ಕತಾರ್ ಐಸಿಬಿಎಫ್ ಸದಸ್ಯರಾಗಿ ಕನ್ನಡಿಗ ಸುಬ್ರಹ್ಮಣ್ಯ ಹೆಬ್ಬಾಗಿಲು
ಕತಾರ್, ಜುಲೈ 20 : ಕತಾರ್ ಇಂಡಿಯನ್ ಕಮ್ಯುನಿಟಿ ಬೆನ್ವೊಲೆಂಟ್ ಫೋರಂ (ಐ.ಸಿ.ಬಿ.ಎಫ್) ಸದಸ್ಯರಾಗಿ, ಕತಾರ್ನಲ್ಲಿ ವಾಸಿಸಿರುವ ಬೈಂದೂರು ಮೂಲದ ಸುಬ್ರಹ್ಮಣ್ಯ ಹೆಬ್ಬಾಗಿಲು ಅವರು ಆಯ್ಕೆಯಾಗಿದ್ದಾರೆ.
ಬೈಂದೂರು ತಗ್ಗರ್ಸೆಯ ಗುರುದತ್ತ ಶೇರುಗಾರ್ ಹಾಗೂ ಮೂಕಾಂಬು ಎನ್ನುವ ರೈತ ದಂಪತಿಗಳ ಪುತ್ರರಾಗಿರುವ ಇವರದ್ದು ಬಹಮುಖ ವ್ಯಕ್ತಿತ್ವ. ಮಯ್ಯಾಡಿ ಧ.ಮ.ಹಿ. ಪ್ರಾಥಮಿಕ ಶಾಲೆಯಲ್ಲಿ ಪ್ರಾಥಮಿಕ ಶಿಕ್ಷಣ, ದಾವಣಗೆರೆ ಬಾಪೂಜಿ ಫ್ರೌಢಶಾಲೆಯಲ್ಲಿ ಫ್ರೌಢಶಿಕ್ಷಣ ಬಳಿಕ ಸಿವಿಲ್ ಇಂಜಿನಿಯರಿಂಗ್ ಪದವಿ ಮುಗಿಸಿ ರಾಷ್ಟ್ರೀಯ ಹೆದ್ದಾರಿ 8ರಲ್ಲಿ ಮೇಲುಸ್ತುವಾರಿ ಅಭಿಯಂತರಾಗಿ ಸೇವೆ ಸಲ್ಲಿಸಿ ಬಳಿಕ ಕತಾರ್ನ ಗಲ್ಪಾರ್ ಆಲ್ ಮಿಸ್ನಾದ್ ಕಂಪೆನಿಯಲ್ಲಿ ಅಭಿಯಂತರಾಗಿ ಸೇವೆ ಸಲ್ಲಿಸುತ್ತಿದ್ದಾರೆ.
ಕತಾರ್ ಸೇರಿದಂತೆ ಜಾಗತಿಕ ಮಟ್ಟದ ಹಲವಾರು ಸಂಘ ಸಂಸ್ಥೆಗಳಲ್ಲಿ ಗುರುತಿಸಿಕೊಂಡಿರುವ ಇವರು ಕರ್ನಾಟಕ ಸಂಘ ಕತಾರ್ ಉಪಾಧ್ಯಕ್ಷರಾಗಿ ಹಾಗೂ ಖಜಾಂಚಿಯಾಗಿ, ತುಳುಕೂಟ, ಭಾರತೀಯ ಸಾಂಸ್ಕ್ರತಿಕ ಕೇಂದ್ರ, ಕತಾರ್ ಕರ್ನಾಟಕ ಪ್ರೆಂಡ್ಸ್ನ ಸದಸ್ಯರಾಗಿದ್ದಾರೆ.

ನಾಟಕ, ಸಾಂಸ್ಕ್ರತಿಕ ಕಾರ್ಯಕ್ರಮ, ಶೈಕ್ಷಣಿಕ ಹಾಗೂ ಮನೋರಂಜನಾ ಕಾರ್ಯಕ್ರಮದ ಆಯೋಜನೆ ವಿವಿಧ ಸಂಘ ಸಂಸ್ಥೆಗಳ ಸಮನ್ವಯತೆಯೊಂದಿಗೆ ಕಾರ್ಯಕ್ರಮ ಪ್ರಸ್ತುತಿ, ಕತಾರ್ ಚಲನಚಿತ್ರೋತ್ಸವ ಸೇರಿದಂತೆ ವಿವಿಧ ಗಣ್ಯರ ಕಾರ್ಯಕ್ರಮದ ಪ್ರಮುಖ ಉಸ್ತುವಾರಿ ನಡೆಸಿದ್ದಾರೆ.
ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ, ಅಂತಾರಾಷ್ಟ್ರೀಯ ಆರ್ಯಭಟ ಪ್ರಶಸ್ತಿ ಇವರ ಸಾಧನೆಗೆ ಸಂದ ಗೌರವವಾಗಿದೆ. ಗ್ರಾಮೀಣ ಭಾಗದಲ್ಲಿ ಜನಿಸಿ ಕತಾರ್ ದೇಶದಲ್ಲಿ ಮಹತ್ವದ ಹುದ್ದೆ ಅಲಂಕರಿಸಿದ ಸುಬ್ರಹ್ಮಣ್ಯ ಹೆಬ್ಬಾಗಿಲು ಬೈಂದೂರಿನವರು ಎನ್ನುವುದು ನಮ್ಮ ಹೆಮ್ಮೆ.
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ












Click it and Unblock the Notifications