Sunita Williams: ಭೂಮಿ ಕಡೆಗೆ ಪ್ರಯಾಣ ಆರಂಭಿಸಿದ ಸುನಿತಾ ವಿಲಿಯಮ್ಸ್
ಭಾರತ ಮೂಲದ ನಾಸಾ ವಿಜ್ಞಾನಿ ಸುನಿತಾ ವಿಲಿಯಮ್ಸ್ ಇದೀಗ ತಮ್ಮ ಮಹತ್ವದ ಪ್ರಯಾಣ ಆರಂಭಿಸಿದ್ದಾರೆ. ಸುನಿತಾ ವಿಲಿಯಮ್ಸ್ & ಬುಚ್ ವಿಲ್ಮೋರ್ ಭೂಮಿಗೆ ಬಂದು ಇಳಿಯಲು ಇದೀಗ ಕ್ಷಣಗಣನೆ ಆರಂಭವಾಗಿದ್ದು, ನಾಸಾ ಸಂಸ್ಥೆ ಇದಕ್ಕೆ ಬೇಕಾದ ಎಲ್ಲಾ ತಯಾರಿಗಳನ್ನು ಮಾಡಿಕೊಂಡಿದೆ. ಸತತ 9 ತಿಂಗಳ ಕಾಲ ಸುನಿತಾ ವಿಲಿಯಮ್ಸ್ & ಬುಚ್ ವಿಲ್ಮೋರ್ ಅವರು ಬಾಹ್ಯಾಕಾಶದಲ್ಲಿ ಸಿಲುಕಿ ಒದ್ದಾಡಿದ್ದರು. ಆದರೆ ಇದೀಗ ಅವರ ಬಾಹ್ಯಾಕಾಶ ವಾಸ ಮುಗಿದು ಭೂಮಿಗೆ ಇಳಿಯಲು ಕೌಂಟ್ಡೌನ್ ಶುರುವಾಗಿದೆ.
ಅಂತಾರಾಷ್ಟ್ರೀಯ ಬಾಹ್ಯಾಕಾಶ ಕೇಂದ್ರದಿಂದ ಹೊರಟು, ಸ್ಪೇಸ್ಎಕ್ಸ್ ಕ್ರ್ಯೂ-9 ನೌಕೆ ಮೂಲಕ ಸುನಿತಾ ವಿಲಿಯಮ್ಸ್ & ಬುಚ್ ವಿಲ್ಮೋರ್ ತಮ್ಮ ಪ್ರಯಾಣ ಆರಂಭಿಸಿದ್ದಾರೆ. ಹಲವಾರು ಪ್ರಯೋಗಗಳ ನಂತರ, ಪರಿಸ್ಥಿತಿ ಅಳೆದು & ತೂಗಿ ನಾಸಾ ಸಂಸ್ಥೆ ವಿಜ್ಞಾನಿಗಳನ್ನು ಭೂಮಿಗೆ ಕರೆಸಿಕೊಳ್ಳುತ್ತಿದೆ. ಸುನಿತಾ ವಿಲಿಯಮ್ಸ್ ನಾಸಾ ಸಂಸ್ಥೆಯ ಅತ್ಯಂತ ಹಿರಿಯ ವಿಜ್ಞಾನಿಯೂ ಆಗಿದ್ದು, ಸುನಿತಾ ವಿಲಿಯಮ್ಸ್ ಬಾಹ್ಯಾಕಾಶದಲ್ಲಿ ಸಂಕಷ್ಟಕ್ಕೆ ಸಿಲುಕಿದ ಸುದ್ದಿ ಸಿಕ್ಕಾಪಟ್ಟೆ ಭಯ ಹುಟ್ಟಿಸಿತ್ತು. ಆದರೆ ಇದೀಗ ಬಾಹ್ಯಾಕಾಶದ ವಾತಾವರಣ ಕೂಡ ವಿಜ್ಞಾನಿಗಳ ಎಂಟ್ರಿಗೆ ಪೂರಕವಾಗಿದ್ದು, ಪ್ರಯಾಣ ಆರಂಭಿಸಿದ್ದಾರೆ.

ಭೂಮಿಯಲ್ಲಿ ಕಾಯುತ್ತಿರುವ ಸ್ನೇಹಿತರು!
ಸುನಿತಾ ವಿಲಿಯಮ್ಸ್ & ಬುಚ್ ವಿಲ್ಮೋರ್ ಭೂಮಿಗೆ ಬರುತ್ತಿರುವ ಸುದ್ದಿ ಕೇಳುತ್ತಿದ್ದಂತೆಯೇ ಸಂಭ್ರಮದ ವಾತಾವರಣ ನಿರ್ಮಾಣ ಆಗಿದೆ. ಅಮೆರಿಕದಲ್ಲಿ ಸುನಿತಾ ವಿಲಿಯಮ್ಸ್ & ಬುಚ್ ವಿಲ್ಮೋರ್ ಸ್ವಾಗತಕ್ಕೆ ಬೇಕಾದ ಎಲ್ಲಾ ಸಿದ್ಧತೆ ಮಾಡಿಕೊಂಡಿದ್ದಾರೆ ವಿಜ್ಞಾನಿಗಳು. ಅಲ್ಲದೆ ಸುನಿತಾ ವಿಲಿಯಮ್ಸ್ ಅವರ ಸ್ನೇಹಿತರು ಉಸಿರು ಬಿಗಿ ಹಿಡಿದುಕೊಂಡು ಕಾಯುತ್ತಿದ್ದಾರೆ. ಆ ಮೂಲಕ ಬರೋಬ್ಬರಿ ಮುಕ್ಕಾಲು ವರ್ಷಗಳ ನಂತರ, ಅಂದರೆ 9 ತಿಂಗಳ ನಂತರ ಸುನಿತಾ ವಿಲಿಯಮ್ಸ್ ಅವರ ಕುಟುಂಬ ಮತ್ತು ಸ್ನೇಹಿತರು ಭೂಮಿ ಮೇಲೆ ಅವರನ್ನು ಭೇಟಿ ಮಾಡ್ತಾ ಇದ್ದಾರೆ.
ಬಾಹ್ಯಾಕಾಶ ಇತಿಹಾಸದಲ್ಲಿ ಹೊಸ ಯುಗ!
ಅಮೆರಿಕದ ನಾಸಾ ಸಂಸ್ಥೆ ಇದೀಗ ಕೈಗೊಂಡಿರುವ ಪ್ರಯೋಗವು ಬಾಹ್ಯಾಕಾಶ ಇತಿಹಾಸದಲ್ಲೇ ಹೊಸ ಯುಗ ಎಂದು ಬಣ್ಣಿಸಲಾಗುತ್ತಿದೆ. ಏಕೆಂದರೆ ಖಾಸಗಿ ಬಾಹ್ಯಾಕಾಶ ಸಂಸ್ಥೆ ಸಹಾಯ ಪಡೆದು ಈ ರೀತಿ ವಿಜ್ಞಾನಿಗಳನ್ನು ರಕ್ಷಣೆ ಮಾಡುತ್ತಿರುವುದು ಗಮನ ಸೆಳೆದಿದೆ. ಹೀಗಿದ್ದಾಗ ಭವಿಷ್ಯದಲ್ಲಿ ಇದು ಬಾಹ್ಯಾಕಾಶದ ಅಧ್ಯಯನಕ್ಕೆ ಇನ್ನಷ್ಟು ಸಹಾಯ ಮಾಡುವ ಬಗ್ಗೆಯೂ ನಿರೀಕ್ಷೆ ಹುಟ್ಟುಹಾಕಿದೆ. ಭಾರತ ಮೂಲದ ನಂಟು ಹೊಂದಿದ ಸುನಿತಾ ವಿಲಿಯಮ್ಸ್ ಅವರು ಕೆಲವು ವರ್ಷಗಳ ಹಿಂದೆ ಭಾರತಕ್ಕೆ ಬಂದಿದ್ದರು. ಅಲ್ಲದೆ ತಾಜ್ಮಹಲ್ ಎದುರಲ್ಲೇ ಕೂತು ಫೋಟೋ ತೆಗೆಸಿಕೊಂಡು ಗಮನ ಸೆಳೆದಿದ್ದರು.
-
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ












Click it and Unblock the Notifications