Sunita Williams: ಸುನಿತಾ ವಿಲಿಯಮ್ಸ್ ಭೂಮಿಗೆ, 9 ತಿಂಗಳ ಬಾಹ್ಯಾಕಾಶ ಬಂಧನ ಅಂತ್ಯ!
ಸುನಿತಾ ವಿಲಿಯಮ್ಸ್ ಅವರು ಅಂತಿಮವಾಗಿ ಭೂಮಿಗೆ ಬಂದು ಇಳಿದಿದ್ದಾರೆ, ಈ ಮೂಲಕ ಬರೋಬ್ಬರಿ 9 ತಿಂಗಳ ಬಾಹ್ಯಾಕಾಶ ಬಂಧನ ಅಂತ್ಯವಾಗಿದೆ. ಸುನಿತಾ ವಿಲಿಯಮ್ಸ್ ಅಭಿಮಾನಿ ಬಳಗ ಕುಣಿದಾಡಿದ್ದು, ಅತ್ಯಂತ ಸುರಕ್ಷಿತವಾಗಿ ನಾಸಾ ಸಂಸ್ಥೆಯ ಪ್ಲಾನ್ ಪ್ರಕಾರವೇ ಎಲ್ಲಾ ನಡೆದು ಹೋಗಿದೆ. ಸುನಿತಾ ವಿಲಿಯಮ್ಸ್ ಸೇರಿದಂತೆ ಮತ್ತಿತರರು ಕೂತಿದ್ದ ಬಾಹ್ಯಾಕಾಶದ ನೌಕೆ ಭೂಮಿಗೆ ಹತ್ತಿರ ಆಗುತ್ತಿದ್ದಂತೆ ಭಯ ಕೂಡ ಹೆಚ್ಚಾಗಿತ್ತು. ಏಕೆಂದರೆ ಭೂಮಿ ಗುರುತ್ವದ ಜೊತೆಗೆ ಸಂಘರ್ಷ ಹೆಚ್ಚಾಗಿ ಬೆಂಕಿ ಹೊತ್ತಿಕೊಳ್ಳುವ ಭಯ ಕಾಡಿತ್ತು.
ನಾಸಾ ವಿಜ್ಞಾನಿ ಸುನಿತಾ ವಿಲಿಯಮ್ಸ್ & ಬುಚ್ ವಿಲ್ಮೋರ್ ದೊಡ್ಡ ಸಂಷಕ್ಟಕ್ಕೆ ಸಿಲುಕಿದ್ದರು. ಸುನಿತಾ ವಿಲಿಯಮ್ಸ್ & ಬುಚ್ ವಿಲ್ಮೋರ್ ಒಟ್ಟಾಗಿ 2024ರ ಜೂನ್ 5 ರಂದು ಬೋಯಿಂಗ್ ಸ್ಟಾರ್ಲೈನರ್ ಬಾಹ್ಯಾಕಾಶ ನೌಕೆಯಲ್ಲಿ ಗಗನಕ್ಕೆ ಹಾರಿದ್ದರು. ಕೇವಲ 8 ದಿನಗಳ ಕಾಲ ಅಲ್ಲಿ ಉಳಿದು, ಕಾರ್ಯಾಚರಣೆ ನಡೆಸಲು ಪ್ಲಾನ್ ಮಾಡಲಾಗಿತ್ತು.

ಆದರೆ ದಿಢಿರ್ ಅಂತಾ ತಾಂತ್ರಿಕ ಸಮಸ್ಯೆ ಎದುರಾಗಿ ಗಗನಯಾತ್ರಿಗಳನ್ನ ಬಾಹ್ಯಾಕಾಶದಲ್ಲಿಯೇ ಬಿಟ್ಟು ಸ್ಟಾರ್ಲೈನರ್ ಭೂಮಿಗೆ ಮರಳಿ ಬಂದಿತ್ತು. ಹೀಗಾಗಿ ಕಳೆದ 9 ತಿಂಗಳಿಂದ ಅಲ್ಲಿಯೇ ಸಿಲುಕಿ ಒದ್ದಾಡಿದ್ದರು. ಆದರೆ, ಇದೀಗ ಎಲ್ಲಾ ಸಂಕಷ್ಟಗಳು ದೂರವಾಗಿವೆ. ನಾಸಾ ಸಂಸ್ಥೆ ಜೊತೆಗೆ ಸ್ಪೇಸ್ ಎಕ್ಸ್ ಕೂಡ ಸಾಥ್ ನೀಡಿ ಇದೀಗ ಸಮಸ್ಯೆ ಸರಿ ಮಾಡಿದೆ. ವಿಜ್ಞಾನಿಗಳನ್ನ ಇದೀಗ ಭೂಮಿಗೆ ಯಶಸ್ವಿಯಾಗಿ ಕರೆದುಕೊಂಡು ಬರಲಾಗಿದೆ.
ಭೂಮಿಗೆ ಬಂದ ಸುನಿತಾ ವಿಲಿಯಮ್ಸ್!
ಅಂದಹಾಗೆ ಸುನಿತಾ ವಿಲಿಯಮ್ಸ್ ಅವರು ಭೂಮಿಗೆ ಬರುತ್ತಿದ್ದಂತೆ ನಾಸಾ ಸಂಸ್ಥೆ ವಿಜ್ಞಾನಿ ಬಳಗ ಕುಣಿದಾಡಿತು. ಹಾಗೇ ಸುನಿತಾ ವಿಲಿಯಮ್ಸ್ ಅವರ ಅಭಿಮಾನಿಗಳು ಕೂಡ ಸಿಹಿಸುದ್ದಿ ಕೇಳಿ ಸಂಭ್ರಮಿಸಿದ್ದಾರೆ. ಹಾಗೇ ಇನ್ನೂ ಹಲವು ದಿನಗಳ ಕಾಲ ಸುನಿತಾ ವಿಲಿಯಮ್ಸ್ ಅವರು ಕ್ವಾರಂಟೈನ್ಗೆ ಒಳಪಡಲಿದ್ದು, ಆ ನಂತರ ಅವರು ಮುಕ್ತವಾಗಿ ಹೊರಗೆ ಓಡಾಡಲಿದ್ದಾರೆ. ಹಲವು ತಿಂಗಳ ಕಾಲ ಬಾಹ್ಯಾಕಾಶದಲ್ಲಿ ಇದ್ದ ಕಾರಣಕ್ಕೆ ಅವರಿಗೆ ಚಿಕಿತ್ಸೆ ಅಗತ್ಯತೆ ಇದ್ದು, ಇದಕ್ಕೆ ಬೇಕಾದ ವ್ಯವಸ್ಥೆ ಮಾಡಲಾಗಿದೆ.
ಬಾಹ್ಯಾಕಾಶದಲ್ಲೇ ಬಿಟ್ಟು ಭೂಮಿಗೆ ಬಂದಿದ್ದರು!
ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ ವಿಜ್ಞಾನಿಗಳು ಅಧ್ಯಯನ ನಡೆಸುತ್ತಾರೆ. ಆ ಮೂಲಕ ಮನುಷ್ಯರ ಭವಿಷ್ಯಕ್ಕಾಗಿ ಪ್ರತಿದಿನವೂ ಹೊಸ ಹೊಸ ಅಧ್ಯಯನ ನಡೆಯುತ್ತಲೇ ಇರುತ್ತವೆ. ಹೀಗಿದ್ದಾಗ ಭೂಮಿ ಮೇಲಿಂದ ಆಗಾಗ ಬಾಹ್ಯಾಕಾಶ ವಿಜ್ಞಾನಿಗಳನ್ನು ಆಕಾಶಕ್ಕೆ ಕಳುಹಿಸುತ್ತದೆ ನಾಸಾ ಸಂಸ್ಥೆ. ಅದೇ ರೀತಿ ಭಾರತ ಮೂಲದ ಸುನಿತಾ ವಿಲಿಯಮ್ಸ್ ಅವರನ್ನ ಕೂಡ ನಾಸಾ ಸಂಸ್ಥೆ ಬಾಹ್ಯಾಕಾಶಕ್ಕೆ ಕಳುಹಿಸಿತ್ತು. ಅಂತಿಮವಾಗಿ ಸುನಿತಾ ವಿಲಿಯಮ್ಸ್ರ ಸುರಕ್ಷತೆ ದೃಷ್ಟಿಯಿಂದ ಬಾಹ್ಯಾಕಾಶ ನಿಲ್ದಾಣದಲ್ಲೇ ಬಿಟ್ಟು ಬರಲಾಗಿತ್ತು. ಆದರೆ ಇದೀಗ ಅಂತಿಮವಾಗಿ ಅವರನ್ನು ಭೂಮಿಗೆ ಕರೆದುಕೊಂಡು ಬರಲಾಗಿದೆ.
-
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್












Click it and Unblock the Notifications