವ್ರತೆಗೆ ರಾಜಧಾನಿ ತೈಪೆಯಲ್ಲಿ ಕಟ್ಟಡಗಳು ಅಲುಗಾಡಿವೆ. ಈ ಭೂಕಂಪನ 9.7ಕಿಮೀ ಆಳದಲ್ಲಿ ಸಂಭವಿಸಿದ್ದು ತಕ್ಷಣಕ್ಕೆ ಯಾವುದೇ ಹಾನಿಯಾದ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ. ತೈವಾನ್ ಆಗಾಗ ಭೂಕಂಪನಗಳಿಗೆ ಒಳಗಾಗುವ ಪ್ರದೇಶ. ಆಗಾಗ ಇಲ್ಲಿ ಭೂಮಿ ಕಂಪಿಸುತ್ತಲೇ ಇರುತ್ತದೆ.

ಇದೇ ವರ್ಷ (2024) ಏಪ್ರಿಲ್ ಆರಂಭದಲ್ಲಿ ತೈವಾನ್ನಲ್ಲಿ ಪ್ರಬಲ ಭೂಕಂಪ ಸಂಭವಿಸಿತ್ತು. ಇದರಲ್ಲಿ ಒಂಬತ್ತು ಮಂದಿ ಮೃತಪಟ್ಟು 900ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು. ಈ ಸಮಯದಲ್ಲಿ ಹಲವು ಕಟ್ಟಡಗಳು ಹಾನಿಗೊಳಗಾಗಿವೆ. ಈ ಸಮಯದಲ್ಲಿ 7.2 ತೀವ್ರತೆಯಲ್ಲಿ ಭೂಕಂಪನವಾಗಿತ್ತು.
ಕಂಪನದ ಕೇಂದ್ರ ಬಿಂದು ತೈವಾನ್ನ ಪೂರ್ವ ಕರಾವಳಿಯಲ್ಲಿರುವ ಹುವಾಲಿಯನ್ನಿಂದ ಸುಮಾರು 18 ಕಿಮೀ ದೂರದಲ್ಲಿ ಮತ್ತು ಸುಮಾರು 35 ಕಿಮೀ ಆಳದಲ್ಲಿ ಇತ್ತು. ಈ ಸಂದರ್ಭದಲ್ಲಿ ಭಾರೀ ಪ್ರಮಾಣದ ಹಾನಿ ಉಂಟಾಗಿತ್ತು. ಭೂಕಂಪನದಿಂದ 64 ಜನ ಕಲ್ಲಿದ್ದಲು ಗಣಿಯಲ್ಲಿ ಸಿಲುಕಿದ್ದರು. 24 ಕಡೆ ಭೂಕುಸಿತ ಸಂಭವಿಸಿತ್ತು. 35 ರಸ್ತೆಗಳಲ್ಲಿ ಭಾರೀ ದೊಡ್ಡ ಬಿರುಕು ಕಾಣಿಸಿಕೊಂಡಿತ್ತು. ಹಲವೆಡೆ ಸೇತುವೆ ಸುರಂಗಗಳಿಗೆ ಹಾನಿ ಉಂಟಾಗಿತ್ತು.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications