Sunita Williams: ಭೂಮಿ ಕಡೆಗೆ ಪ್ರಯಾಣ ಆರಂಭಿಸಿದ ಸುನಿತಾ ವಿಲಿಯಮ್ಸ್
ಭಾರತ ಮೂಲದ ನಾಸಾ ವಿಜ್ಞಾನಿ ಸುನಿತಾ ವಿಲಿಯಮ್ಸ್ ಇದೀಗ ತಮ್ಮ ಮಹತ್ವದ ಪ್ರಯಾಣ ಆರಂಭಿಸಿದ್ದಾರೆ. ಸುನಿತಾ ವಿಲಿಯಮ್ಸ್ & ಬುಚ್ ವಿಲ್ಮೋರ್ ಭೂಮಿಗೆ ಬಂದು ಇಳಿಯಲು ಇದೀಗ ಕ್ಷಣಗಣನೆ ಆರಂಭವಾಗಿದ್ದು, ನಾಸಾ ಸಂಸ್ಥೆ ಇದಕ್ಕೆ ಬೇಕಾದ ಎಲ್ಲಾ ತಯಾರಿಗಳನ್ನು ಮಾಡಿಕೊಂಡಿದೆ. ಸತತ 9 ತಿಂಗಳ ಕಾಲ ಸುನಿತಾ ವಿಲಿಯಮ್ಸ್ & ಬುಚ್ ವಿಲ್ಮೋರ್ ಅವರು ಬಾಹ್ಯಾಕಾಶದಲ್ಲಿ ಸಿಲುಕಿ ಒದ್ದಾಡಿದ್ದರು. ಆದರೆ ಇದೀಗ ಅವರ ಬಾಹ್ಯಾಕಾಶ ವಾಸ ಮುಗಿದು ಭೂಮಿಗೆ ಇಳಿಯಲು ಕೌಂಟ್ಡೌನ್ ಶುರುವಾಗಿದೆ.
ಅಂತಾರಾಷ್ಟ್ರೀಯ ಬಾಹ್ಯಾಕಾಶ ಕೇಂದ್ರದಿಂದ ಹೊರಟು, ಸ್ಪೇಸ್ಎಕ್ಸ್ ಕ್ರ್ಯೂ-9 ನೌಕೆ ಮೂಲಕ ಸುನಿತಾ ವಿಲಿಯಮ್ಸ್ & ಬುಚ್ ವಿಲ್ಮೋರ್ ತಮ್ಮ ಪ್ರಯಾಣ ಆರಂಭಿಸಿದ್ದಾರೆ. ಹಲವಾರು ಪ್ರಯೋಗಗಳ ನಂತರ, ಪರಿಸ್ಥಿತಿ ಅಳೆದು & ತೂಗಿ ನಾಸಾ ಸಂಸ್ಥೆ ವಿಜ್ಞಾನಿಗಳನ್ನು ಭೂಮಿಗೆ ಕರೆಸಿಕೊಳ್ಳುತ್ತಿದೆ. ಸುನಿತಾ ವಿಲಿಯಮ್ಸ್ ನಾಸಾ ಸಂಸ್ಥೆಯ ಅತ್ಯಂತ ಹಿರಿಯ ವಿಜ್ಞಾನಿಯೂ ಆಗಿದ್ದು, ಸುನಿತಾ ವಿಲಿಯಮ್ಸ್ ಬಾಹ್ಯಾಕಾಶದಲ್ಲಿ ಸಂಕಷ್ಟಕ್ಕೆ ಸಿಲುಕಿದ ಸುದ್ದಿ ಸಿಕ್ಕಾಪಟ್ಟೆ ಭಯ ಹುಟ್ಟಿಸಿತ್ತು. ಆದರೆ ಇದೀಗ ಬಾಹ್ಯಾಕಾಶದ ವಾತಾವರಣ ಕೂಡ ವಿಜ್ಞಾನಿಗಳ ಎಂಟ್ರಿಗೆ ಪೂರಕವಾಗಿದ್ದು, ಪ್ರಯಾಣ ಆರಂಭಿಸಿದ್ದಾರೆ.

ಭೂಮಿಯಲ್ಲಿ ಕಾಯುತ್ತಿರುವ ಸ್ನೇಹಿತರು!
ಸುನಿತಾ ವಿಲಿಯಮ್ಸ್ & ಬುಚ್ ವಿಲ್ಮೋರ್ ಭೂಮಿಗೆ ಬರುತ್ತಿರುವ ಸುದ್ದಿ ಕೇಳುತ್ತಿದ್ದಂತೆಯೇ ಸಂಭ್ರಮದ ವಾತಾವರಣ ನಿರ್ಮಾಣ ಆಗಿದೆ. ಅಮೆರಿಕದಲ್ಲಿ ಸುನಿತಾ ವಿಲಿಯಮ್ಸ್ & ಬುಚ್ ವಿಲ್ಮೋರ್ ಸ್ವಾಗತಕ್ಕೆ ಬೇಕಾದ ಎಲ್ಲಾ ಸಿದ್ಧತೆ ಮಾಡಿಕೊಂಡಿದ್ದಾರೆ ವಿಜ್ಞಾನಿಗಳು. ಅಲ್ಲದೆ ಸುನಿತಾ ವಿಲಿಯಮ್ಸ್ ಅವರ ಸ್ನೇಹಿತರು ಉಸಿರು ಬಿಗಿ ಹಿಡಿದುಕೊಂಡು ಕಾಯುತ್ತಿದ್ದಾರೆ. ಆ ಮೂಲಕ ಬರೋಬ್ಬರಿ ಮುಕ್ಕಾಲು ವರ್ಷಗಳ ನಂತರ, ಅಂದರೆ 9 ತಿಂಗಳ ನಂತರ ಸುನಿತಾ ವಿಲಿಯಮ್ಸ್ ಅವರ ಕುಟುಂಬ ಮತ್ತು ಸ್ನೇಹಿತರು ಭೂಮಿ ಮೇಲೆ ಅವರನ್ನು ಭೇಟಿ ಮಾಡ್ತಾ ಇದ್ದಾರೆ.
ಬಾಹ್ಯಾಕಾಶ ಇತಿಹಾಸದಲ್ಲಿ ಹೊಸ ಯುಗ!
ಅಮೆರಿಕದ ನಾಸಾ ಸಂಸ್ಥೆ ಇದೀಗ ಕೈಗೊಂಡಿರುವ ಪ್ರಯೋಗವು ಬಾಹ್ಯಾಕಾಶ ಇತಿಹಾಸದಲ್ಲೇ ಹೊಸ ಯುಗ ಎಂದು ಬಣ್ಣಿಸಲಾಗುತ್ತಿದೆ. ಏಕೆಂದರೆ ಖಾಸಗಿ ಬಾಹ್ಯಾಕಾಶ ಸಂಸ್ಥೆ ಸಹಾಯ ಪಡೆದು ಈ ರೀತಿ ವಿಜ್ಞಾನಿಗಳನ್ನು ರಕ್ಷಣೆ ಮಾಡುತ್ತಿರುವುದು ಗಮನ ಸೆಳೆದಿದೆ. ಹೀಗಿದ್ದಾಗ ಭವಿಷ್ಯದಲ್ಲಿ ಇದು ಬಾಹ್ಯಾಕಾಶದ ಅಧ್ಯಯನಕ್ಕೆ ಇನ್ನಷ್ಟು ಸಹಾಯ ಮಾಡುವ ಬಗ್ಗೆಯೂ ನಿರೀಕ್ಷೆ ಹುಟ್ಟುಹಾಕಿದೆ. ಭಾರತ ಮೂಲದ ನಂಟು ಹೊಂದಿದ ಸುನಿತಾ ವಿಲಿಯಮ್ಸ್ ಅವರು ಕೆಲವು ವರ್ಷಗಳ ಹಿಂದೆ ಭಾರತಕ್ಕೆ ಬಂದಿದ್ದರು. ಅಲ್ಲದೆ ತಾಜ್ಮಹಲ್ ಎದುರಲ್ಲೇ ಕೂತು ಫೋಟೋ ತೆಗೆಸಿಕೊಂಡು ಗಮನ ಸೆಳೆದಿದ್ದರು.
-
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್












Click it and Unblock the Notifications