Breaking: ಅಫ್ಘಾನ್ ಶಾಲೆಯಲ್ಲಿ ಆತ್ಮಹತ್ಯಾ ಬಾಂಬ್ ದಾಳಿ: 19 ಬಲಿ
ಕಾಬೂಲ್, ಸೆ. 30: ಅಫ್ಘಾನಿಸ್ತಾನ ರಾಜಧಾನಿ ನಗರಿಯಲ್ಲಿ ಶುಕ್ರವಾರ ಆತ್ಮಹತ್ಯಾ ಬಾಂಬ್ ದಾಳಿ ಘಟನೆ ಸಂಭವಿಸಿದ್ದು, ಈ ದುರಂತದಲ್ಲಿ 19 ಮಂದಿ ಬಲಿಯಾಗಿದ್ದಾರೆ ಎಂದು ಕಾಬೂಲ್ ನಗರದ ಪೊಲೀಸ್ ಇಲಾಖೆಯ ವಕ್ತಾರರೊಬ್ಬರು ಮಾಹಿತಿ ನೀಡಿದ್ಧಾರೆ.
ಕಾಬೂಲ್ನ ಶಿಯಾ ಸಮುದಾಯದವರು ಹೆಚ್ಚು ಇರುವ ದಶ್ತಿ ಬಾರ್ಚಿ ಎಂಬ ಸ್ಥಳದ ಶಾಲೆಯೊಂದರ ಬಳಿ ಶುಕ್ರವಾರ ಬೆಳಗ್ಗೆ ಪ್ರಬಲ ಬಾಂಬ್ ಸ್ಫೋಟ ಸಂಭವಿಸಿದೆ ಎಂದು ತಾಲಿಬಾನ್ ಪೊಲೀಸ್ ವಕ್ತಾರ ಖಾಲಿದ್ ಜದ್ರಾನ್ ಹೇಳಿದ್ದಾರೆ.
ಈ ದಾಳಿ ಘಟನೆಗೆ ಯಾರು ಕಾರಣ ಎಂಬುದು ಗೊತ್ತಾಗಿಲ್ಲ. ಯಾವ ಸಂಘಟನೆಯೂ ದಾಳಿಯ ಹೊಣೆ ಹೊತ್ತಿಲ್ಲ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಈ ಘಟನೆಯಲ್ಲಿ 27 ಮಂದಿ ಕೂಡ ಗಾಯಗೊಂಡಿದ್ದಾರೆ. ಸತ್ತವರಲ್ಲಿ ಬಹುತೇಕರು ವಿದ್ಯಾರ್ಥಿಗಳೇ ಆಗಿದ್ದಾರೆ.

ದಶ್ತಿ ಬಾರ್ಚಿಯಲ್ಲಿ ಈ ಹಿಂದೆಯೂ ಇಂಥ ಬಾಂಬ್ ದಾಳಿ ಘಟನೆಗಳಾಗಿದ್ದವು. ತಾಲಿಬಾನ್ ಆಡಳಿತಕ್ಕೆ ಬಂದ ಬಳಿಕ ಆಫ್ಘಾನಿಸ್ತಾನದ ವಿವಿಧೆಡೆ ಆಗಾಗ್ಗೆ ದಾಳಿಗಳಾಗುತ್ತಿವೆ. ಇಸ್ಲಾಮಿಕ್ ಸ್ಟೇಟ್ ಉಗ್ರ ಸಂಘಟನೆಯವರು ಹೆಚ್ಚಿನ ದಾಳಿ ಮಾಡಿದ್ದಾರೆ.
ದಶ್ತಿ ಬಾರ್ಚಿಯಲ್ಲಿ ಶಿಯಾ ಮುಸ್ಲಿಂ ಪಂಥಕ್ಕೆ ಸೇರಿದ ಹಜಾರ ಸಮುದಾಯದವರು ಹೆಚ್ಚಿದ್ದಾರೆ. ಇದೇ ಸಮುದಾಯವನ್ನು ಗುರಿಯಾಗಿಸಿ ಐಸಿಸ್ ಹಿಂದೆ ಕೆಲ ಬಾಂಬ್ ದಾಳಿಗಳನ್ನು ಮಾಡಿದ್ದುಂಟು.
ಅಫ್ಘಾನಿಸ್ತಾನದಲ್ಲಿ ಹಜಾರ ಸಮುದಾಯದ ಮೇಲೆ ಐಸಿಸ್ ಮಾತ್ರವಲ್ಲ, ತಾಲಿಬಾನ್ ಸಂಘಟನೆ ಕೂಡ ಗುರಿಯಾಗಿಸಿ ದಾಳಿ ಮಾಡಿದ್ದಿದೆ. ಅದರಲ್ಲೂ ದಶ್ತ್-ಎ-ಬಾರ್ಚಿ ಪ್ರದೇಶದಲ್ಲಂತೂ ಇತ್ತೀಚಿನ ವರ್ಷಗಳಲ್ಲಿ ಬಹಳ ಭೀಕರ ರಕ್ತಪಾತಗಳಾಗಿವೆ.

ತಾಲಿಬಾನ್ ಆಡಳಿತಕ್ಕೆ ಬರುವ ಮುನ್ನ ಇದೇ ದಶ್ತ್ ಎ ಬಾರ್ಚಿಯಲ್ಲಿನ ಇನ್ನೊಂದು ಶಾಲೆಯ ಮೇಲೆ ಉಗ್ರರು ದಾಳಿ ಮಾಡಿದ್ದರು. ಆ ಘಟನೆಯಲ್ಲಿ ೮೫ಕ್ಕೂ ಹೆಚ್ಚು ಮಕ್ಕಳು ಸಾವನ್ನಪ್ಪಿದ್ದರು. ಅವರಲ್ಲಿ ಹೆಚ್ಚಿನವರು ವಿದ್ಯಾರ್ಥಿನಿಯರೇ ಆಗಿದ್ದರು. ಮೂರು ಬಾಂಬ್ಗಳು ಸ್ಫೋಟಗೊಂಡು ಸಂಭವಿಸಿದ ಆ ದುರಂತದಲ್ಲಿ 300ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು.
2020ರಲ್ಲಿ ಇಸ್ಲಾಮಿಕ್ ಸ್ಟೇಟ್ ಉಗ್ರ ಸಂಘಟನೆಯು ಇದೇ ಪ್ರದೇಶದ ಬೇರೊಂದು ಶಾಲೆ ಮೇಲೆ ದಾಳಿ ಮಾಡಿ 24 ಮಕ್ಕಳನ್ನು ಕೊಂದು ಹಾಕಿತ್ತು. ಕಳೆದ ಮೂರ್ನಾಲ್ಕು ವರ್ಷದಲ್ಲಿ ದಶ್ತ್-ಎ-ಬಾರ್ಚಿಯಲ್ಲಿ ಶಾಲೆಗಳನ್ನು ಗುರಿಯಾಗಿಸಿ ಏಳೆಂಟು ಬಾರಿ ಬಾಂಬ್ ದಾಳಿಗಳಾಗಿರುವುದು ತಿಳಿದುಬಂದಿದೆ.
ಶಾಲೆಗಳೇ ಯಾಕೆ ಟಾರ್ಗೆಟ್?
ಹಿಂದೆ ಪಾಕಿಸ್ತಾನದ ಪೇಶಾವರದ ಮಿಲಿಟರಿ ಶಾಲೆಯೊಂದರಲ್ಲಿ ತಾಲಿಬಾನ್ ಉಗ್ರ ಸಂಘಟನೆಯವರು ದಾಳಿ ಮಾಡಿ ನೂರಾರು ಮಕ್ಕಳನ್ನು ಕೊಂದು ಹಾಕಿದ್ದರು. ಹೆಣ್ಮಕ್ಕಳು ಶಾಲೆಗೆ ಹೋಗಿ ಕಲಿಯುವುದನ್ನು ತಾಲಿಬಾನ್ ಹಾಗೂ ಇತರ ಉಗ್ರ ಸಂಘಟನೆಗಳು ವಿರೋಧಿಸುತ್ತವೆ. ಅಫ್ಘಾನಿಸ್ತಾನದಲ್ಲಿ ಹೆಣ್ಮಕ್ಕಳ ವಿದ್ಯಾಭ್ಯಾಸಕ್ಕೆ ಅಡಚಣೆ ಇದೆ. ಆದರೆ ಹಜಾರ ಸಮುದಾಯದವರಿರುವ ಪ್ರದೇಶಗಳಲ್ಲಿನ ಶಾಲೆಗಳಲ್ಲಿ ಹೆಣ್ಮಕ್ಕಳ ಶಿಕ್ಷಣಕ್ಕೆ ಅವಕಾಶ ಇದೆ. ಹೀಗಾಗಿ, ಅಲ್ಲಿನ ಶಾಲೆಗಳ ಮೇಲೆ ಉಗ್ರರು ಪದೇ ಪದೇ ದಾಳಿ ನಡೆಸುತ್ತಿದ್ದಾರೆ. ಬೇಲಿಯೇ ಎದ್ದು ಹೊಲ ಮೇಯ್ದಂತೆ ಆಡಳಿತಾರೂಢ ತಾಲಿಬಾನ್ ಸಂಘಟನೆಯೇ ಹಜಾರಾ ಸಮುದಾಯವನ್ನು ಗುರಿಯಾಗಿಸಿ ದಾಳಿಗಳಿಗೆ ನೆರವು ಮಾಡುತ್ತಿದೆ ಎಂಬ ಆರೋಪಗಳಿವೆ.
(ಒನ್ಇಂಡಿಯಾ ಸುದ್ದಿ)
-
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
Kiccha Sudeep: ಸುದೀಪ್ ನಂ 1 ಅಂತ ಗೂಗಲ್ನಲ್ಲಿ ಬರುತ್ತಾ, ನಟ ಆದ್ರೆ ತಲೆ ಮೇಲೆ ಕೊಂಬು ಇದ್ಯಾ: ಡಾಗ್ ಸತೀಶ್, ವೈರಲ್ ವಿಡಿಯೋ -
IMD Weather Forecast: ಭಾರತ vs ನ್ಯೂಜಿಲೆಂಡ್ ಟಿ20 ವಿಶ್ವಕಪ್ ಫೈನಲ್: ಅಹಮದಾಬಾದ್ನಲ್ಲಿ ಹವಾಮಾನ ಹೇಗಿದೆ, ಮಳೆ ಭೀತಿ ಇದೆಯೇ -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು












Click it and Unblock the Notifications