ಸರ್ಜಿಕಲ್ ದಾಳಿ ಆತ್ಮರಕ್ಷಣೆಗಾಗಿ ಮಾಡಿದ್ದು: ವಿಶ್ವಸಂಸ್ಥೆಯಲ್ಲಿ ಭಾರತ ಹೇಳಿಕೆ
ವಿಶ್ವಸಂಸ್ಥೆ, ಫೆಬ್ರವರಿ 25: ಗಡಿ ಭಾಗದಲ್ಲಿ ಭಯೋತ್ಪಾದಕರು ನೆಲೆಯೂರಲು ಪಾಕಿಸ್ತಾನವು ನೆರವು ನೀಡುತ್ತಿದ್ದು, ಗಡಿಯಾಚೆಗಿನ ತನ್ನ ದಾಳಿಗಳು ಆತ್ಮರಕ್ಷಣೆಯ ಕ್ರಮವಷ್ಟೇ ಎಂದು ವಿಶ್ವಸಂಸ್ಥೆಯಲ್ಲಿ ಭಾರತ ಹೇಳಿದೆ.
ಮೆಕ್ಸಿಕೋ ಆಯೋಜಿಸಿದ್ದ 'ವಿಶ್ವಸಂಸ್ಥೆ ರಚನೆಯ ಸಮಗ್ರ ಭದ್ರತಾ ವ್ಯವಸ್ಥೆಯನ್ನು ಎತ್ತಿಹಿಡಿಯುವುದು: ಅಂತಾರಾಷ್ಟ್ರೀಯ ಕಾನೂನಿನ ಬಳಕೆ, ವಿದೇಶಗಳಲ್ಲಿನ ಹಸ್ತಕ್ಷೇಪ ಮತ್ತು ಕಾನೂನಾತ್ಮಕ ಆತ್ಮ ರಕ್ಷಣೆ' ಕುರಿತಾದ ಅರ್ರಿಯಾ ಫಾರ್ಮುಲಾ ಸಭೆಯಲ್ಲಿ ಭಾರತ ಈ ಹೇಳಿಕೆ ನೀಡಿದೆ.
'ಮೂರನೇ ದೇಶದಲ್ಲಿ ಕಾರ್ಯನಿರ್ವಹಣೆ ಮಾಡುತ್ತಿರುವ ಅನ್ಯಶಕ್ತಿಗಳಿಂದ ದೊಡ್ಡ ಪ್ರಮಾಣದಲ್ಲಿ ಸಶಸ್ತ್ರ ದಾಳಿ ನಡೆದ ಸಂದರ್ಭದಲ್ಲಿ ಪೂರ್ವಭಾವಿ ದಾಳಿಗಳನ್ನು ನಡೆಸುವುದು ಇನ್ನೊಂದು ದೇಶಕ್ಕೆ ಅನಿವಾರ್ಯವಾಗುತ್ತದೆ' ಎಂದು ವಿಶ್ವಸಂಸ್ಥೆಯಲ್ಲಿನ ಭಾರತದ ಉಪ ಕಾಯಂ ಪ್ರತಿನಿಧಿ ನಾಗರಾಜ್ ನಾಯ್ಡು ಪಾಕಿಸ್ತಾನದ ಹೆಸರನ್ನು ಉಲ್ಲೇಖಿಸದೆಯೇ ಹೇಳಿದರು.

'ಕೆಲವು ದೇಶಗಳು ಅಂತಾರಾಷ್ಟ್ರೀಯ ನಿಗಾವಣೆಗಳಿಂದ ತಪ್ಪಿಸಿಕೊಳ್ಳಲು ಭಯೋತ್ಪಾದನಾ ಗುಂಪುಗಳಂತಹ ಅನ್ಯ ಶಕ್ತಿಗಳಿಗೆ ಬೆಂಬಲ ನೀಡುವ ಮೂಲಕ ಪರೋಕ್ಷ ಯುದ್ಧ ನಡೆಸುತ್ತಿವೆ. ಅಂತಹ ಭಯೋತ್ಪಾದನಾ ಗುಂಪುಗಳಿಗೆ ತರಬೇತಿ ನೀಡುವುದು, ಹಣಕಾಸಿನ ಸವಲತ್ತು ಒದಗಿಸುವುದು, ಬೇಹುಗಾರಿಕೆ, ಶಸ್ತ್ರಾಸ್ತ್ರಗಳ ಪೂರೈಕೆ ಮತ್ತು ನೇಮಕಾತಿ ಸೌಲಭ್ಯಗಳನ್ನು ಒದಗಿಸುವುದು ಮುಂತಾದ ಅನೇಕ ಸಹಾಯಗಳನ್ನು ನೀಡುತ್ತವೆ' ಎಂದು ಪಾಕಿಸ್ತಾನದ ವಿರುದ್ಧ ವಾಗ್ದಾಳಿ ನಡೆಸಿದರು.
-
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು? -
Gold Price: ಯುಗಾದಿಗೆ ಚಿನ್ನಪ್ರಿಯರಿಗೆ ಶುಭ ಸುದ್ದಿ: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಬೆಳ್ಳಿ ದರ 15,000 ರೂ.ಕುಸಿತ -
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಹಂಚಿಕೆ ಪ್ರಕರಣ: 13,712 ಪುಟಗಳ ಚಾರ್ಜ್ಶೀಟ್ ಸಲ್ಲಿಸಿದ ಎಸ್ಐಟಿ -
Gold Price Today: ಯುಗಾದಿಗೂ ಮೊದಲೇ ಚಿನ್ನದ ದರದಲ್ಲಿ ಭಾರೀ ಇಳಿಕೆ; ಆಭರಣ ಪ್ರಿಯರಿಗೆ ಇಂದೇ ಹಬ್ಬ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ












Click it and Unblock the Notifications