ಗಂಡಾಗಿ ಬದಲಾಗಲಿರುವ ಪಶ್ಚಿಮ ಬಂಗಾಳ ಮಾಜಿ ಸಿಎಂ ಪುತ್ರಿ: ಶಸ್ತ್ರಚಿಕಿತ್ಸೆಗೆ ಒಳಗಾಗಲು ನಿರ್ಧಾರ
ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಬುದ್ಧದೇವ್ ಭಟ್ಟಾಚಾರ್ಯ ಅವರ ಪುತ್ರಿ ಸುಚೇತನಾ ಭಟ್ಟಾಚಾರ್ಯ ಅವರು ಪುರುಷನಾಗಲು ಲಿಂಗ ಬದಲಾವಣೆ ಶಸ್ತ್ರಚಿಕಿತ್ಸೆಗೆ ಒಳಗಾಗಲು ಯೋಜಿಸುತ್ತಿರುವುದಾಗಿ ವರದಿಯಾಗಿದೆ.
ಇಂಡಿಯಾ ಟುಡೇ ವರದಿ ಮಾಡಿದ್ದು, ಸುಚೇತನಾ ತನ್ನನ್ನು ತಾನು ಪುರುಷ ಎಂದು ಗುರುತಿಸಿಕೊಳ್ಳುತ್ತಿರುವುದರಿಂದ "ಸುಚೇತನ್" ಆಗಲು ಬಯಸಿದ್ದಾರೆ ಎಂದು ಹೇಳಲಾಗಿದೆ. ಸುಚೇತನಾ ಅವರು ಕಾನೂನು ಸಲಹೆಯನ್ನು ಪಡೆಯಲು ಪ್ರಾರಂಭಿಸಿದ್ದಾರೆ ಮತ್ತು ಕಾರ್ಯವಿಧಾನಕ್ಕೆ ಅಗತ್ಯವಿರುವ ಎಲ್ಲಾ ಪ್ರಮಾಣಪತ್ರಗಳನ್ನು ಪಡೆಯಲು ಪ್ರಾರಂಭಿಸಿದ್ದಾರೆ ಎಂದು ವರದಿಯಾಗಿದೆ.

"ನನ್ನ ಮಾಂಟೆಸ್ಸರಿ ದಿನಗಳಿಂದ, ನಾನು ನನ್ನನ್ನು ಒಬ್ಬ ಹುಡುಗ ಎಂದು ಗುರುತಿಸಿಕೊಂಡಿದ್ದೇನೆ" ಎಂದು ಸುಚೇತನಾ ಹೇಳಿದ್ದಾರೆ ಎಂದು ಟೈಮ್ಸ್ ಆಫ್ ಇಂಡಿಯಾ ಉಲ್ಲೇಖಿಸಿದೆ. ಸಮಯದೊಂದಿಗೆ ಆ ಯೋಚನೆ ಇನ್ನಷ್ಟು ಗಟ್ಟಿಯಾಗುತ್ತಾ ಹೋಯಿತು ಎಂದು ಹೇಳಿದ್ದಾರೆ.
ಮಾಜಿ ಸಿಎಂ ಮಗಳಾಗಿ ಈ ನಿರ್ಧಾರ ಕೈಗೊಳ್ಳುವ ಬಗ್ಗೆ ಕೂಡ ಅವರು ಮಾತನಾಡಿದ್ದಾರೆ. "ನನ್ನ ಪೋಷಕರ ಗುರುತು ದೊಡ್ಡ ವಿಚಾರವಲ್ಲ" ಎಂದು ಅವರು ಹೇಳಿದ್ದಾರೆ. "ನನಗೆ ಈಗ 41 ವರ್ಷ, ಆದ್ದರಿಂದ ನಾನು ಜೀನದ ಬಗ್ಗೆ ನನ್ನದೇ ಆದ ನಿರ್ಧಾರಗಳನ್ನು ತೆಗೆದುಕೊಳ್ಳುತ್ತೇನೆ. ಅದಕ್ಕಾಗಿ ಕಾನೂನು ಮತ್ತು ವೈದ್ಯಕೀಯ ಕಾರ್ಯವಿಧಾನಗಳನ್ನು ಪ್ರಾರಂಭಿಸಿದ್ದೇನೆ." ಎಂದು ಹೇಳಿದ್ದಾರೆ.
ತಪ್ಪು ಮಾಹಿತಿ ನೀಡದಂತೆ ಮನವಿ
ಇಂಡಿಯಾ ಟುಡೆಯೊಂದಿಗೆ ಮಾತನಾರುವ ಸುಚೇತನಾ, ತನ್ನ ಬಾಲ್ಯದಿಂದಲೂ ತನ್ನ ತಂದೆಗೆ ಅದರ ಬಗ್ಗೆ ತಿಳಿದಿತ್ತು. "ಇದು ನನ್ನ ವೈಯಕ್ತಿಕ ನಿರ್ಧಾರ. ಇದಕ್ಕೆ ಬೇರೆ ಯಾರೂ ಕಾರಣವಲ್ಲ, ಈ ಸುದ್ದಿಯನ್ನು ತಿರುಚಬೇಡಿ ಎಂದು ಎಲ್ಲರಿಗೂ ಮನವಿ ಮಾಡುತ್ತೇನೆ. ಇದು ನನ್ನದೇ ಹೋರಾಟ. ನಾನು ಇದನ್ನು ಏಕಾಂಗಿಯಾಗಿ ಹೋರಾಡಲು ಬಯಸುತ್ತೇನೆ. ಎಂದಿಗಿಂತಲೂ ತಡವಾಗಿದೆ. ನನ್ನ ಬಾಲ್ಯದಿಂದಲೂ ನಾನು ಈ ದೃಷ್ಟಿಕೋನವನ್ನು ಹೊಂದಿದ್ದೇನೆ. ಅನೇಕರು ಇದನ್ನು ಬೆಂಬಲಿಸಿದರು, ಮತ್ತು ಅನೇಕರು ಕೆಟ್ಟದಾಗಿ ಮಾತನಾಡಿದರು. ಮಾನಸಿಕವಾಗಿ, ನಾನು ಟ್ರಾನ್ಸ್ ಮ್ಯಾನ್, ಮತ್ತು ದೈಹಿಕವಾಗಿ, ನಾನು ಅದೇ ರೀತಿ ಇರಲು ಬಯಸುತ್ತೇನೆ," ಎಂದು ಹೇಳಿದರು.
ಸುಚೇತನಾ ಬಗ್ಗೆ ಹಲವರಿಂದ ಭಾರಿ ಮೆಚ್ಚುಗೆ
ಸಿಂಪೋಸಿಯಂನಲ್ಲಿ ಸ್ಪೀಕರ್ ಆಗಿದ್ದ ನಟಿ ಮತ್ತು ಹಕ್ಕುಗಳ ಕಾರ್ಯಕರ್ತೆ ಉಷಾಶಿ ಚಕ್ರಬಿಯೊರ್ತಿ ಐಎಎನ್ಎಸ್ ಪ್ರತಿಕ್ರಿಯೆ ನೀಡಿದ್ದು, ಅವರ ತಂದೆ ರಾಜ್ಯದ ಮಾಜಿ ಮುಖ್ಯಮಂತ್ರಿಯಾಗಿದ್ದರು, ಸುಚೇತನಾ ಅವರಂತಹವರು ಇಷ್ಟು ಧೈರ್ಯದಿಂದ ಹೊರಬಂದು ಇಂತಹ ನಿರ್ಧಾರವನ್ನು ಪ್ರಕಟಿಸುವುದು ಸುಲಭವಲ್ಲ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
"ಸುಚೇತನಾ ಅವರು ಇಟ್ಟಿರುವ ದಿಟ್ಟ ಹೆಜ್ಜೆ ಅನೇಕರನ್ನು ಹೊರಗೆ ಬಂದು ತಮ್ಮ ಭಾವನೆಗಳನ್ನು ವ್ಯಕ್ತಪಡಿಸಲು ಉತ್ತೇಜನ ನೀಡುತ್ತದೆ ಎಂದು ನಾನು ಭಾವಿಸುತ್ತೇನೆ. ಅನೇಕ ಜನರು ತೆರೆದುಕೊಳ್ಳಲು ಹೆದರುತ್ತಾರೆ, ಹೆಚ್ಚು ಜನರು ಮುಂದೆ ಬಂದರೆ, ಈ ವಿಷಯದ ಬಗ್ಗೆ ಸಾಮಾಜಿಕ ಚಳುವಳಿ ಹೆಚ್ಚು ಬಲಗೊಳ್ಳುತ್ತದೆ. ಸುಚೇತನಾ ಅವರಂತಹ ವ್ಯಕ್ತಿಗಳು ತೆಗೆದುಕೊಳ್ಳುವ ಕ್ರಮಗಳು ಖಂಡಿತವಾಗಿಯೂ ಸಮಾಜದ ಮೇಲೆ ದೊಡ್ಡ ಪರಿಣಾಮ ಬೀರುತ್ತವೆ" ಎಂದು ಹೇಳಿದ್ದಾರೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications