ಸಂಚಾರಕ್ಕೆ ಮುಕ್ತವಾದ ಸೂಯೆಜ್ ಕಾಲುವೆ; ತನಿಖೆ ಶುರು
ಕೈರೊ, ಮಾರ್ಚ್ 30: ವಿಶ್ವದ ಪ್ರಮುಖ ಜಲಮಾರ್ಗ ಈಜಿಪ್ಟ್ನ ಸೂಯೆಜ್ ಕಾಲುವೆ ಸೋಮವಾರದಿಂದ ಸಂಚಾರಕ್ಕೆ ಮುಕ್ತವಾಗಿದೆ. ಕಳೆದ ಮಂಗಳವಾರದಿಂದ ಸೂಯೆಜ್ ಕಾಲುವೆಯಲ್ಲಿ ಎವರ್ ಗ್ರೀನ್ ಬೃಹತ್ ಕಂಟೇನರ್ ಹಡಗು ಸಿಲುಕಿಕೊಂಡಿದ್ದು, ಏಳು ದಿನಗಳ ಬಳಿಕ ಆ ಹಡಗನ್ನು ಸೋಮವಾರ ತೆರವುಗೊಳಿಸಲು ಸಾಧ್ಯವಾಗಿದೆ.
ಈ ಬೆನ್ನಲ್ಲೇ ಈ ಹಡಗು ಕಾಲುವೆಯಲ್ಲಿ ಹೇಗೆ ಸಿಲುಕಿಕೊಂಡಿತು ಎಂಬ ಕುರಿತು ತಜ್ಞರು ತನಿಖೆ ನಡೆಸಲಿರುವುದಾಗಿ ತಿಳಿದುಬಂದಿದೆ.
ತಜ್ಞರು ಈ ಘಟನೆಯಿಂದ ಹಡಗಿಗೆ ಆದ ಹಾನಿಯ ಕುರಿತು ಪರಿಶೀಲನೆ ನಡೆಸುತ್ತಿದ್ದು, ಕಾಲುವೆಯಲ್ಲಿ ಹಡಗು ಸಿಲುಕಿಕೊಳ್ಳಲು ಏನು ಕಾರಣವಿರಬಹುದು ಎಂಬುದನ್ನು ಪತ್ತೆಹಚ್ಚುವಲ್ಲಿ ನಿರತರಾಗಿದ್ದಾರೆ. ಎಂಜಿನಿಯರ್ಗಳು ಹಡಗಿನ ಇಂಜಿನ್ಗಳನ್ನು ಪರೀಕ್ಷಿಸುತ್ತಿರುವುದಾಗಿ ತಿಳಿದುಬಂದಿದೆ. ಇದು ಅತಿ ವೇಗದಿಂದ ಸಂಭವಿಸಿದ ಅವಘಡವೇ, ಇನ್ನಿತರ ತಾಂತ್ರಿಕ ದೋಷದಿಂದ ಸಂಭವಿಸಿದ್ದೇ ಎಂಬುದರ ಕುರಿತು ಪರಿಶೀಲನೆ ನಡೆಯುತ್ತಿದೆ.

ಕಾಲುವೆಯಲ್ಲಿ ಹಡಗು ಸಿಲುಕಿಕೊಂಡಿದ್ದರಿಂದ ಭಾರೀ ಪ್ರಮಾಣದಲ್ಲಿ ಸಂಚಾರ ದಟ್ಟಣೆ ಉಂಟಾಗಿತ್ತು. ಈ ಮಾರ್ಗದ ಮೂಲಕ ಅನೇಕ ದೇಶಗಳಿಗೆ ಸಾಗುವ ಹಡಗುಗಳ ಸಂಚಾರ ಸ್ಥಗಿತಗೊಂಡಿತ್ತು. ವಾರದ ಬಳಿಕ ಹಡಗನ್ನು ಕೊನೆಗೂ ತೆರವುಗೊಳಿಸಲಾಗಿದೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications